Homeಕರೋನಾ ತಲ್ಲಣದೇಶಾದ್ಯಂತ ನ್ಯಾಯಯುತ ಆಧಾರದಲ್ಲಿ ಆಕ್ಸಿಜನ್ ವಿತರಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ

ದೇಶಾದ್ಯಂತ ನ್ಯಾಯಯುತ ಆಧಾರದಲ್ಲಿ ಆಕ್ಸಿಜನ್ ವಿತರಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ

- Advertisement -
- Advertisement -

ದೇಶದಲ್ಲಿ ಉಂಟಾಗಿರುವ ಆಕ್ಸಿಜನ್ ಸಮಸ್ಯೆಯನ್ನು ಬಗೆಹರಿಸುವ ದೃಷ್ಟಿಯಿಂದ ದೇಶಾದ್ಯಂತ ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ವಿತರಣೆಯನ್ನು ವೈಜ್ಞಾನಿಕ, ತರ್ಕಬದ್ಧ ಮತ್ತು ನ್ಯಾಯಯುತ ಆಧಾರದ ಮೇಲೆ ನಿರ್ಣಯಿಸಲು ಸುಪ್ರೀಂ ಕೋರ್ಟ್ 12 ಸದಸ್ಯರ ಟಾಸ್ಕ್‌ ಫೋರ್ಸ್ ಅನ್ನು ರಚಿಸಿದೆ.

ದೇಶದ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಟಾಸ್ಕ್‌ ಫೋರ್ಸಿನ ನಿರ್ದೇಶನಗಳು ಅನ್ವಯವಾಗಲಿವೆ. ಅಲ್ಲದೇ COVID-19 ಗೆ ಚಿಕಿತ್ಸೆ ನೀಡಲು ಅಗತ್ಯವಾದ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಈ ಟಾಸ್ಕ್ ಫೋರ್ಸ್ ನಿರ್ದೇಶಲಿದೆ. ಅದಕ್ಕೆ ಬೇಕಾದ ಸಂಪನ್ಮೂಲಗಳನ್ನು ಬಳಸಲು ಕೇಂದ್ರವು ಎಲ್ಲಾ ಸಹಕಾರಗಳನ್ನು ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.‌

“ವೈಜ್ಞಾನಿಕ ಮತ್ತು ವಿಶೇಷ ಡೊಮೇನ್ ಜ್ಞಾನದ ಆಧಾರದ ಮೇಲೆ ಸಾಂಕ್ರಾಮಿಕ ರೋಗಕ್ಕೆ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯನ್ನು ಸುಲಭಗೊಳಿಸಲು ರಾಷ್ಟ್ರೀಯ ಮಟ್ಟದಲ್ಲಿ ಈ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ದೇಶದ ಪ್ರಮುಖ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಈ ತಂಡದೊಂದಿಗೆ ಸಹಕರಿಸುತ್ತಾರೆ. ಇದು ಈ ಮಾನವೀಯ ಬಿಕ್ಕಟ್ಟನ್ನು ಎದುರಿಸಲು ವೈಜ್ಞಾನಿಕ ಕಾರ್ಯತಂತ್ರಗಳನ್ನು ರೂಪಿಸಲು ಅನುಕೂಲವಾಗಲಿದೆ” ಎಂದು ನ್ಯಾಯಾಲಯವು ತನ್ನ ಅಂತಿಮ ಆದೇಶದಲ್ಲಿ ತಿಳಿಸಿದೆ.

ಸುಪ್ರೀಂ ನೇಮಿಸಿದ ಟಾಸ್ಕ್‌ ಪೋರ್ಸ್‌ನಲ್ಲಿ ಪಶ್ಚಿಮ ಬಂಗಾಲ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಬಾಬತೋಷ್ ಬಿಸ್ವಾಸ್, ಗಂಗಾರಾಮ್ ಆಸ್ಪತ್ರೆ ನವದೆಹಲಿಯ ಮುಖ್ಯಾಧಿಕಾರಿ ದೇವೇಂದ್ರ ಸಿಂಗ್ ರಾಣಾ, ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ, ತಮಿಳುನಾಡಿನ ವೆಳ್ಳೂರಿನ ಕ್ರಿಸ್ತಿಯನ್ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ. ಗಗನ್ ದೀಪ್ ಕಾಂಗ್, ಅದೇ ಕಾಲೇಜಿನ ನಿರ್ದೇಶಕ ಡಾ. ಜೆ ವಿ ಪೀಟರ್, ಮುಂಬಯಿಯ ಹಿಂದೂಜಾ ಮತ್ತು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಜ಼ರೀರ್ ಎಫ್ ಉದ್ವಾಡಿಯಾ, ಮತ್ತು ಕೇಂದ್ರ ಸರಕಾರದ ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮುಂತಾದವರು ಇದ್ದಾರೆ.

“ಈ ಸಮಸ್ಯೆಯನ್ನು ನಾವು ದೇಶವ್ಯಾಪಿಯಾಗಿ ನೋಡಬೇಕಾಗಿದೆ… ಆಮ್ಲಜನಕದ ಸ್ಟಾಕ್ ಬಿಡುಗಡೆ ಮಾಡಿದ ನಂತರ ಸರ್ಕಾರದ ಹೊಣೆಗಾರಿಕೆ ಏನು? ಆಮ್ಲಜನಕದ ಲೆಕ್ಕಪರಿಶೋಧನೆ ಅಗತ್ಯ” ಎಂದು ನ್ಯಾಯಾಲಯ ಕೇಳಿದೆ.

ಆಮ್ಲಜನಕ, ಔಷಧಿಗಳು ಮತ್ತು ಆಸ್ಪತ್ರೆಯ ಹಾಸಿಗೆಗಳಲ್ಲಿನ ತೀವ್ರ ಕೊರತೆಯನ್ನು ಇನ್ನಷ್ಟು ಹದಗೆಡಿಸುವಂತಹ ಮೂರನೇ ಕೋವಿಡ್ ಅಲೆಗೆ ಕೇಂದ್ರವು ಸಿದ್ಧತೆ ನಡೆಸುತ್ತಿದೆಯೇ ಎಂದು ತಿಳಿಯಲು ಬಯಸಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ಎಂ.ಆರ್ ಶಾರವರಿದ್ದ ಪೀಠ ಈ ತೀರ್ಪು ನೀಡಿದ್ದು ಒಂದು ವಾರದಲ್ಲಿ ಟಾಸ್ಕ್ ಫೋರ್ಸ್ ಕೆಲಸ ಮಾಡಲಿದೆ ಎನ್ನಲಾಗಿದೆ.

ಮೋದಿ ಸರಕಾರವು ಕೋವಿಡ್-19 ನಿರ್ವಹಣೆಯಲ್ಲಿ ದಯನೀಯವಾಗಿ ವಿಫಲಗೊಂಡ ಕಾರಣ ಸುಪ್ರೀಂಕೋರ್ಟ್ ಇವತ್ತು ಸ್ವತಃ ಮಧ್ಯ ಪ್ರವೇಶಿಸಿ ನೂತನವಾದ ಟಾಸ್ಕ್ ಫೋರ್ಸ್ ರಚಿಸಬೇಕಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.


ಇದನ್ನೂ ಓದಿ; ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...