Homeಕರೋನಾ ತಲ್ಲಣದೇಶಾದ್ಯಂತ ನ್ಯಾಯಯುತ ಆಧಾರದಲ್ಲಿ ಆಕ್ಸಿಜನ್ ವಿತರಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ

ದೇಶಾದ್ಯಂತ ನ್ಯಾಯಯುತ ಆಧಾರದಲ್ಲಿ ಆಕ್ಸಿಜನ್ ವಿತರಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ

- Advertisement -
- Advertisement -

ದೇಶದಲ್ಲಿ ಉಂಟಾಗಿರುವ ಆಕ್ಸಿಜನ್ ಸಮಸ್ಯೆಯನ್ನು ಬಗೆಹರಿಸುವ ದೃಷ್ಟಿಯಿಂದ ದೇಶಾದ್ಯಂತ ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ವಿತರಣೆಯನ್ನು ವೈಜ್ಞಾನಿಕ, ತರ್ಕಬದ್ಧ ಮತ್ತು ನ್ಯಾಯಯುತ ಆಧಾರದ ಮೇಲೆ ನಿರ್ಣಯಿಸಲು ಸುಪ್ರೀಂ ಕೋರ್ಟ್ 12 ಸದಸ್ಯರ ಟಾಸ್ಕ್‌ ಫೋರ್ಸ್ ಅನ್ನು ರಚಿಸಿದೆ.

ದೇಶದ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಟಾಸ್ಕ್‌ ಫೋರ್ಸಿನ ನಿರ್ದೇಶನಗಳು ಅನ್ವಯವಾಗಲಿವೆ. ಅಲ್ಲದೇ COVID-19 ಗೆ ಚಿಕಿತ್ಸೆ ನೀಡಲು ಅಗತ್ಯವಾದ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಈ ಟಾಸ್ಕ್ ಫೋರ್ಸ್ ನಿರ್ದೇಶಲಿದೆ. ಅದಕ್ಕೆ ಬೇಕಾದ ಸಂಪನ್ಮೂಲಗಳನ್ನು ಬಳಸಲು ಕೇಂದ್ರವು ಎಲ್ಲಾ ಸಹಕಾರಗಳನ್ನು ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.‌

“ವೈಜ್ಞಾನಿಕ ಮತ್ತು ವಿಶೇಷ ಡೊಮೇನ್ ಜ್ಞಾನದ ಆಧಾರದ ಮೇಲೆ ಸಾಂಕ್ರಾಮಿಕ ರೋಗಕ್ಕೆ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯನ್ನು ಸುಲಭಗೊಳಿಸಲು ರಾಷ್ಟ್ರೀಯ ಮಟ್ಟದಲ್ಲಿ ಈ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ದೇಶದ ಪ್ರಮುಖ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಈ ತಂಡದೊಂದಿಗೆ ಸಹಕರಿಸುತ್ತಾರೆ. ಇದು ಈ ಮಾನವೀಯ ಬಿಕ್ಕಟ್ಟನ್ನು ಎದುರಿಸಲು ವೈಜ್ಞಾನಿಕ ಕಾರ್ಯತಂತ್ರಗಳನ್ನು ರೂಪಿಸಲು ಅನುಕೂಲವಾಗಲಿದೆ” ಎಂದು ನ್ಯಾಯಾಲಯವು ತನ್ನ ಅಂತಿಮ ಆದೇಶದಲ್ಲಿ ತಿಳಿಸಿದೆ.

ಸುಪ್ರೀಂ ನೇಮಿಸಿದ ಟಾಸ್ಕ್‌ ಪೋರ್ಸ್‌ನಲ್ಲಿ ಪಶ್ಚಿಮ ಬಂಗಾಲ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಬಾಬತೋಷ್ ಬಿಸ್ವಾಸ್, ಗಂಗಾರಾಮ್ ಆಸ್ಪತ್ರೆ ನವದೆಹಲಿಯ ಮುಖ್ಯಾಧಿಕಾರಿ ದೇವೇಂದ್ರ ಸಿಂಗ್ ರಾಣಾ, ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ, ತಮಿಳುನಾಡಿನ ವೆಳ್ಳೂರಿನ ಕ್ರಿಸ್ತಿಯನ್ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ. ಗಗನ್ ದೀಪ್ ಕಾಂಗ್, ಅದೇ ಕಾಲೇಜಿನ ನಿರ್ದೇಶಕ ಡಾ. ಜೆ ವಿ ಪೀಟರ್, ಮುಂಬಯಿಯ ಹಿಂದೂಜಾ ಮತ್ತು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಜ಼ರೀರ್ ಎಫ್ ಉದ್ವಾಡಿಯಾ, ಮತ್ತು ಕೇಂದ್ರ ಸರಕಾರದ ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮುಂತಾದವರು ಇದ್ದಾರೆ.

“ಈ ಸಮಸ್ಯೆಯನ್ನು ನಾವು ದೇಶವ್ಯಾಪಿಯಾಗಿ ನೋಡಬೇಕಾಗಿದೆ… ಆಮ್ಲಜನಕದ ಸ್ಟಾಕ್ ಬಿಡುಗಡೆ ಮಾಡಿದ ನಂತರ ಸರ್ಕಾರದ ಹೊಣೆಗಾರಿಕೆ ಏನು? ಆಮ್ಲಜನಕದ ಲೆಕ್ಕಪರಿಶೋಧನೆ ಅಗತ್ಯ” ಎಂದು ನ್ಯಾಯಾಲಯ ಕೇಳಿದೆ.

ಆಮ್ಲಜನಕ, ಔಷಧಿಗಳು ಮತ್ತು ಆಸ್ಪತ್ರೆಯ ಹಾಸಿಗೆಗಳಲ್ಲಿನ ತೀವ್ರ ಕೊರತೆಯನ್ನು ಇನ್ನಷ್ಟು ಹದಗೆಡಿಸುವಂತಹ ಮೂರನೇ ಕೋವಿಡ್ ಅಲೆಗೆ ಕೇಂದ್ರವು ಸಿದ್ಧತೆ ನಡೆಸುತ್ತಿದೆಯೇ ಎಂದು ತಿಳಿಯಲು ಬಯಸಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ಎಂ.ಆರ್ ಶಾರವರಿದ್ದ ಪೀಠ ಈ ತೀರ್ಪು ನೀಡಿದ್ದು ಒಂದು ವಾರದಲ್ಲಿ ಟಾಸ್ಕ್ ಫೋರ್ಸ್ ಕೆಲಸ ಮಾಡಲಿದೆ ಎನ್ನಲಾಗಿದೆ.

ಮೋದಿ ಸರಕಾರವು ಕೋವಿಡ್-19 ನಿರ್ವಹಣೆಯಲ್ಲಿ ದಯನೀಯವಾಗಿ ವಿಫಲಗೊಂಡ ಕಾರಣ ಸುಪ್ರೀಂಕೋರ್ಟ್ ಇವತ್ತು ಸ್ವತಃ ಮಧ್ಯ ಪ್ರವೇಶಿಸಿ ನೂತನವಾದ ಟಾಸ್ಕ್ ಫೋರ್ಸ್ ರಚಿಸಬೇಕಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.


ಇದನ್ನೂ ಓದಿ; ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...