Homeಕರೋನಾ ತಲ್ಲಣದೇಶಾದ್ಯಂತ ನ್ಯಾಯಯುತ ಆಧಾರದಲ್ಲಿ ಆಕ್ಸಿಜನ್ ವಿತರಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ

ದೇಶಾದ್ಯಂತ ನ್ಯಾಯಯುತ ಆಧಾರದಲ್ಲಿ ಆಕ್ಸಿಜನ್ ವಿತರಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ

- Advertisement -
- Advertisement -

ದೇಶದಲ್ಲಿ ಉಂಟಾಗಿರುವ ಆಕ್ಸಿಜನ್ ಸಮಸ್ಯೆಯನ್ನು ಬಗೆಹರಿಸುವ ದೃಷ್ಟಿಯಿಂದ ದೇಶಾದ್ಯಂತ ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ವಿತರಣೆಯನ್ನು ವೈಜ್ಞಾನಿಕ, ತರ್ಕಬದ್ಧ ಮತ್ತು ನ್ಯಾಯಯುತ ಆಧಾರದ ಮೇಲೆ ನಿರ್ಣಯಿಸಲು ಸುಪ್ರೀಂ ಕೋರ್ಟ್ 12 ಸದಸ್ಯರ ಟಾಸ್ಕ್‌ ಫೋರ್ಸ್ ಅನ್ನು ರಚಿಸಿದೆ.

ದೇಶದ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಟಾಸ್ಕ್‌ ಫೋರ್ಸಿನ ನಿರ್ದೇಶನಗಳು ಅನ್ವಯವಾಗಲಿವೆ. ಅಲ್ಲದೇ COVID-19 ಗೆ ಚಿಕಿತ್ಸೆ ನೀಡಲು ಅಗತ್ಯವಾದ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಈ ಟಾಸ್ಕ್ ಫೋರ್ಸ್ ನಿರ್ದೇಶಲಿದೆ. ಅದಕ್ಕೆ ಬೇಕಾದ ಸಂಪನ್ಮೂಲಗಳನ್ನು ಬಳಸಲು ಕೇಂದ್ರವು ಎಲ್ಲಾ ಸಹಕಾರಗಳನ್ನು ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.‌

“ವೈಜ್ಞಾನಿಕ ಮತ್ತು ವಿಶೇಷ ಡೊಮೇನ್ ಜ್ಞಾನದ ಆಧಾರದ ಮೇಲೆ ಸಾಂಕ್ರಾಮಿಕ ರೋಗಕ್ಕೆ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯನ್ನು ಸುಲಭಗೊಳಿಸಲು ರಾಷ್ಟ್ರೀಯ ಮಟ್ಟದಲ್ಲಿ ಈ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ದೇಶದ ಪ್ರಮುಖ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಈ ತಂಡದೊಂದಿಗೆ ಸಹಕರಿಸುತ್ತಾರೆ. ಇದು ಈ ಮಾನವೀಯ ಬಿಕ್ಕಟ್ಟನ್ನು ಎದುರಿಸಲು ವೈಜ್ಞಾನಿಕ ಕಾರ್ಯತಂತ್ರಗಳನ್ನು ರೂಪಿಸಲು ಅನುಕೂಲವಾಗಲಿದೆ” ಎಂದು ನ್ಯಾಯಾಲಯವು ತನ್ನ ಅಂತಿಮ ಆದೇಶದಲ್ಲಿ ತಿಳಿಸಿದೆ.

ಸುಪ್ರೀಂ ನೇಮಿಸಿದ ಟಾಸ್ಕ್‌ ಪೋರ್ಸ್‌ನಲ್ಲಿ ಪಶ್ಚಿಮ ಬಂಗಾಲ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಬಾಬತೋಷ್ ಬಿಸ್ವಾಸ್, ಗಂಗಾರಾಮ್ ಆಸ್ಪತ್ರೆ ನವದೆಹಲಿಯ ಮುಖ್ಯಾಧಿಕಾರಿ ದೇವೇಂದ್ರ ಸಿಂಗ್ ರಾಣಾ, ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ, ತಮಿಳುನಾಡಿನ ವೆಳ್ಳೂರಿನ ಕ್ರಿಸ್ತಿಯನ್ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ. ಗಗನ್ ದೀಪ್ ಕಾಂಗ್, ಅದೇ ಕಾಲೇಜಿನ ನಿರ್ದೇಶಕ ಡಾ. ಜೆ ವಿ ಪೀಟರ್, ಮುಂಬಯಿಯ ಹಿಂದೂಜಾ ಮತ್ತು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಜ಼ರೀರ್ ಎಫ್ ಉದ್ವಾಡಿಯಾ, ಮತ್ತು ಕೇಂದ್ರ ಸರಕಾರದ ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮುಂತಾದವರು ಇದ್ದಾರೆ.

“ಈ ಸಮಸ್ಯೆಯನ್ನು ನಾವು ದೇಶವ್ಯಾಪಿಯಾಗಿ ನೋಡಬೇಕಾಗಿದೆ… ಆಮ್ಲಜನಕದ ಸ್ಟಾಕ್ ಬಿಡುಗಡೆ ಮಾಡಿದ ನಂತರ ಸರ್ಕಾರದ ಹೊಣೆಗಾರಿಕೆ ಏನು? ಆಮ್ಲಜನಕದ ಲೆಕ್ಕಪರಿಶೋಧನೆ ಅಗತ್ಯ” ಎಂದು ನ್ಯಾಯಾಲಯ ಕೇಳಿದೆ.

ಆಮ್ಲಜನಕ, ಔಷಧಿಗಳು ಮತ್ತು ಆಸ್ಪತ್ರೆಯ ಹಾಸಿಗೆಗಳಲ್ಲಿನ ತೀವ್ರ ಕೊರತೆಯನ್ನು ಇನ್ನಷ್ಟು ಹದಗೆಡಿಸುವಂತಹ ಮೂರನೇ ಕೋವಿಡ್ ಅಲೆಗೆ ಕೇಂದ್ರವು ಸಿದ್ಧತೆ ನಡೆಸುತ್ತಿದೆಯೇ ಎಂದು ತಿಳಿಯಲು ಬಯಸಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ಎಂ.ಆರ್ ಶಾರವರಿದ್ದ ಪೀಠ ಈ ತೀರ್ಪು ನೀಡಿದ್ದು ಒಂದು ವಾರದಲ್ಲಿ ಟಾಸ್ಕ್ ಫೋರ್ಸ್ ಕೆಲಸ ಮಾಡಲಿದೆ ಎನ್ನಲಾಗಿದೆ.

ಮೋದಿ ಸರಕಾರವು ಕೋವಿಡ್-19 ನಿರ್ವಹಣೆಯಲ್ಲಿ ದಯನೀಯವಾಗಿ ವಿಫಲಗೊಂಡ ಕಾರಣ ಸುಪ್ರೀಂಕೋರ್ಟ್ ಇವತ್ತು ಸ್ವತಃ ಮಧ್ಯ ಪ್ರವೇಶಿಸಿ ನೂತನವಾದ ಟಾಸ್ಕ್ ಫೋರ್ಸ್ ರಚಿಸಬೇಕಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.


ಇದನ್ನೂ ಓದಿ; ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...