Homeಮುಖಪುಟ12 ಸಂಸದರ ಅಮಾನತು ರದ್ದುಗೊಳಿಸುವುದಿಲ್ಲ: ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು

12 ಸಂಸದರ ಅಮಾನತು ರದ್ದುಗೊಳಿಸುವುದಿಲ್ಲ: ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು

- Advertisement -
- Advertisement -

ಮುಂಗಾರು ಅಧಿವೇಶನದ ಕೊನೆಯ ದಿನವಾದ ಆಗಸ್ಟ್ 11 ರಂದು, ಅನುಚಿತ ವರ್ತನೆ ಆರೋಪದಲ್ಲಿ ಅಮಾನತು ಮಾಡಲಾಗಿದ್ದ 12 ಸಂಸದರ ಅಮಾನತು ಈ ಅಧಿವೇಶದಲ್ಲಿಯು ರದ್ದುಗೊಳಿಸಲಾಗುವುದಿಲ್ಲ ಎಂದು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಮಂಗಳವಾರ ಹೇಳಿದ್ದಾರೆ.

ಸಂಸದರ ಅಮಾನತ್ತಿಗೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು ಇದಕ್ಕೆ ಪ್ರತಿಕ್ರಿಯೆಯಾಗಿ ಸರ್ಕಾರದ ಕ್ರಮವನ್ನು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಸಮರ್ಥಿಸಿಕೊಂಡಿದ್ದಾರೆ.

ಸಂಸದರು ಪಶ್ಚಾತ್ತಾಪ ವ್ಯಕ್ತಪಡಿಸದ ಕಾರಣ ಅಮಾನತು ಹಾಗೆಯೇ ಉಳಿಯುತ್ತದೆ ಎಂದು ಹೇಳಿರುವ ಅವರು, ಅಮಾನತುಗೊಂಡ ಸಂಸದರು ಪಶ್ಚಾತ್ತಾಪ ವ್ಯಕ್ತಪಡಿಸದ ಕಾರಣ ವಿರೋಧ ಪಕ್ಷದ ನಾಯಕ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರ ಮನವಿಯನ್ನು ನಾನು ಪರಿಗಣಿಸುತ್ತಿಲ್ಲ. ಅಮಾನತು ಹಿಂಪಡೆಯುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪ್ರತಿ ಹರಿದು ಪ್ರತಿಭಟನೆ: ರಾಜ್ಯಸಭೆಯಿಂದ ಟಿಎಂಸಿ ಸಂಸದ ಶಾಂತನು ಸೇನ್ ಅಮಾನತು

ಕೆಲವೇ ನಿಮಿಷಗಳ ಹಿಂದೆ ವಿರೋಧ ಪಕ್ಷದ ನಾಯಕ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರು ಸಂಸದರನ್ನು ಅಮಾನತುಗೊಳಿಸುವ ಸರ್ಕಾರದ ಕ್ರಮದ ವಿರುದ್ಧ ಇದು ಆಯ್ಕೆ ಮತ್ತು ನಿಯಮಗಳಿಗೆ ವಿರುದ್ಧವಾಗಿದೆ ಎಂದು ವಾದಿಸಿದ್ದರು. ನಂತರ 12 ಪ್ರತಿಪಕ್ಷಗಳ ಸಂಸದರ ಅಮಾನತು ಹಿಂಪಡೆಯಲು ನಾನು ನಿಮ್ಮನ್ನು ವಿನಂತಿಸುತ್ತೇನೆ ಎಂದಿದ್ದರು. ಆದರೆ ಅವರ ಮನವಿಯನ್ನು ರಾಜ್ಯಸಭಾಧ್ಯಕ್ಷರು ನಿರಾಕರಿಸಿದ್ದಾರೆ.

ಪ್ರತಿಪಕ್ಷಗಳು ವೆಂಕಯ್ಯ ನಾಯ್ಡು ಅವರ ಹೇಳಿಕೆಯಿಂದ ಅಸಮಾಧಾನಗೊಂಡು ಸಂಸತ್‌ನಿಂದ ಹೊರನಡೆದಿದ್ದಾರೆ. “ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷಗಳಿಗೆ ಹೊರನಡೆಯಲು ಎಲ್ಲ ಹಕ್ಕುಗಳಿವೆ. ಆದರೆ ಸದನ ಕಾರ್ಯನಿರ್ವಹಿಸಬೇಕು ಎಂದು ರಾಜ್ಯಸಭಾಧ್ಯಕ್ಷರು ಹೇಳಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಪೆಗಾಸಸ್ ಹಗರಣದ ಕುರಿತು ವಿರೋಧ ಪಕ್ಷದ ಸಂಸದರು ಮತ್ತು ಸರ್ಕಾರ ನಡುವಿನ ಗದ್ದಲಕ್ಕಾಗಿ ಈ ಬಾರಿಯ ಅಧಿವೇಶನದಿಂದಲೂ ಶಿವಸೇನೆಯ ಪ್ರಿಯಾಂಕಾ ಚತುರ್ವೇದಿ ಸೇರಿದಂತೆ 12 ರಾಜ್ಯಸಭಾ ಸಂಸದರನ್ನು ಅಮಾನತುಗೊಳಿಸಲಾಗಿದೆ.

ನಿಯಮ 256 ರ ಅಡಿಯಲ್ಲಿ ಅಮಾನತುಗೊಂಡ ಸಂಸದರು: ಕಾಂಗ್ರೆಸ್‌ನ ಫುಲೋ ದೇವಿ ನೇತಮ್, ಛಾಯಾ ವರ್ಮಾ, ರಿಪುನ್ ಬೋರಾ, ರಾಜಮಣಿ ಪಟೇಲ್, ಸೈಯದ್ ನಾಸಿರ್ ಹುಸೇನ್ ಮತ್ತು ಅಖಿಲೇಶ್ ಪ್ರಸಾದ್ ಸಿಂಗ್. ಟಿಎಂಸಿಯ ಡೋಲಾ ಸೇನ್ ಮತ್ತು ಶಾಂತಾ ಛೆಟ್ರಿ. ಶಿವಸೇನೆಯ ಅನಿಲ್ ದೇಸಾಯಿ ಮತ್ತು ಪ್ರಿಯಾಂಕಾ ಚತುರ್ವೇದಿ, ಸಿಪಿಎಂನ ಎಳಮರಮ್ ಕರೀಂ ಮತ್ತು ಸಿಪಿಐನ ಬಿನೋಯ್ ವಿಶ್ವಂ.


ಇದನ್ನೂ ಓದಿ: ಅಹೋರಾತ್ರಿ ಪ್ರತಿಭಟನೆ ನಡೆಸಿದ ಅಮಾನತುಗೊಂಡ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....