HomeUncategorizedಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಗೋಡ್ಸೆ ಎಂಬ ಹಂತಕ ಗುಂಡಿಕ್ಕಿ ಹತ್ಯೆಗೈದದ್ದು ಇಡೀ ಜಗತ್ತೇ ಕಂಡ ಸತ್ಯ. ಆದರೆ ಅದನ್ನು ಒಡಿಶಾದಲ್ಲಿ ತಿರುಚಲಾಗಿದೆ. ಎರಡು ಪುಟಗಳ ಕಿರು ಪುಸ್ತಕವನ್ನು ಸಮೂಹ ಶಿಕ್ಷಣ ಇಲಾಖೆ ಪ್ರಕಟಿಸಿ, ವಿತರಿಸಿದೆ. ರಾಜ್ಯದ ಶಾಲೆಗಳಲ್ಲಿ ಗಾಂಧೀಜಿ ಹತ್ಯೆಯ ಸುತ್ತ ವಿವಾದ ಹುಟ್ಟುವಂತೆ ಮಾಡಿದೆ.

ಸಮೂಹ ಶಿಕ್ಷಣ ಇಲಾಖೆಯಿಂದ ಪ್ರಕಟಗೊಂಡಿರುವ ಎರಡು ಪುಟಗಳ ಕಿರು ಪುಸ್ತಕದಲ್ಲಿ ಮಹಾತ್ಮಾ ಗಾಂಧೀಜಿ ಅವರು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವಿವಾದಾತ್ಮಕ ವಿಷಯವನ್ನು ಬರೆಯಲಾಗಿದೆ. ಜನವರಿ 30, 1948 ರಂದು ನಡೆದ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟರು ಎಂದು ತಿರುಚಲಾಗಿದೆ. ಇದರಿಂದ ಶಿಕ್ಷಣ ಇಲಾಖೆಯನ್ನು ಒಡಿಶಾ ಸರ್ಕಾರ ತರಾಟೆಗೆ ತೆಗೆದುಕೊಂಡಿದೆ. ಇಂತಹ ವಿವಾದಾತ್ಮಕ ಪುಸ್ತಕವನ್ನು ಬರೆದವರು ಯಾರು, ಪ್ರಕಟಿಸಿ, ವಿತರಿಸಿದವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಒಡಿಶಾ ಶಿಕ್ಷಣ ಮಂತ್ರಿ ಸಮೀರ್‌ ರಂಜನ್‌ ದಾಸ್‌ ಮಾತನಾಡಿ, ’ನಮ್ಮ ಬಾಪೂಜಿ, ಒಂದು ನೋಟ’ ಎಂಬ ಶೀರ್ಷಿಕೆಯಿರುವ ಎರಡು ಪುಟಗಳ ವಿವಾದಾತ್ಮಕ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಇದೆಲ್ಲಾ ಹೇಗೆ ನಡೆಯಿತು ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಯಾರೇ ಕೃತ್ಯವೆಸಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಿರುಪುಸ್ತಕವನ್ನು ಹಿಂತೆಗೆದುಕೊಳ್ಳಲಾಗುವುದು. ಪುಸ್ತಕದಲ್ಲಿ ಗಾಂಧೀಜಿ ಸಾವು ಆಕಸ್ಮಿಕ ಅಪಘಾತ ಎಂದು ಉಲ್ಲೇಖಿಸುವ ಬದಲು ಅವರನ್ನು ಹೇಗೆ ಹತ್ಯೆಗೈದರು ಎಂಬ ಬಗ್ಗೆ ಸ್ಪಷ್ಟವಾಗಿ ಬರೆಯಬೇಕಾಗಿತ್ತು ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಬಗ್ಗೆ ಕಿರು ಪುಸ್ತಕದಲ್ಲಿ ವಿವಾದಾತ್ಮಕವಾಗಿ ನಿರೂಪಿಸಿರುವ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣವೇ ಸರ್ಕಾರ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರಫುಲ್ಲಾ ಸಮಂತ್ರಾ ಒತ್ತಾಯಿಸಿದ್ದರು. ಪುಸ್ತಕದಲ್ಲಿ ತಪ್ಪುಗಳೇ ಹೆಚ್ಚಿವೆ. ಗಾಂಧೀಜಿಯವರು ಯಾವುದೋ ಅಪಘಾತದಿಂದ ನಿಧನರಾದರು ಎಂದು ತಿರುಚಲಾಗಿದೆ. ನಾಥುರಾಮ್ ಗೋಡ್ಸೆ ಅವರಂತಹ ಧರ್ಮಾಂಧರಿಂದ ಕೊಲ್ಲಲ್ಪಟ್ಟಿಲ್ಲ ಎಂದು ಬರೆಯುವ ಮೂಲಕ ಯುವ ಪೀಳಿಗೆಯನ್ನು ದಾರಿ ತಪ್ಪಿಸಲಾಗುತ್ತಿದೆ. ಗಾಂಧೀಜಿ ಅವರ 150ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ನಾವು, ನಮ್ಮ ರಾಷ್ಟ್ರಪಿತನಿಗೆ ಅವಮಾನ ಮಾಡುತ್ತಿದ್ದೇವೆ. ಇದು ನಾವು ತೋರಿದ ಅಗೌರವ ಎಂದು ಪ್ರಫುಲ್ಲಾ ಖಂಡಿಸಿದರು.

ಗಾಂಧಿ ಸ್ಮಾರಕ ಗ್ರಂಥಾಲಯದ ಕಾರ್ಯದರ್ಶಿ ಮನೋರಂಜನ್ ಸಾಹು ಮಾತನಾಡಿ, ಕಿರುಪುಸ್ತಕ ಸತ್ಯವನ್ನು ಮರೆಮಾಚಲು ಯತ್ನಿಸಿ, ವಿಫಲವಾಗಿದೆ. ಗಾಂಧೀಜಿ ಅವರು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ ಎಂದರೆ ಏನರ್ಥ..? ಅವರು ರಸ್ತೆಯಲ್ಲಿ ಹೋಗುವಾಗ ಮುಗ್ಗರಿಸಿ ಬಿದ್ದು ಮೃತಪಟ್ಟರೇ..? ಇಲ್ಲ. ಅವರನ್ನು ನಾಥುರಾಮ್‌ ಗೋಡ್ಸೆ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ಹೇಳಿದರು.

ಸಮಾಜವಾದಿ ಪತ್ರಿಕೆಯ ಸಂಪಾದಕ ಸುಧೀರ್‌ ಪಟ್ನಾಯಕ್‌ ಮಾತನಾಡಿ, ಒಡಿಶಾ ಶಿಕ್ಷಣದಲ್ಲಿ ಉಂಟಾಗುತ್ತಿರುವ ಕೇಸರೀಕರಣ ಮತ್ತು ಸಾಂಸ್ಥಿಕೀಕರಣ ಹೇಗೆ ನಡೆಯುತ್ತಿದೆ ಎಂಬುದು ಪುಸ್ತಕದಿಂದ ಗೊತ್ತಾಗಿದೆ. ಇದೊಂದು ದುರುದ್ದೇಶಪೂರಿತ ಯತ್ನವಾಗಿದೆ. ಒಡಿಶಾ ಸಿಎಂ, ಮಹಾತ್ಮಾ ಗಾಂಧೀಜಿಯವರ ಆದರ್ಶಗಳ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅವರ ಇಲಾಖೆಯಲ್ಲೇ ಇಂಥದ್ದೊಂದು ಅವಮಾನ ಮಾಡುವ ಘಟನೆ ನಡೆದಿದೆ ಎಂದು ಟೀಕಿಸಿದರು.

ಇನ್ನು ಕಳೆದ ತಿಂಗಳಷ್ಟೇ ಗುಜರಾತ್‌ನಲ್ಲಿ ಇದೇ ರೀತಿಯ ವಿವಾದ ಭುಗಿಲೆದ್ದಿತ್ತು. ಒಂಭತ್ತನೇ ತರಗತಿಯ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ‘ಮಹಾತ್ಮ ಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’ ಎಂಬ ಪ್ರಶ್ನೆಯನ್ನು ವಿದ್ಯಾರ್ಥಿಗಳಿಗೆ ಕೇಳಲಾಗಿತ್ತು. ಒಟ್ಟಿನಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನಿಗೆ ದೇಶವಿಂದು ವಿವಾದದ ಕೊಡುಗೆ ನೀಡುತ್ತಿರುವುದು ಶೋಚನೀಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...