HomeUncategorizedಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಗೋಡ್ಸೆ ಎಂಬ ಹಂತಕ ಗುಂಡಿಕ್ಕಿ ಹತ್ಯೆಗೈದದ್ದು ಇಡೀ ಜಗತ್ತೇ ಕಂಡ ಸತ್ಯ. ಆದರೆ ಅದನ್ನು ಒಡಿಶಾದಲ್ಲಿ ತಿರುಚಲಾಗಿದೆ. ಎರಡು ಪುಟಗಳ ಕಿರು ಪುಸ್ತಕವನ್ನು ಸಮೂಹ ಶಿಕ್ಷಣ ಇಲಾಖೆ ಪ್ರಕಟಿಸಿ, ವಿತರಿಸಿದೆ. ರಾಜ್ಯದ ಶಾಲೆಗಳಲ್ಲಿ ಗಾಂಧೀಜಿ ಹತ್ಯೆಯ ಸುತ್ತ ವಿವಾದ ಹುಟ್ಟುವಂತೆ ಮಾಡಿದೆ.

ಸಮೂಹ ಶಿಕ್ಷಣ ಇಲಾಖೆಯಿಂದ ಪ್ರಕಟಗೊಂಡಿರುವ ಎರಡು ಪುಟಗಳ ಕಿರು ಪುಸ್ತಕದಲ್ಲಿ ಮಹಾತ್ಮಾ ಗಾಂಧೀಜಿ ಅವರು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವಿವಾದಾತ್ಮಕ ವಿಷಯವನ್ನು ಬರೆಯಲಾಗಿದೆ. ಜನವರಿ 30, 1948 ರಂದು ನಡೆದ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟರು ಎಂದು ತಿರುಚಲಾಗಿದೆ. ಇದರಿಂದ ಶಿಕ್ಷಣ ಇಲಾಖೆಯನ್ನು ಒಡಿಶಾ ಸರ್ಕಾರ ತರಾಟೆಗೆ ತೆಗೆದುಕೊಂಡಿದೆ. ಇಂತಹ ವಿವಾದಾತ್ಮಕ ಪುಸ್ತಕವನ್ನು ಬರೆದವರು ಯಾರು, ಪ್ರಕಟಿಸಿ, ವಿತರಿಸಿದವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಒಡಿಶಾ ಶಿಕ್ಷಣ ಮಂತ್ರಿ ಸಮೀರ್‌ ರಂಜನ್‌ ದಾಸ್‌ ಮಾತನಾಡಿ, ’ನಮ್ಮ ಬಾಪೂಜಿ, ಒಂದು ನೋಟ’ ಎಂಬ ಶೀರ್ಷಿಕೆಯಿರುವ ಎರಡು ಪುಟಗಳ ವಿವಾದಾತ್ಮಕ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಇದೆಲ್ಲಾ ಹೇಗೆ ನಡೆಯಿತು ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಯಾರೇ ಕೃತ್ಯವೆಸಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಿರುಪುಸ್ತಕವನ್ನು ಹಿಂತೆಗೆದುಕೊಳ್ಳಲಾಗುವುದು. ಪುಸ್ತಕದಲ್ಲಿ ಗಾಂಧೀಜಿ ಸಾವು ಆಕಸ್ಮಿಕ ಅಪಘಾತ ಎಂದು ಉಲ್ಲೇಖಿಸುವ ಬದಲು ಅವರನ್ನು ಹೇಗೆ ಹತ್ಯೆಗೈದರು ಎಂಬ ಬಗ್ಗೆ ಸ್ಪಷ್ಟವಾಗಿ ಬರೆಯಬೇಕಾಗಿತ್ತು ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಬಗ್ಗೆ ಕಿರು ಪುಸ್ತಕದಲ್ಲಿ ವಿವಾದಾತ್ಮಕವಾಗಿ ನಿರೂಪಿಸಿರುವ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣವೇ ಸರ್ಕಾರ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರಫುಲ್ಲಾ ಸಮಂತ್ರಾ ಒತ್ತಾಯಿಸಿದ್ದರು. ಪುಸ್ತಕದಲ್ಲಿ ತಪ್ಪುಗಳೇ ಹೆಚ್ಚಿವೆ. ಗಾಂಧೀಜಿಯವರು ಯಾವುದೋ ಅಪಘಾತದಿಂದ ನಿಧನರಾದರು ಎಂದು ತಿರುಚಲಾಗಿದೆ. ನಾಥುರಾಮ್ ಗೋಡ್ಸೆ ಅವರಂತಹ ಧರ್ಮಾಂಧರಿಂದ ಕೊಲ್ಲಲ್ಪಟ್ಟಿಲ್ಲ ಎಂದು ಬರೆಯುವ ಮೂಲಕ ಯುವ ಪೀಳಿಗೆಯನ್ನು ದಾರಿ ತಪ್ಪಿಸಲಾಗುತ್ತಿದೆ. ಗಾಂಧೀಜಿ ಅವರ 150ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ನಾವು, ನಮ್ಮ ರಾಷ್ಟ್ರಪಿತನಿಗೆ ಅವಮಾನ ಮಾಡುತ್ತಿದ್ದೇವೆ. ಇದು ನಾವು ತೋರಿದ ಅಗೌರವ ಎಂದು ಪ್ರಫುಲ್ಲಾ ಖಂಡಿಸಿದರು.

ಗಾಂಧಿ ಸ್ಮಾರಕ ಗ್ರಂಥಾಲಯದ ಕಾರ್ಯದರ್ಶಿ ಮನೋರಂಜನ್ ಸಾಹು ಮಾತನಾಡಿ, ಕಿರುಪುಸ್ತಕ ಸತ್ಯವನ್ನು ಮರೆಮಾಚಲು ಯತ್ನಿಸಿ, ವಿಫಲವಾಗಿದೆ. ಗಾಂಧೀಜಿ ಅವರು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ ಎಂದರೆ ಏನರ್ಥ..? ಅವರು ರಸ್ತೆಯಲ್ಲಿ ಹೋಗುವಾಗ ಮುಗ್ಗರಿಸಿ ಬಿದ್ದು ಮೃತಪಟ್ಟರೇ..? ಇಲ್ಲ. ಅವರನ್ನು ನಾಥುರಾಮ್‌ ಗೋಡ್ಸೆ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ಹೇಳಿದರು.

ಸಮಾಜವಾದಿ ಪತ್ರಿಕೆಯ ಸಂಪಾದಕ ಸುಧೀರ್‌ ಪಟ್ನಾಯಕ್‌ ಮಾತನಾಡಿ, ಒಡಿಶಾ ಶಿಕ್ಷಣದಲ್ಲಿ ಉಂಟಾಗುತ್ತಿರುವ ಕೇಸರೀಕರಣ ಮತ್ತು ಸಾಂಸ್ಥಿಕೀಕರಣ ಹೇಗೆ ನಡೆಯುತ್ತಿದೆ ಎಂಬುದು ಪುಸ್ತಕದಿಂದ ಗೊತ್ತಾಗಿದೆ. ಇದೊಂದು ದುರುದ್ದೇಶಪೂರಿತ ಯತ್ನವಾಗಿದೆ. ಒಡಿಶಾ ಸಿಎಂ, ಮಹಾತ್ಮಾ ಗಾಂಧೀಜಿಯವರ ಆದರ್ಶಗಳ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅವರ ಇಲಾಖೆಯಲ್ಲೇ ಇಂಥದ್ದೊಂದು ಅವಮಾನ ಮಾಡುವ ಘಟನೆ ನಡೆದಿದೆ ಎಂದು ಟೀಕಿಸಿದರು.

ಇನ್ನು ಕಳೆದ ತಿಂಗಳಷ್ಟೇ ಗುಜರಾತ್‌ನಲ್ಲಿ ಇದೇ ರೀತಿಯ ವಿವಾದ ಭುಗಿಲೆದ್ದಿತ್ತು. ಒಂಭತ್ತನೇ ತರಗತಿಯ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ‘ಮಹಾತ್ಮ ಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’ ಎಂಬ ಪ್ರಶ್ನೆಯನ್ನು ವಿದ್ಯಾರ್ಥಿಗಳಿಗೆ ಕೇಳಲಾಗಿತ್ತು. ಒಟ್ಟಿನಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನಿಗೆ ದೇಶವಿಂದು ವಿವಾದದ ಕೊಡುಗೆ ನೀಡುತ್ತಿರುವುದು ಶೋಚನೀಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...