HomeUncategorizedಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಗೋಡ್ಸೆ ಎಂಬ ಹಂತಕ ಗುಂಡಿಕ್ಕಿ ಹತ್ಯೆಗೈದದ್ದು ಇಡೀ ಜಗತ್ತೇ ಕಂಡ ಸತ್ಯ. ಆದರೆ ಅದನ್ನು ಒಡಿಶಾದಲ್ಲಿ ತಿರುಚಲಾಗಿದೆ. ಎರಡು ಪುಟಗಳ ಕಿರು ಪುಸ್ತಕವನ್ನು ಸಮೂಹ ಶಿಕ್ಷಣ ಇಲಾಖೆ ಪ್ರಕಟಿಸಿ, ವಿತರಿಸಿದೆ. ರಾಜ್ಯದ ಶಾಲೆಗಳಲ್ಲಿ ಗಾಂಧೀಜಿ ಹತ್ಯೆಯ ಸುತ್ತ ವಿವಾದ ಹುಟ್ಟುವಂತೆ ಮಾಡಿದೆ.

ಸಮೂಹ ಶಿಕ್ಷಣ ಇಲಾಖೆಯಿಂದ ಪ್ರಕಟಗೊಂಡಿರುವ ಎರಡು ಪುಟಗಳ ಕಿರು ಪುಸ್ತಕದಲ್ಲಿ ಮಹಾತ್ಮಾ ಗಾಂಧೀಜಿ ಅವರು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವಿವಾದಾತ್ಮಕ ವಿಷಯವನ್ನು ಬರೆಯಲಾಗಿದೆ. ಜನವರಿ 30, 1948 ರಂದು ನಡೆದ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟರು ಎಂದು ತಿರುಚಲಾಗಿದೆ. ಇದರಿಂದ ಶಿಕ್ಷಣ ಇಲಾಖೆಯನ್ನು ಒಡಿಶಾ ಸರ್ಕಾರ ತರಾಟೆಗೆ ತೆಗೆದುಕೊಂಡಿದೆ. ಇಂತಹ ವಿವಾದಾತ್ಮಕ ಪುಸ್ತಕವನ್ನು ಬರೆದವರು ಯಾರು, ಪ್ರಕಟಿಸಿ, ವಿತರಿಸಿದವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಒಡಿಶಾ ಶಿಕ್ಷಣ ಮಂತ್ರಿ ಸಮೀರ್‌ ರಂಜನ್‌ ದಾಸ್‌ ಮಾತನಾಡಿ, ’ನಮ್ಮ ಬಾಪೂಜಿ, ಒಂದು ನೋಟ’ ಎಂಬ ಶೀರ್ಷಿಕೆಯಿರುವ ಎರಡು ಪುಟಗಳ ವಿವಾದಾತ್ಮಕ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಇದೆಲ್ಲಾ ಹೇಗೆ ನಡೆಯಿತು ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಯಾರೇ ಕೃತ್ಯವೆಸಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಿರುಪುಸ್ತಕವನ್ನು ಹಿಂತೆಗೆದುಕೊಳ್ಳಲಾಗುವುದು. ಪುಸ್ತಕದಲ್ಲಿ ಗಾಂಧೀಜಿ ಸಾವು ಆಕಸ್ಮಿಕ ಅಪಘಾತ ಎಂದು ಉಲ್ಲೇಖಿಸುವ ಬದಲು ಅವರನ್ನು ಹೇಗೆ ಹತ್ಯೆಗೈದರು ಎಂಬ ಬಗ್ಗೆ ಸ್ಪಷ್ಟವಾಗಿ ಬರೆಯಬೇಕಾಗಿತ್ತು ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಬಗ್ಗೆ ಕಿರು ಪುಸ್ತಕದಲ್ಲಿ ವಿವಾದಾತ್ಮಕವಾಗಿ ನಿರೂಪಿಸಿರುವ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣವೇ ಸರ್ಕಾರ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರಫುಲ್ಲಾ ಸಮಂತ್ರಾ ಒತ್ತಾಯಿಸಿದ್ದರು. ಪುಸ್ತಕದಲ್ಲಿ ತಪ್ಪುಗಳೇ ಹೆಚ್ಚಿವೆ. ಗಾಂಧೀಜಿಯವರು ಯಾವುದೋ ಅಪಘಾತದಿಂದ ನಿಧನರಾದರು ಎಂದು ತಿರುಚಲಾಗಿದೆ. ನಾಥುರಾಮ್ ಗೋಡ್ಸೆ ಅವರಂತಹ ಧರ್ಮಾಂಧರಿಂದ ಕೊಲ್ಲಲ್ಪಟ್ಟಿಲ್ಲ ಎಂದು ಬರೆಯುವ ಮೂಲಕ ಯುವ ಪೀಳಿಗೆಯನ್ನು ದಾರಿ ತಪ್ಪಿಸಲಾಗುತ್ತಿದೆ. ಗಾಂಧೀಜಿ ಅವರ 150ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ನಾವು, ನಮ್ಮ ರಾಷ್ಟ್ರಪಿತನಿಗೆ ಅವಮಾನ ಮಾಡುತ್ತಿದ್ದೇವೆ. ಇದು ನಾವು ತೋರಿದ ಅಗೌರವ ಎಂದು ಪ್ರಫುಲ್ಲಾ ಖಂಡಿಸಿದರು.

ಗಾಂಧಿ ಸ್ಮಾರಕ ಗ್ರಂಥಾಲಯದ ಕಾರ್ಯದರ್ಶಿ ಮನೋರಂಜನ್ ಸಾಹು ಮಾತನಾಡಿ, ಕಿರುಪುಸ್ತಕ ಸತ್ಯವನ್ನು ಮರೆಮಾಚಲು ಯತ್ನಿಸಿ, ವಿಫಲವಾಗಿದೆ. ಗಾಂಧೀಜಿ ಅವರು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ ಎಂದರೆ ಏನರ್ಥ..? ಅವರು ರಸ್ತೆಯಲ್ಲಿ ಹೋಗುವಾಗ ಮುಗ್ಗರಿಸಿ ಬಿದ್ದು ಮೃತಪಟ್ಟರೇ..? ಇಲ್ಲ. ಅವರನ್ನು ನಾಥುರಾಮ್‌ ಗೋಡ್ಸೆ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ಹೇಳಿದರು.

ಸಮಾಜವಾದಿ ಪತ್ರಿಕೆಯ ಸಂಪಾದಕ ಸುಧೀರ್‌ ಪಟ್ನಾಯಕ್‌ ಮಾತನಾಡಿ, ಒಡಿಶಾ ಶಿಕ್ಷಣದಲ್ಲಿ ಉಂಟಾಗುತ್ತಿರುವ ಕೇಸರೀಕರಣ ಮತ್ತು ಸಾಂಸ್ಥಿಕೀಕರಣ ಹೇಗೆ ನಡೆಯುತ್ತಿದೆ ಎಂಬುದು ಪುಸ್ತಕದಿಂದ ಗೊತ್ತಾಗಿದೆ. ಇದೊಂದು ದುರುದ್ದೇಶಪೂರಿತ ಯತ್ನವಾಗಿದೆ. ಒಡಿಶಾ ಸಿಎಂ, ಮಹಾತ್ಮಾ ಗಾಂಧೀಜಿಯವರ ಆದರ್ಶಗಳ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅವರ ಇಲಾಖೆಯಲ್ಲೇ ಇಂಥದ್ದೊಂದು ಅವಮಾನ ಮಾಡುವ ಘಟನೆ ನಡೆದಿದೆ ಎಂದು ಟೀಕಿಸಿದರು.

ಇನ್ನು ಕಳೆದ ತಿಂಗಳಷ್ಟೇ ಗುಜರಾತ್‌ನಲ್ಲಿ ಇದೇ ರೀತಿಯ ವಿವಾದ ಭುಗಿಲೆದ್ದಿತ್ತು. ಒಂಭತ್ತನೇ ತರಗತಿಯ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ‘ಮಹಾತ್ಮ ಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’ ಎಂಬ ಪ್ರಶ್ನೆಯನ್ನು ವಿದ್ಯಾರ್ಥಿಗಳಿಗೆ ಕೇಳಲಾಗಿತ್ತು. ಒಟ್ಟಿನಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನಿಗೆ ದೇಶವಿಂದು ವಿವಾದದ ಕೊಡುಗೆ ನೀಡುತ್ತಿರುವುದು ಶೋಚನೀಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...