HomeUncategorizedಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಗೋಡ್ಸೆ ಎಂಬ ಹಂತಕ ಗುಂಡಿಕ್ಕಿ ಹತ್ಯೆಗೈದದ್ದು ಇಡೀ ಜಗತ್ತೇ ಕಂಡ ಸತ್ಯ. ಆದರೆ ಅದನ್ನು ಒಡಿಶಾದಲ್ಲಿ ತಿರುಚಲಾಗಿದೆ. ಎರಡು ಪುಟಗಳ ಕಿರು ಪುಸ್ತಕವನ್ನು ಸಮೂಹ ಶಿಕ್ಷಣ ಇಲಾಖೆ ಪ್ರಕಟಿಸಿ, ವಿತರಿಸಿದೆ. ರಾಜ್ಯದ ಶಾಲೆಗಳಲ್ಲಿ ಗಾಂಧೀಜಿ ಹತ್ಯೆಯ ಸುತ್ತ ವಿವಾದ ಹುಟ್ಟುವಂತೆ ಮಾಡಿದೆ.

ಸಮೂಹ ಶಿಕ್ಷಣ ಇಲಾಖೆಯಿಂದ ಪ್ರಕಟಗೊಂಡಿರುವ ಎರಡು ಪುಟಗಳ ಕಿರು ಪುಸ್ತಕದಲ್ಲಿ ಮಹಾತ್ಮಾ ಗಾಂಧೀಜಿ ಅವರು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವಿವಾದಾತ್ಮಕ ವಿಷಯವನ್ನು ಬರೆಯಲಾಗಿದೆ. ಜನವರಿ 30, 1948 ರಂದು ನಡೆದ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟರು ಎಂದು ತಿರುಚಲಾಗಿದೆ. ಇದರಿಂದ ಶಿಕ್ಷಣ ಇಲಾಖೆಯನ್ನು ಒಡಿಶಾ ಸರ್ಕಾರ ತರಾಟೆಗೆ ತೆಗೆದುಕೊಂಡಿದೆ. ಇಂತಹ ವಿವಾದಾತ್ಮಕ ಪುಸ್ತಕವನ್ನು ಬರೆದವರು ಯಾರು, ಪ್ರಕಟಿಸಿ, ವಿತರಿಸಿದವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಒಡಿಶಾ ಶಿಕ್ಷಣ ಮಂತ್ರಿ ಸಮೀರ್‌ ರಂಜನ್‌ ದಾಸ್‌ ಮಾತನಾಡಿ, ’ನಮ್ಮ ಬಾಪೂಜಿ, ಒಂದು ನೋಟ’ ಎಂಬ ಶೀರ್ಷಿಕೆಯಿರುವ ಎರಡು ಪುಟಗಳ ವಿವಾದಾತ್ಮಕ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಇದೆಲ್ಲಾ ಹೇಗೆ ನಡೆಯಿತು ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಯಾರೇ ಕೃತ್ಯವೆಸಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಿರುಪುಸ್ತಕವನ್ನು ಹಿಂತೆಗೆದುಕೊಳ್ಳಲಾಗುವುದು. ಪುಸ್ತಕದಲ್ಲಿ ಗಾಂಧೀಜಿ ಸಾವು ಆಕಸ್ಮಿಕ ಅಪಘಾತ ಎಂದು ಉಲ್ಲೇಖಿಸುವ ಬದಲು ಅವರನ್ನು ಹೇಗೆ ಹತ್ಯೆಗೈದರು ಎಂಬ ಬಗ್ಗೆ ಸ್ಪಷ್ಟವಾಗಿ ಬರೆಯಬೇಕಾಗಿತ್ತು ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಬಗ್ಗೆ ಕಿರು ಪುಸ್ತಕದಲ್ಲಿ ವಿವಾದಾತ್ಮಕವಾಗಿ ನಿರೂಪಿಸಿರುವ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣವೇ ಸರ್ಕಾರ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರಫುಲ್ಲಾ ಸಮಂತ್ರಾ ಒತ್ತಾಯಿಸಿದ್ದರು. ಪುಸ್ತಕದಲ್ಲಿ ತಪ್ಪುಗಳೇ ಹೆಚ್ಚಿವೆ. ಗಾಂಧೀಜಿಯವರು ಯಾವುದೋ ಅಪಘಾತದಿಂದ ನಿಧನರಾದರು ಎಂದು ತಿರುಚಲಾಗಿದೆ. ನಾಥುರಾಮ್ ಗೋಡ್ಸೆ ಅವರಂತಹ ಧರ್ಮಾಂಧರಿಂದ ಕೊಲ್ಲಲ್ಪಟ್ಟಿಲ್ಲ ಎಂದು ಬರೆಯುವ ಮೂಲಕ ಯುವ ಪೀಳಿಗೆಯನ್ನು ದಾರಿ ತಪ್ಪಿಸಲಾಗುತ್ತಿದೆ. ಗಾಂಧೀಜಿ ಅವರ 150ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ನಾವು, ನಮ್ಮ ರಾಷ್ಟ್ರಪಿತನಿಗೆ ಅವಮಾನ ಮಾಡುತ್ತಿದ್ದೇವೆ. ಇದು ನಾವು ತೋರಿದ ಅಗೌರವ ಎಂದು ಪ್ರಫುಲ್ಲಾ ಖಂಡಿಸಿದರು.

ಗಾಂಧಿ ಸ್ಮಾರಕ ಗ್ರಂಥಾಲಯದ ಕಾರ್ಯದರ್ಶಿ ಮನೋರಂಜನ್ ಸಾಹು ಮಾತನಾಡಿ, ಕಿರುಪುಸ್ತಕ ಸತ್ಯವನ್ನು ಮರೆಮಾಚಲು ಯತ್ನಿಸಿ, ವಿಫಲವಾಗಿದೆ. ಗಾಂಧೀಜಿ ಅವರು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ ಎಂದರೆ ಏನರ್ಥ..? ಅವರು ರಸ್ತೆಯಲ್ಲಿ ಹೋಗುವಾಗ ಮುಗ್ಗರಿಸಿ ಬಿದ್ದು ಮೃತಪಟ್ಟರೇ..? ಇಲ್ಲ. ಅವರನ್ನು ನಾಥುರಾಮ್‌ ಗೋಡ್ಸೆ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ಹೇಳಿದರು.

ಸಮಾಜವಾದಿ ಪತ್ರಿಕೆಯ ಸಂಪಾದಕ ಸುಧೀರ್‌ ಪಟ್ನಾಯಕ್‌ ಮಾತನಾಡಿ, ಒಡಿಶಾ ಶಿಕ್ಷಣದಲ್ಲಿ ಉಂಟಾಗುತ್ತಿರುವ ಕೇಸರೀಕರಣ ಮತ್ತು ಸಾಂಸ್ಥಿಕೀಕರಣ ಹೇಗೆ ನಡೆಯುತ್ತಿದೆ ಎಂಬುದು ಪುಸ್ತಕದಿಂದ ಗೊತ್ತಾಗಿದೆ. ಇದೊಂದು ದುರುದ್ದೇಶಪೂರಿತ ಯತ್ನವಾಗಿದೆ. ಒಡಿಶಾ ಸಿಎಂ, ಮಹಾತ್ಮಾ ಗಾಂಧೀಜಿಯವರ ಆದರ್ಶಗಳ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅವರ ಇಲಾಖೆಯಲ್ಲೇ ಇಂಥದ್ದೊಂದು ಅವಮಾನ ಮಾಡುವ ಘಟನೆ ನಡೆದಿದೆ ಎಂದು ಟೀಕಿಸಿದರು.

ಇನ್ನು ಕಳೆದ ತಿಂಗಳಷ್ಟೇ ಗುಜರಾತ್‌ನಲ್ಲಿ ಇದೇ ರೀತಿಯ ವಿವಾದ ಭುಗಿಲೆದ್ದಿತ್ತು. ಒಂಭತ್ತನೇ ತರಗತಿಯ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ‘ಮಹಾತ್ಮ ಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’ ಎಂಬ ಪ್ರಶ್ನೆಯನ್ನು ವಿದ್ಯಾರ್ಥಿಗಳಿಗೆ ಕೇಳಲಾಗಿತ್ತು. ಒಟ್ಟಿನಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನಿಗೆ ದೇಶವಿಂದು ವಿವಾದದ ಕೊಡುಗೆ ನೀಡುತ್ತಿರುವುದು ಶೋಚನೀಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...