HomeUncategorizedಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಗೋಡ್ಸೆ ಎಂಬ ಹಂತಕ ಗುಂಡಿಕ್ಕಿ ಹತ್ಯೆಗೈದದ್ದು ಇಡೀ ಜಗತ್ತೇ ಕಂಡ ಸತ್ಯ. ಆದರೆ ಅದನ್ನು ಒಡಿಶಾದಲ್ಲಿ ತಿರುಚಲಾಗಿದೆ. ಎರಡು ಪುಟಗಳ ಕಿರು ಪುಸ್ತಕವನ್ನು ಸಮೂಹ ಶಿಕ್ಷಣ ಇಲಾಖೆ ಪ್ರಕಟಿಸಿ, ವಿತರಿಸಿದೆ. ರಾಜ್ಯದ ಶಾಲೆಗಳಲ್ಲಿ ಗಾಂಧೀಜಿ ಹತ್ಯೆಯ ಸುತ್ತ ವಿವಾದ ಹುಟ್ಟುವಂತೆ ಮಾಡಿದೆ.

ಸಮೂಹ ಶಿಕ್ಷಣ ಇಲಾಖೆಯಿಂದ ಪ್ರಕಟಗೊಂಡಿರುವ ಎರಡು ಪುಟಗಳ ಕಿರು ಪುಸ್ತಕದಲ್ಲಿ ಮಹಾತ್ಮಾ ಗಾಂಧೀಜಿ ಅವರು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವಿವಾದಾತ್ಮಕ ವಿಷಯವನ್ನು ಬರೆಯಲಾಗಿದೆ. ಜನವರಿ 30, 1948 ರಂದು ನಡೆದ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟರು ಎಂದು ತಿರುಚಲಾಗಿದೆ. ಇದರಿಂದ ಶಿಕ್ಷಣ ಇಲಾಖೆಯನ್ನು ಒಡಿಶಾ ಸರ್ಕಾರ ತರಾಟೆಗೆ ತೆಗೆದುಕೊಂಡಿದೆ. ಇಂತಹ ವಿವಾದಾತ್ಮಕ ಪುಸ್ತಕವನ್ನು ಬರೆದವರು ಯಾರು, ಪ್ರಕಟಿಸಿ, ವಿತರಿಸಿದವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಒಡಿಶಾ ಶಿಕ್ಷಣ ಮಂತ್ರಿ ಸಮೀರ್‌ ರಂಜನ್‌ ದಾಸ್‌ ಮಾತನಾಡಿ, ’ನಮ್ಮ ಬಾಪೂಜಿ, ಒಂದು ನೋಟ’ ಎಂಬ ಶೀರ್ಷಿಕೆಯಿರುವ ಎರಡು ಪುಟಗಳ ವಿವಾದಾತ್ಮಕ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಇದೆಲ್ಲಾ ಹೇಗೆ ನಡೆಯಿತು ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಯಾರೇ ಕೃತ್ಯವೆಸಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಿರುಪುಸ್ತಕವನ್ನು ಹಿಂತೆಗೆದುಕೊಳ್ಳಲಾಗುವುದು. ಪುಸ್ತಕದಲ್ಲಿ ಗಾಂಧೀಜಿ ಸಾವು ಆಕಸ್ಮಿಕ ಅಪಘಾತ ಎಂದು ಉಲ್ಲೇಖಿಸುವ ಬದಲು ಅವರನ್ನು ಹೇಗೆ ಹತ್ಯೆಗೈದರು ಎಂಬ ಬಗ್ಗೆ ಸ್ಪಷ್ಟವಾಗಿ ಬರೆಯಬೇಕಾಗಿತ್ತು ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಬಗ್ಗೆ ಕಿರು ಪುಸ್ತಕದಲ್ಲಿ ವಿವಾದಾತ್ಮಕವಾಗಿ ನಿರೂಪಿಸಿರುವ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣವೇ ಸರ್ಕಾರ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರಫುಲ್ಲಾ ಸಮಂತ್ರಾ ಒತ್ತಾಯಿಸಿದ್ದರು. ಪುಸ್ತಕದಲ್ಲಿ ತಪ್ಪುಗಳೇ ಹೆಚ್ಚಿವೆ. ಗಾಂಧೀಜಿಯವರು ಯಾವುದೋ ಅಪಘಾತದಿಂದ ನಿಧನರಾದರು ಎಂದು ತಿರುಚಲಾಗಿದೆ. ನಾಥುರಾಮ್ ಗೋಡ್ಸೆ ಅವರಂತಹ ಧರ್ಮಾಂಧರಿಂದ ಕೊಲ್ಲಲ್ಪಟ್ಟಿಲ್ಲ ಎಂದು ಬರೆಯುವ ಮೂಲಕ ಯುವ ಪೀಳಿಗೆಯನ್ನು ದಾರಿ ತಪ್ಪಿಸಲಾಗುತ್ತಿದೆ. ಗಾಂಧೀಜಿ ಅವರ 150ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ನಾವು, ನಮ್ಮ ರಾಷ್ಟ್ರಪಿತನಿಗೆ ಅವಮಾನ ಮಾಡುತ್ತಿದ್ದೇವೆ. ಇದು ನಾವು ತೋರಿದ ಅಗೌರವ ಎಂದು ಪ್ರಫುಲ್ಲಾ ಖಂಡಿಸಿದರು.

ಗಾಂಧಿ ಸ್ಮಾರಕ ಗ್ರಂಥಾಲಯದ ಕಾರ್ಯದರ್ಶಿ ಮನೋರಂಜನ್ ಸಾಹು ಮಾತನಾಡಿ, ಕಿರುಪುಸ್ತಕ ಸತ್ಯವನ್ನು ಮರೆಮಾಚಲು ಯತ್ನಿಸಿ, ವಿಫಲವಾಗಿದೆ. ಗಾಂಧೀಜಿ ಅವರು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ ಎಂದರೆ ಏನರ್ಥ..? ಅವರು ರಸ್ತೆಯಲ್ಲಿ ಹೋಗುವಾಗ ಮುಗ್ಗರಿಸಿ ಬಿದ್ದು ಮೃತಪಟ್ಟರೇ..? ಇಲ್ಲ. ಅವರನ್ನು ನಾಥುರಾಮ್‌ ಗೋಡ್ಸೆ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ಹೇಳಿದರು.

ಸಮಾಜವಾದಿ ಪತ್ರಿಕೆಯ ಸಂಪಾದಕ ಸುಧೀರ್‌ ಪಟ್ನಾಯಕ್‌ ಮಾತನಾಡಿ, ಒಡಿಶಾ ಶಿಕ್ಷಣದಲ್ಲಿ ಉಂಟಾಗುತ್ತಿರುವ ಕೇಸರೀಕರಣ ಮತ್ತು ಸಾಂಸ್ಥಿಕೀಕರಣ ಹೇಗೆ ನಡೆಯುತ್ತಿದೆ ಎಂಬುದು ಪುಸ್ತಕದಿಂದ ಗೊತ್ತಾಗಿದೆ. ಇದೊಂದು ದುರುದ್ದೇಶಪೂರಿತ ಯತ್ನವಾಗಿದೆ. ಒಡಿಶಾ ಸಿಎಂ, ಮಹಾತ್ಮಾ ಗಾಂಧೀಜಿಯವರ ಆದರ್ಶಗಳ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅವರ ಇಲಾಖೆಯಲ್ಲೇ ಇಂಥದ್ದೊಂದು ಅವಮಾನ ಮಾಡುವ ಘಟನೆ ನಡೆದಿದೆ ಎಂದು ಟೀಕಿಸಿದರು.

ಇನ್ನು ಕಳೆದ ತಿಂಗಳಷ್ಟೇ ಗುಜರಾತ್‌ನಲ್ಲಿ ಇದೇ ರೀತಿಯ ವಿವಾದ ಭುಗಿಲೆದ್ದಿತ್ತು. ಒಂಭತ್ತನೇ ತರಗತಿಯ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ‘ಮಹಾತ್ಮ ಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’ ಎಂಬ ಪ್ರಶ್ನೆಯನ್ನು ವಿದ್ಯಾರ್ಥಿಗಳಿಗೆ ಕೇಳಲಾಗಿತ್ತು. ಒಟ್ಟಿನಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನಿಗೆ ದೇಶವಿಂದು ವಿವಾದದ ಕೊಡುಗೆ ನೀಡುತ್ತಿರುವುದು ಶೋಚನೀಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...