HomeUncategorizedಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಗೋಡ್ಸೆ ಎಂಬ ಹಂತಕ ಗುಂಡಿಕ್ಕಿ ಹತ್ಯೆಗೈದದ್ದು ಇಡೀ ಜಗತ್ತೇ ಕಂಡ ಸತ್ಯ. ಆದರೆ ಅದನ್ನು ಒಡಿಶಾದಲ್ಲಿ ತಿರುಚಲಾಗಿದೆ. ಎರಡು ಪುಟಗಳ ಕಿರು ಪುಸ್ತಕವನ್ನು ಸಮೂಹ ಶಿಕ್ಷಣ ಇಲಾಖೆ ಪ್ರಕಟಿಸಿ, ವಿತರಿಸಿದೆ. ರಾಜ್ಯದ ಶಾಲೆಗಳಲ್ಲಿ ಗಾಂಧೀಜಿ ಹತ್ಯೆಯ ಸುತ್ತ ವಿವಾದ ಹುಟ್ಟುವಂತೆ ಮಾಡಿದೆ.

ಸಮೂಹ ಶಿಕ್ಷಣ ಇಲಾಖೆಯಿಂದ ಪ್ರಕಟಗೊಂಡಿರುವ ಎರಡು ಪುಟಗಳ ಕಿರು ಪುಸ್ತಕದಲ್ಲಿ ಮಹಾತ್ಮಾ ಗಾಂಧೀಜಿ ಅವರು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವಿವಾದಾತ್ಮಕ ವಿಷಯವನ್ನು ಬರೆಯಲಾಗಿದೆ. ಜನವರಿ 30, 1948 ರಂದು ನಡೆದ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟರು ಎಂದು ತಿರುಚಲಾಗಿದೆ. ಇದರಿಂದ ಶಿಕ್ಷಣ ಇಲಾಖೆಯನ್ನು ಒಡಿಶಾ ಸರ್ಕಾರ ತರಾಟೆಗೆ ತೆಗೆದುಕೊಂಡಿದೆ. ಇಂತಹ ವಿವಾದಾತ್ಮಕ ಪುಸ್ತಕವನ್ನು ಬರೆದವರು ಯಾರು, ಪ್ರಕಟಿಸಿ, ವಿತರಿಸಿದವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಒಡಿಶಾ ಶಿಕ್ಷಣ ಮಂತ್ರಿ ಸಮೀರ್‌ ರಂಜನ್‌ ದಾಸ್‌ ಮಾತನಾಡಿ, ’ನಮ್ಮ ಬಾಪೂಜಿ, ಒಂದು ನೋಟ’ ಎಂಬ ಶೀರ್ಷಿಕೆಯಿರುವ ಎರಡು ಪುಟಗಳ ವಿವಾದಾತ್ಮಕ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಇದೆಲ್ಲಾ ಹೇಗೆ ನಡೆಯಿತು ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಯಾರೇ ಕೃತ್ಯವೆಸಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಿರುಪುಸ್ತಕವನ್ನು ಹಿಂತೆಗೆದುಕೊಳ್ಳಲಾಗುವುದು. ಪುಸ್ತಕದಲ್ಲಿ ಗಾಂಧೀಜಿ ಸಾವು ಆಕಸ್ಮಿಕ ಅಪಘಾತ ಎಂದು ಉಲ್ಲೇಖಿಸುವ ಬದಲು ಅವರನ್ನು ಹೇಗೆ ಹತ್ಯೆಗೈದರು ಎಂಬ ಬಗ್ಗೆ ಸ್ಪಷ್ಟವಾಗಿ ಬರೆಯಬೇಕಾಗಿತ್ತು ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಬಗ್ಗೆ ಕಿರು ಪುಸ್ತಕದಲ್ಲಿ ವಿವಾದಾತ್ಮಕವಾಗಿ ನಿರೂಪಿಸಿರುವ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣವೇ ಸರ್ಕಾರ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರಫುಲ್ಲಾ ಸಮಂತ್ರಾ ಒತ್ತಾಯಿಸಿದ್ದರು. ಪುಸ್ತಕದಲ್ಲಿ ತಪ್ಪುಗಳೇ ಹೆಚ್ಚಿವೆ. ಗಾಂಧೀಜಿಯವರು ಯಾವುದೋ ಅಪಘಾತದಿಂದ ನಿಧನರಾದರು ಎಂದು ತಿರುಚಲಾಗಿದೆ. ನಾಥುರಾಮ್ ಗೋಡ್ಸೆ ಅವರಂತಹ ಧರ್ಮಾಂಧರಿಂದ ಕೊಲ್ಲಲ್ಪಟ್ಟಿಲ್ಲ ಎಂದು ಬರೆಯುವ ಮೂಲಕ ಯುವ ಪೀಳಿಗೆಯನ್ನು ದಾರಿ ತಪ್ಪಿಸಲಾಗುತ್ತಿದೆ. ಗಾಂಧೀಜಿ ಅವರ 150ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ನಾವು, ನಮ್ಮ ರಾಷ್ಟ್ರಪಿತನಿಗೆ ಅವಮಾನ ಮಾಡುತ್ತಿದ್ದೇವೆ. ಇದು ನಾವು ತೋರಿದ ಅಗೌರವ ಎಂದು ಪ್ರಫುಲ್ಲಾ ಖಂಡಿಸಿದರು.

ಗಾಂಧಿ ಸ್ಮಾರಕ ಗ್ರಂಥಾಲಯದ ಕಾರ್ಯದರ್ಶಿ ಮನೋರಂಜನ್ ಸಾಹು ಮಾತನಾಡಿ, ಕಿರುಪುಸ್ತಕ ಸತ್ಯವನ್ನು ಮರೆಮಾಚಲು ಯತ್ನಿಸಿ, ವಿಫಲವಾಗಿದೆ. ಗಾಂಧೀಜಿ ಅವರು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ ಎಂದರೆ ಏನರ್ಥ..? ಅವರು ರಸ್ತೆಯಲ್ಲಿ ಹೋಗುವಾಗ ಮುಗ್ಗರಿಸಿ ಬಿದ್ದು ಮೃತಪಟ್ಟರೇ..? ಇಲ್ಲ. ಅವರನ್ನು ನಾಥುರಾಮ್‌ ಗೋಡ್ಸೆ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ಹೇಳಿದರು.

ಸಮಾಜವಾದಿ ಪತ್ರಿಕೆಯ ಸಂಪಾದಕ ಸುಧೀರ್‌ ಪಟ್ನಾಯಕ್‌ ಮಾತನಾಡಿ, ಒಡಿಶಾ ಶಿಕ್ಷಣದಲ್ಲಿ ಉಂಟಾಗುತ್ತಿರುವ ಕೇಸರೀಕರಣ ಮತ್ತು ಸಾಂಸ್ಥಿಕೀಕರಣ ಹೇಗೆ ನಡೆಯುತ್ತಿದೆ ಎಂಬುದು ಪುಸ್ತಕದಿಂದ ಗೊತ್ತಾಗಿದೆ. ಇದೊಂದು ದುರುದ್ದೇಶಪೂರಿತ ಯತ್ನವಾಗಿದೆ. ಒಡಿಶಾ ಸಿಎಂ, ಮಹಾತ್ಮಾ ಗಾಂಧೀಜಿಯವರ ಆದರ್ಶಗಳ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅವರ ಇಲಾಖೆಯಲ್ಲೇ ಇಂಥದ್ದೊಂದು ಅವಮಾನ ಮಾಡುವ ಘಟನೆ ನಡೆದಿದೆ ಎಂದು ಟೀಕಿಸಿದರು.

ಇನ್ನು ಕಳೆದ ತಿಂಗಳಷ್ಟೇ ಗುಜರಾತ್‌ನಲ್ಲಿ ಇದೇ ರೀತಿಯ ವಿವಾದ ಭುಗಿಲೆದ್ದಿತ್ತು. ಒಂಭತ್ತನೇ ತರಗತಿಯ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ‘ಮಹಾತ್ಮ ಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’ ಎಂಬ ಪ್ರಶ್ನೆಯನ್ನು ವಿದ್ಯಾರ್ಥಿಗಳಿಗೆ ಕೇಳಲಾಗಿತ್ತು. ಒಟ್ಟಿನಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನಿಗೆ ದೇಶವಿಂದು ವಿವಾದದ ಕೊಡುಗೆ ನೀಡುತ್ತಿರುವುದು ಶೋಚನೀಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...