HomeUncategorizedಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಗೋಡ್ಸೆ ಎಂಬ ಹಂತಕ ಗುಂಡಿಕ್ಕಿ ಹತ್ಯೆಗೈದದ್ದು ಇಡೀ ಜಗತ್ತೇ ಕಂಡ ಸತ್ಯ. ಆದರೆ ಅದನ್ನು ಒಡಿಶಾದಲ್ಲಿ ತಿರುಚಲಾಗಿದೆ. ಎರಡು ಪುಟಗಳ ಕಿರು ಪುಸ್ತಕವನ್ನು ಸಮೂಹ ಶಿಕ್ಷಣ ಇಲಾಖೆ ಪ್ರಕಟಿಸಿ, ವಿತರಿಸಿದೆ. ರಾಜ್ಯದ ಶಾಲೆಗಳಲ್ಲಿ ಗಾಂಧೀಜಿ ಹತ್ಯೆಯ ಸುತ್ತ ವಿವಾದ ಹುಟ್ಟುವಂತೆ ಮಾಡಿದೆ.

ಸಮೂಹ ಶಿಕ್ಷಣ ಇಲಾಖೆಯಿಂದ ಪ್ರಕಟಗೊಂಡಿರುವ ಎರಡು ಪುಟಗಳ ಕಿರು ಪುಸ್ತಕದಲ್ಲಿ ಮಹಾತ್ಮಾ ಗಾಂಧೀಜಿ ಅವರು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವಿವಾದಾತ್ಮಕ ವಿಷಯವನ್ನು ಬರೆಯಲಾಗಿದೆ. ಜನವರಿ 30, 1948 ರಂದು ನಡೆದ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟರು ಎಂದು ತಿರುಚಲಾಗಿದೆ. ಇದರಿಂದ ಶಿಕ್ಷಣ ಇಲಾಖೆಯನ್ನು ಒಡಿಶಾ ಸರ್ಕಾರ ತರಾಟೆಗೆ ತೆಗೆದುಕೊಂಡಿದೆ. ಇಂತಹ ವಿವಾದಾತ್ಮಕ ಪುಸ್ತಕವನ್ನು ಬರೆದವರು ಯಾರು, ಪ್ರಕಟಿಸಿ, ವಿತರಿಸಿದವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಒಡಿಶಾ ಶಿಕ್ಷಣ ಮಂತ್ರಿ ಸಮೀರ್‌ ರಂಜನ್‌ ದಾಸ್‌ ಮಾತನಾಡಿ, ’ನಮ್ಮ ಬಾಪೂಜಿ, ಒಂದು ನೋಟ’ ಎಂಬ ಶೀರ್ಷಿಕೆಯಿರುವ ಎರಡು ಪುಟಗಳ ವಿವಾದಾತ್ಮಕ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಇದೆಲ್ಲಾ ಹೇಗೆ ನಡೆಯಿತು ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಯಾರೇ ಕೃತ್ಯವೆಸಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಿರುಪುಸ್ತಕವನ್ನು ಹಿಂತೆಗೆದುಕೊಳ್ಳಲಾಗುವುದು. ಪುಸ್ತಕದಲ್ಲಿ ಗಾಂಧೀಜಿ ಸಾವು ಆಕಸ್ಮಿಕ ಅಪಘಾತ ಎಂದು ಉಲ್ಲೇಖಿಸುವ ಬದಲು ಅವರನ್ನು ಹೇಗೆ ಹತ್ಯೆಗೈದರು ಎಂಬ ಬಗ್ಗೆ ಸ್ಪಷ್ಟವಾಗಿ ಬರೆಯಬೇಕಾಗಿತ್ತು ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಬಗ್ಗೆ ಕಿರು ಪುಸ್ತಕದಲ್ಲಿ ವಿವಾದಾತ್ಮಕವಾಗಿ ನಿರೂಪಿಸಿರುವ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣವೇ ಸರ್ಕಾರ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರಫುಲ್ಲಾ ಸಮಂತ್ರಾ ಒತ್ತಾಯಿಸಿದ್ದರು. ಪುಸ್ತಕದಲ್ಲಿ ತಪ್ಪುಗಳೇ ಹೆಚ್ಚಿವೆ. ಗಾಂಧೀಜಿಯವರು ಯಾವುದೋ ಅಪಘಾತದಿಂದ ನಿಧನರಾದರು ಎಂದು ತಿರುಚಲಾಗಿದೆ. ನಾಥುರಾಮ್ ಗೋಡ್ಸೆ ಅವರಂತಹ ಧರ್ಮಾಂಧರಿಂದ ಕೊಲ್ಲಲ್ಪಟ್ಟಿಲ್ಲ ಎಂದು ಬರೆಯುವ ಮೂಲಕ ಯುವ ಪೀಳಿಗೆಯನ್ನು ದಾರಿ ತಪ್ಪಿಸಲಾಗುತ್ತಿದೆ. ಗಾಂಧೀಜಿ ಅವರ 150ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ನಾವು, ನಮ್ಮ ರಾಷ್ಟ್ರಪಿತನಿಗೆ ಅವಮಾನ ಮಾಡುತ್ತಿದ್ದೇವೆ. ಇದು ನಾವು ತೋರಿದ ಅಗೌರವ ಎಂದು ಪ್ರಫುಲ್ಲಾ ಖಂಡಿಸಿದರು.

ಗಾಂಧಿ ಸ್ಮಾರಕ ಗ್ರಂಥಾಲಯದ ಕಾರ್ಯದರ್ಶಿ ಮನೋರಂಜನ್ ಸಾಹು ಮಾತನಾಡಿ, ಕಿರುಪುಸ್ತಕ ಸತ್ಯವನ್ನು ಮರೆಮಾಚಲು ಯತ್ನಿಸಿ, ವಿಫಲವಾಗಿದೆ. ಗಾಂಧೀಜಿ ಅವರು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ ಎಂದರೆ ಏನರ್ಥ..? ಅವರು ರಸ್ತೆಯಲ್ಲಿ ಹೋಗುವಾಗ ಮುಗ್ಗರಿಸಿ ಬಿದ್ದು ಮೃತಪಟ್ಟರೇ..? ಇಲ್ಲ. ಅವರನ್ನು ನಾಥುರಾಮ್‌ ಗೋಡ್ಸೆ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ಹೇಳಿದರು.

ಸಮಾಜವಾದಿ ಪತ್ರಿಕೆಯ ಸಂಪಾದಕ ಸುಧೀರ್‌ ಪಟ್ನಾಯಕ್‌ ಮಾತನಾಡಿ, ಒಡಿಶಾ ಶಿಕ್ಷಣದಲ್ಲಿ ಉಂಟಾಗುತ್ತಿರುವ ಕೇಸರೀಕರಣ ಮತ್ತು ಸಾಂಸ್ಥಿಕೀಕರಣ ಹೇಗೆ ನಡೆಯುತ್ತಿದೆ ಎಂಬುದು ಪುಸ್ತಕದಿಂದ ಗೊತ್ತಾಗಿದೆ. ಇದೊಂದು ದುರುದ್ದೇಶಪೂರಿತ ಯತ್ನವಾಗಿದೆ. ಒಡಿಶಾ ಸಿಎಂ, ಮಹಾತ್ಮಾ ಗಾಂಧೀಜಿಯವರ ಆದರ್ಶಗಳ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅವರ ಇಲಾಖೆಯಲ್ಲೇ ಇಂಥದ್ದೊಂದು ಅವಮಾನ ಮಾಡುವ ಘಟನೆ ನಡೆದಿದೆ ಎಂದು ಟೀಕಿಸಿದರು.

ಇನ್ನು ಕಳೆದ ತಿಂಗಳಷ್ಟೇ ಗುಜರಾತ್‌ನಲ್ಲಿ ಇದೇ ರೀತಿಯ ವಿವಾದ ಭುಗಿಲೆದ್ದಿತ್ತು. ಒಂಭತ್ತನೇ ತರಗತಿಯ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ‘ಮಹಾತ್ಮ ಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’ ಎಂಬ ಪ್ರಶ್ನೆಯನ್ನು ವಿದ್ಯಾರ್ಥಿಗಳಿಗೆ ಕೇಳಲಾಗಿತ್ತು. ಒಟ್ಟಿನಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನಿಗೆ ದೇಶವಿಂದು ವಿವಾದದ ಕೊಡುಗೆ ನೀಡುತ್ತಿರುವುದು ಶೋಚನೀಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...