Homeಅಂತರಾಷ್ಟ್ರೀಯ1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ವೇಳೆ ದೇವಾಲಯವನ್ನು ಧ್ವಂಸ ಮಾಡಿ ಬೆಂಕಿ ಹಚ್ಚಲಾಗಿತ್ತು

- Advertisement -
- Advertisement -

ಸುದೀರ್ಘ ಕಾನೂನು ಹೋರಾಟದ ನಂತರ ಪಾಕಿಸ್ತಾನದ ಲಾಹೋರ್ ನಗರದಲ್ಲಿ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ದೇಶದ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣಾ ಫೆಡರಲ್ ಸಂಸ್ಥೆಯಾದ ದಿ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ)  ಬುಧವಾರ ತಿಳಿಸಿದೆ. ಈಗಾಗಲೆ ಅಲ್ಲಿರುವ “ಅಕ್ರಮ ನಿವಾಸಿಗಳನ್ನು” ಹೊರಹಾಕಿದ ನಂತರ ಕೆಲಸ ಪ್ರಾರಂಭಿಸುವುದಾಗಿ ಸಂಸ್ಥೆ ಹೇಳಿದೆ.

ಇವಾಕ್ಯೂ ಟ್ರಸ್ಟ್‌ ಕಳೆದ ತಿಂಗಳು ಪ್ರಸಿದ್ಧ ಅನಾರ್ಕಲಿ ಬಜಾರ್ ಲಾಹೋರ್ ಬಳಿ ಇರುವ ವಾಲ್ಮೀಕಿ ದೇವಾಲಯವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ. ಕೃಷ್ಣ ದೇವಾಲಯದ ಪಕ್ಕದ ವಾಲ್ಮೀಕಿ ದೇವಾಲಯವು ಲಾಹೋರ್‌ನಲ್ಲಿರುವ ಏಕೈಕ ಸಕ್ರಿಯವಾಗಿರುವ ದೇವಾಲಯವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಹೇಳಿಕೊಳ್ಳುವ ಕ್ರೈಸ್ತ ಕುಟುಂಬ ಕಳೆದ ಎರಡು ದಶಕಗಳಿಂದ ವಾಲ್ಮೀಕಿ ಜಾತಿಯ ಹಿಂದೂಗಳಿಗೆ ಮಾತ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುತ್ತಿತ್ತು. ಇಪ್ಪತ್ತು ವರ್ಷಗಳ ಹಿಂದೆ ಕ್ರಿಶ್ಚಿಯನ್ ಕುಟುಂಬ ದೇವಾಲಯವನ್ನು ವಶಪಡಿಸಿಕೊಂಡಿತ್ತು.

‘ಮಾಸ್ಟರ್ ಪ್ಲಾನ್’ ಪ್ರಕಾರ ಮುಂದಿನ ದಿನಗಳಲ್ಲಿ ವಾಲ್ಮೀಕಿ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ಇವಾಕ್ಯೂ ಟ್ರಸ್ಟ್ ವಕ್ತಾರ ಅಮೀರ್ ಹಶ್ಮಿ ಪಿಟಿಐಗೆ ತಿಳಿಸಿದ್ದಾರೆ. “100 ಕ್ಕೂ ಹೆಚ್ಚು ಹಿಂದೂಗಳು, ಕೆಲವು ಸಿಖ್ ಮತ್ತು ಕ್ರಿಶ್ಚಿಯನ್ ನಾಯಕರು ಇಂದು ವಾಲ್ಮೀಕಿ ದೇವಸ್ಥಾನದಲ್ಲಿ ಜಮಾಯಿಸಿದರು. ಹಿಂದೂಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ಮಾಡಿದರು” ಎಂದು ಅವರು ಹೇಳಿದ್ದಾರೆ.

“ದೇವಾಲಯದ ಭೂಮಿಯನ್ನು ಕಂದಾಯ ದಾಖಲೆಯಲ್ಲಿ ಇಟಿಪಿಬಿಗೆ ವರ್ಗಾಯಿಸಲಾಗಿದೆ. ಆದರೆ ಕುಟುಂಬವು 2010-2011 ರಲ್ಲಿ ಆಸ್ತಿಯ ಮಾಲೀಕರು ಎಂದು ಹೇಳಿಕೊಂಡು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು” ಎಂದು ಇವಾಕ್ಯೂ ಟ್ರಸ್ಟ್‌ ಅಧಿಕಾರಿಯೊಬ್ಬರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

“ಕುಟುಂಬವು ನ್ಯಾಯಾಲಯಕ್ಕೆ ಹೋಗಿದ್ದು ಮಾತ್ರವಲ್ಲದೆ ದೇವಾಲಯವನ್ನು ವಾಲ್ಮೀಕಿ ಹಿಂದೂಗಳಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶ ಕೊಟ್ಟಿತ್ತು. ಹಾಗಾಗಿ ಇವಾಕ್ಯೂ ಟ್ರಸ್ಟ್‌ಗೆ ಪ್ರಕರಣದ ಹೋರಾಟವನ್ನು ನ್ಯಾಯಾಲಯ ಹೊರತುಪಡಿಸಿ ಯಾವುದೇ ಆಯ್ಕೆ ಇರಲಿಲ್ಲ. ನ್ಯಾಯಾಲಯವು ಸುಳ್ಳು ಪ್ರತಿಪಾದನೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಛೀಮಾರಿ ಹಾಕಿದೆ” ಎಂದು ಅಧಿಕಾರಿ ಹೇಳಿದ್ದಾರೆ.

1992 ರಲ್ಲಿ ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಉದ್ರಿಕ್ತ ಜನಸಮೂಹವು ಶಸ್ತ್ರಾಸ್ತ್ರಗಳನ್ನು ಹಿಡಿದು ವಾಲ್ಮೀಕಿ ದೇವಾಲಯಕ್ಕೆ ನುಗ್ಗಿತ್ತು. ಕೃಷ್ಣ ಮತ್ತು ವಾಲ್ಮೀಕಿ ವಿಗ್ರಹಗಳನ್ನು ಒಡೆದು, ಅಡುಗೆಮನೆಯಲ್ಲಿದ್ದ ಪಾತ್ರೆ ಪಗಡೆಗಳನ್ನು ಒಡೆದು, ಪ್ರತಿಮೆಗಳ ಮೇಲೆ ಅಲಂಕರಿಸಿದ ಚಿನ್ನವನ್ನು ವಶಪಡಿಸಿಕೊಂಡಿದ್ದರು ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ದೇವಾಲಯವನ್ನು ಕೆಡವಿ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಬೆಂಕಿ  ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿ ನಂದಿಸಲು ಅಧಿಕಾರಿಗಳಿಗೆ ದಿನಗಟ್ಟಲೆ ಪರದಾಡಬೇಕಾಯಿತು ಎಂದು ವರದಿ ಹೇಳಿದೆ.

ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಿಂದ ರಚಿಸಲ್ಪಟ್ಟ ಏಕವ್ಯಕ್ತಿ ಆಯೋಗವು ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿತು. ಈ ಆಯೋಗವೂ ಹಿಂದೂ ಸಮುದಾಯಕ್ಕೆ ಉತ್ತಮ ಸೌಲಭ್ಯಗಳೊಂದಿಗೆ ದೇವಾಲಯವನ್ನು ನವೀಕರಿಸಬೇಕು ಎಂದು ಇವಾಕ್ಯೂ ಟ್ರಸ್ಟ್‌ ವಕ್ತಾರರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ದೇಶ ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದ ಸಿಖ್ಖರು ಮತ್ತು ಹಿಂದೂಗಳು ಬಿಟ್ಟುಹೋದ ದೇವಾಲಯಗಳು ಮತ್ತು ಭೂಮಿಯನ್ನು ಇವಾಕ್ಯೂ ಟ್ರಸ್ಟ್‌ ನೋಡಿಕೊಳ್ಳುತ್ತದೆ. ಇವಾಕ್ಯೂ ಟ್ರಸ್ಟ್‌‌ ಪಾಕಿಸ್ತಾನದಾದ್ಯಂತ 200 ಗುರುದ್ವಾರಗಳು ಮತ್ತು 150 ದೇವಾಲಯಗಳನ್ನು ನೋಡಿಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...