Homeಅಂತರಾಷ್ಟ್ರೀಯ1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ವೇಳೆ ದೇವಾಲಯವನ್ನು ಧ್ವಂಸ ಮಾಡಿ ಬೆಂಕಿ ಹಚ್ಚಲಾಗಿತ್ತು

- Advertisement -
- Advertisement -

ಸುದೀರ್ಘ ಕಾನೂನು ಹೋರಾಟದ ನಂತರ ಪಾಕಿಸ್ತಾನದ ಲಾಹೋರ್ ನಗರದಲ್ಲಿ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ದೇಶದ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣಾ ಫೆಡರಲ್ ಸಂಸ್ಥೆಯಾದ ದಿ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ)  ಬುಧವಾರ ತಿಳಿಸಿದೆ. ಈಗಾಗಲೆ ಅಲ್ಲಿರುವ “ಅಕ್ರಮ ನಿವಾಸಿಗಳನ್ನು” ಹೊರಹಾಕಿದ ನಂತರ ಕೆಲಸ ಪ್ರಾರಂಭಿಸುವುದಾಗಿ ಸಂಸ್ಥೆ ಹೇಳಿದೆ.

ಇವಾಕ್ಯೂ ಟ್ರಸ್ಟ್‌ ಕಳೆದ ತಿಂಗಳು ಪ್ರಸಿದ್ಧ ಅನಾರ್ಕಲಿ ಬಜಾರ್ ಲಾಹೋರ್ ಬಳಿ ಇರುವ ವಾಲ್ಮೀಕಿ ದೇವಾಲಯವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ. ಕೃಷ್ಣ ದೇವಾಲಯದ ಪಕ್ಕದ ವಾಲ್ಮೀಕಿ ದೇವಾಲಯವು ಲಾಹೋರ್‌ನಲ್ಲಿರುವ ಏಕೈಕ ಸಕ್ರಿಯವಾಗಿರುವ ದೇವಾಲಯವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಹೇಳಿಕೊಳ್ಳುವ ಕ್ರೈಸ್ತ ಕುಟುಂಬ ಕಳೆದ ಎರಡು ದಶಕಗಳಿಂದ ವಾಲ್ಮೀಕಿ ಜಾತಿಯ ಹಿಂದೂಗಳಿಗೆ ಮಾತ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುತ್ತಿತ್ತು. ಇಪ್ಪತ್ತು ವರ್ಷಗಳ ಹಿಂದೆ ಕ್ರಿಶ್ಚಿಯನ್ ಕುಟುಂಬ ದೇವಾಲಯವನ್ನು ವಶಪಡಿಸಿಕೊಂಡಿತ್ತು.

‘ಮಾಸ್ಟರ್ ಪ್ಲಾನ್’ ಪ್ರಕಾರ ಮುಂದಿನ ದಿನಗಳಲ್ಲಿ ವಾಲ್ಮೀಕಿ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ಇವಾಕ್ಯೂ ಟ್ರಸ್ಟ್ ವಕ್ತಾರ ಅಮೀರ್ ಹಶ್ಮಿ ಪಿಟಿಐಗೆ ತಿಳಿಸಿದ್ದಾರೆ. “100 ಕ್ಕೂ ಹೆಚ್ಚು ಹಿಂದೂಗಳು, ಕೆಲವು ಸಿಖ್ ಮತ್ತು ಕ್ರಿಶ್ಚಿಯನ್ ನಾಯಕರು ಇಂದು ವಾಲ್ಮೀಕಿ ದೇವಸ್ಥಾನದಲ್ಲಿ ಜಮಾಯಿಸಿದರು. ಹಿಂದೂಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ಮಾಡಿದರು” ಎಂದು ಅವರು ಹೇಳಿದ್ದಾರೆ.

“ದೇವಾಲಯದ ಭೂಮಿಯನ್ನು ಕಂದಾಯ ದಾಖಲೆಯಲ್ಲಿ ಇಟಿಪಿಬಿಗೆ ವರ್ಗಾಯಿಸಲಾಗಿದೆ. ಆದರೆ ಕುಟುಂಬವು 2010-2011 ರಲ್ಲಿ ಆಸ್ತಿಯ ಮಾಲೀಕರು ಎಂದು ಹೇಳಿಕೊಂಡು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು” ಎಂದು ಇವಾಕ್ಯೂ ಟ್ರಸ್ಟ್‌ ಅಧಿಕಾರಿಯೊಬ್ಬರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

“ಕುಟುಂಬವು ನ್ಯಾಯಾಲಯಕ್ಕೆ ಹೋಗಿದ್ದು ಮಾತ್ರವಲ್ಲದೆ ದೇವಾಲಯವನ್ನು ವಾಲ್ಮೀಕಿ ಹಿಂದೂಗಳಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶ ಕೊಟ್ಟಿತ್ತು. ಹಾಗಾಗಿ ಇವಾಕ್ಯೂ ಟ್ರಸ್ಟ್‌ಗೆ ಪ್ರಕರಣದ ಹೋರಾಟವನ್ನು ನ್ಯಾಯಾಲಯ ಹೊರತುಪಡಿಸಿ ಯಾವುದೇ ಆಯ್ಕೆ ಇರಲಿಲ್ಲ. ನ್ಯಾಯಾಲಯವು ಸುಳ್ಳು ಪ್ರತಿಪಾದನೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಛೀಮಾರಿ ಹಾಕಿದೆ” ಎಂದು ಅಧಿಕಾರಿ ಹೇಳಿದ್ದಾರೆ.

1992 ರಲ್ಲಿ ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಉದ್ರಿಕ್ತ ಜನಸಮೂಹವು ಶಸ್ತ್ರಾಸ್ತ್ರಗಳನ್ನು ಹಿಡಿದು ವಾಲ್ಮೀಕಿ ದೇವಾಲಯಕ್ಕೆ ನುಗ್ಗಿತ್ತು. ಕೃಷ್ಣ ಮತ್ತು ವಾಲ್ಮೀಕಿ ವಿಗ್ರಹಗಳನ್ನು ಒಡೆದು, ಅಡುಗೆಮನೆಯಲ್ಲಿದ್ದ ಪಾತ್ರೆ ಪಗಡೆಗಳನ್ನು ಒಡೆದು, ಪ್ರತಿಮೆಗಳ ಮೇಲೆ ಅಲಂಕರಿಸಿದ ಚಿನ್ನವನ್ನು ವಶಪಡಿಸಿಕೊಂಡಿದ್ದರು ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ದೇವಾಲಯವನ್ನು ಕೆಡವಿ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಬೆಂಕಿ  ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿ ನಂದಿಸಲು ಅಧಿಕಾರಿಗಳಿಗೆ ದಿನಗಟ್ಟಲೆ ಪರದಾಡಬೇಕಾಯಿತು ಎಂದು ವರದಿ ಹೇಳಿದೆ.

ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಿಂದ ರಚಿಸಲ್ಪಟ್ಟ ಏಕವ್ಯಕ್ತಿ ಆಯೋಗವು ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿತು. ಈ ಆಯೋಗವೂ ಹಿಂದೂ ಸಮುದಾಯಕ್ಕೆ ಉತ್ತಮ ಸೌಲಭ್ಯಗಳೊಂದಿಗೆ ದೇವಾಲಯವನ್ನು ನವೀಕರಿಸಬೇಕು ಎಂದು ಇವಾಕ್ಯೂ ಟ್ರಸ್ಟ್‌ ವಕ್ತಾರರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ದೇಶ ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದ ಸಿಖ್ಖರು ಮತ್ತು ಹಿಂದೂಗಳು ಬಿಟ್ಟುಹೋದ ದೇವಾಲಯಗಳು ಮತ್ತು ಭೂಮಿಯನ್ನು ಇವಾಕ್ಯೂ ಟ್ರಸ್ಟ್‌ ನೋಡಿಕೊಳ್ಳುತ್ತದೆ. ಇವಾಕ್ಯೂ ಟ್ರಸ್ಟ್‌‌ ಪಾಕಿಸ್ತಾನದಾದ್ಯಂತ 200 ಗುರುದ್ವಾರಗಳು ಮತ್ತು 150 ದೇವಾಲಯಗಳನ್ನು ನೋಡಿಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...