Homeಅಂತರಾಷ್ಟ್ರೀಯ1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ವೇಳೆ ದೇವಾಲಯವನ್ನು ಧ್ವಂಸ ಮಾಡಿ ಬೆಂಕಿ ಹಚ್ಚಲಾಗಿತ್ತು

- Advertisement -
- Advertisement -

ಸುದೀರ್ಘ ಕಾನೂನು ಹೋರಾಟದ ನಂತರ ಪಾಕಿಸ್ತಾನದ ಲಾಹೋರ್ ನಗರದಲ್ಲಿ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ದೇಶದ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣಾ ಫೆಡರಲ್ ಸಂಸ್ಥೆಯಾದ ದಿ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ)  ಬುಧವಾರ ತಿಳಿಸಿದೆ. ಈಗಾಗಲೆ ಅಲ್ಲಿರುವ “ಅಕ್ರಮ ನಿವಾಸಿಗಳನ್ನು” ಹೊರಹಾಕಿದ ನಂತರ ಕೆಲಸ ಪ್ರಾರಂಭಿಸುವುದಾಗಿ ಸಂಸ್ಥೆ ಹೇಳಿದೆ.

ಇವಾಕ್ಯೂ ಟ್ರಸ್ಟ್‌ ಕಳೆದ ತಿಂಗಳು ಪ್ರಸಿದ್ಧ ಅನಾರ್ಕಲಿ ಬಜಾರ್ ಲಾಹೋರ್ ಬಳಿ ಇರುವ ವಾಲ್ಮೀಕಿ ದೇವಾಲಯವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ. ಕೃಷ್ಣ ದೇವಾಲಯದ ಪಕ್ಕದ ವಾಲ್ಮೀಕಿ ದೇವಾಲಯವು ಲಾಹೋರ್‌ನಲ್ಲಿರುವ ಏಕೈಕ ಸಕ್ರಿಯವಾಗಿರುವ ದೇವಾಲಯವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಹೇಳಿಕೊಳ್ಳುವ ಕ್ರೈಸ್ತ ಕುಟುಂಬ ಕಳೆದ ಎರಡು ದಶಕಗಳಿಂದ ವಾಲ್ಮೀಕಿ ಜಾತಿಯ ಹಿಂದೂಗಳಿಗೆ ಮಾತ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುತ್ತಿತ್ತು. ಇಪ್ಪತ್ತು ವರ್ಷಗಳ ಹಿಂದೆ ಕ್ರಿಶ್ಚಿಯನ್ ಕುಟುಂಬ ದೇವಾಲಯವನ್ನು ವಶಪಡಿಸಿಕೊಂಡಿತ್ತು.

‘ಮಾಸ್ಟರ್ ಪ್ಲಾನ್’ ಪ್ರಕಾರ ಮುಂದಿನ ದಿನಗಳಲ್ಲಿ ವಾಲ್ಮೀಕಿ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ಇವಾಕ್ಯೂ ಟ್ರಸ್ಟ್ ವಕ್ತಾರ ಅಮೀರ್ ಹಶ್ಮಿ ಪಿಟಿಐಗೆ ತಿಳಿಸಿದ್ದಾರೆ. “100 ಕ್ಕೂ ಹೆಚ್ಚು ಹಿಂದೂಗಳು, ಕೆಲವು ಸಿಖ್ ಮತ್ತು ಕ್ರಿಶ್ಚಿಯನ್ ನಾಯಕರು ಇಂದು ವಾಲ್ಮೀಕಿ ದೇವಸ್ಥಾನದಲ್ಲಿ ಜಮಾಯಿಸಿದರು. ಹಿಂದೂಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ಮಾಡಿದರು” ಎಂದು ಅವರು ಹೇಳಿದ್ದಾರೆ.

“ದೇವಾಲಯದ ಭೂಮಿಯನ್ನು ಕಂದಾಯ ದಾಖಲೆಯಲ್ಲಿ ಇಟಿಪಿಬಿಗೆ ವರ್ಗಾಯಿಸಲಾಗಿದೆ. ಆದರೆ ಕುಟುಂಬವು 2010-2011 ರಲ್ಲಿ ಆಸ್ತಿಯ ಮಾಲೀಕರು ಎಂದು ಹೇಳಿಕೊಂಡು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು” ಎಂದು ಇವಾಕ್ಯೂ ಟ್ರಸ್ಟ್‌ ಅಧಿಕಾರಿಯೊಬ್ಬರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

“ಕುಟುಂಬವು ನ್ಯಾಯಾಲಯಕ್ಕೆ ಹೋಗಿದ್ದು ಮಾತ್ರವಲ್ಲದೆ ದೇವಾಲಯವನ್ನು ವಾಲ್ಮೀಕಿ ಹಿಂದೂಗಳಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶ ಕೊಟ್ಟಿತ್ತು. ಹಾಗಾಗಿ ಇವಾಕ್ಯೂ ಟ್ರಸ್ಟ್‌ಗೆ ಪ್ರಕರಣದ ಹೋರಾಟವನ್ನು ನ್ಯಾಯಾಲಯ ಹೊರತುಪಡಿಸಿ ಯಾವುದೇ ಆಯ್ಕೆ ಇರಲಿಲ್ಲ. ನ್ಯಾಯಾಲಯವು ಸುಳ್ಳು ಪ್ರತಿಪಾದನೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಛೀಮಾರಿ ಹಾಕಿದೆ” ಎಂದು ಅಧಿಕಾರಿ ಹೇಳಿದ್ದಾರೆ.

1992 ರಲ್ಲಿ ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಉದ್ರಿಕ್ತ ಜನಸಮೂಹವು ಶಸ್ತ್ರಾಸ್ತ್ರಗಳನ್ನು ಹಿಡಿದು ವಾಲ್ಮೀಕಿ ದೇವಾಲಯಕ್ಕೆ ನುಗ್ಗಿತ್ತು. ಕೃಷ್ಣ ಮತ್ತು ವಾಲ್ಮೀಕಿ ವಿಗ್ರಹಗಳನ್ನು ಒಡೆದು, ಅಡುಗೆಮನೆಯಲ್ಲಿದ್ದ ಪಾತ್ರೆ ಪಗಡೆಗಳನ್ನು ಒಡೆದು, ಪ್ರತಿಮೆಗಳ ಮೇಲೆ ಅಲಂಕರಿಸಿದ ಚಿನ್ನವನ್ನು ವಶಪಡಿಸಿಕೊಂಡಿದ್ದರು ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ದೇವಾಲಯವನ್ನು ಕೆಡವಿ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಬೆಂಕಿ  ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿ ನಂದಿಸಲು ಅಧಿಕಾರಿಗಳಿಗೆ ದಿನಗಟ್ಟಲೆ ಪರದಾಡಬೇಕಾಯಿತು ಎಂದು ವರದಿ ಹೇಳಿದೆ.

ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಿಂದ ರಚಿಸಲ್ಪಟ್ಟ ಏಕವ್ಯಕ್ತಿ ಆಯೋಗವು ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿತು. ಈ ಆಯೋಗವೂ ಹಿಂದೂ ಸಮುದಾಯಕ್ಕೆ ಉತ್ತಮ ಸೌಲಭ್ಯಗಳೊಂದಿಗೆ ದೇವಾಲಯವನ್ನು ನವೀಕರಿಸಬೇಕು ಎಂದು ಇವಾಕ್ಯೂ ಟ್ರಸ್ಟ್‌ ವಕ್ತಾರರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ದೇಶ ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದ ಸಿಖ್ಖರು ಮತ್ತು ಹಿಂದೂಗಳು ಬಿಟ್ಟುಹೋದ ದೇವಾಲಯಗಳು ಮತ್ತು ಭೂಮಿಯನ್ನು ಇವಾಕ್ಯೂ ಟ್ರಸ್ಟ್‌ ನೋಡಿಕೊಳ್ಳುತ್ತದೆ. ಇವಾಕ್ಯೂ ಟ್ರಸ್ಟ್‌‌ ಪಾಕಿಸ್ತಾನದಾದ್ಯಂತ 200 ಗುರುದ್ವಾರಗಳು ಮತ್ತು 150 ದೇವಾಲಯಗಳನ್ನು ನೋಡಿಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....