Homeಅಂತರಾಷ್ಟ್ರೀಯ1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ವೇಳೆ ದೇವಾಲಯವನ್ನು ಧ್ವಂಸ ಮಾಡಿ ಬೆಂಕಿ ಹಚ್ಚಲಾಗಿತ್ತು

- Advertisement -
- Advertisement -

ಸುದೀರ್ಘ ಕಾನೂನು ಹೋರಾಟದ ನಂತರ ಪಾಕಿಸ್ತಾನದ ಲಾಹೋರ್ ನಗರದಲ್ಲಿ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ದೇಶದ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣಾ ಫೆಡರಲ್ ಸಂಸ್ಥೆಯಾದ ದಿ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ)  ಬುಧವಾರ ತಿಳಿಸಿದೆ. ಈಗಾಗಲೆ ಅಲ್ಲಿರುವ “ಅಕ್ರಮ ನಿವಾಸಿಗಳನ್ನು” ಹೊರಹಾಕಿದ ನಂತರ ಕೆಲಸ ಪ್ರಾರಂಭಿಸುವುದಾಗಿ ಸಂಸ್ಥೆ ಹೇಳಿದೆ.

ಇವಾಕ್ಯೂ ಟ್ರಸ್ಟ್‌ ಕಳೆದ ತಿಂಗಳು ಪ್ರಸಿದ್ಧ ಅನಾರ್ಕಲಿ ಬಜಾರ್ ಲಾಹೋರ್ ಬಳಿ ಇರುವ ವಾಲ್ಮೀಕಿ ದೇವಾಲಯವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ. ಕೃಷ್ಣ ದೇವಾಲಯದ ಪಕ್ಕದ ವಾಲ್ಮೀಕಿ ದೇವಾಲಯವು ಲಾಹೋರ್‌ನಲ್ಲಿರುವ ಏಕೈಕ ಸಕ್ರಿಯವಾಗಿರುವ ದೇವಾಲಯವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಹೇಳಿಕೊಳ್ಳುವ ಕ್ರೈಸ್ತ ಕುಟುಂಬ ಕಳೆದ ಎರಡು ದಶಕಗಳಿಂದ ವಾಲ್ಮೀಕಿ ಜಾತಿಯ ಹಿಂದೂಗಳಿಗೆ ಮಾತ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುತ್ತಿತ್ತು. ಇಪ್ಪತ್ತು ವರ್ಷಗಳ ಹಿಂದೆ ಕ್ರಿಶ್ಚಿಯನ್ ಕುಟುಂಬ ದೇವಾಲಯವನ್ನು ವಶಪಡಿಸಿಕೊಂಡಿತ್ತು.

‘ಮಾಸ್ಟರ್ ಪ್ಲಾನ್’ ಪ್ರಕಾರ ಮುಂದಿನ ದಿನಗಳಲ್ಲಿ ವಾಲ್ಮೀಕಿ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ಇವಾಕ್ಯೂ ಟ್ರಸ್ಟ್ ವಕ್ತಾರ ಅಮೀರ್ ಹಶ್ಮಿ ಪಿಟಿಐಗೆ ತಿಳಿಸಿದ್ದಾರೆ. “100 ಕ್ಕೂ ಹೆಚ್ಚು ಹಿಂದೂಗಳು, ಕೆಲವು ಸಿಖ್ ಮತ್ತು ಕ್ರಿಶ್ಚಿಯನ್ ನಾಯಕರು ಇಂದು ವಾಲ್ಮೀಕಿ ದೇವಸ್ಥಾನದಲ್ಲಿ ಜಮಾಯಿಸಿದರು. ಹಿಂದೂಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ಮಾಡಿದರು” ಎಂದು ಅವರು ಹೇಳಿದ್ದಾರೆ.

“ದೇವಾಲಯದ ಭೂಮಿಯನ್ನು ಕಂದಾಯ ದಾಖಲೆಯಲ್ಲಿ ಇಟಿಪಿಬಿಗೆ ವರ್ಗಾಯಿಸಲಾಗಿದೆ. ಆದರೆ ಕುಟುಂಬವು 2010-2011 ರಲ್ಲಿ ಆಸ್ತಿಯ ಮಾಲೀಕರು ಎಂದು ಹೇಳಿಕೊಂಡು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು” ಎಂದು ಇವಾಕ್ಯೂ ಟ್ರಸ್ಟ್‌ ಅಧಿಕಾರಿಯೊಬ್ಬರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

“ಕುಟುಂಬವು ನ್ಯಾಯಾಲಯಕ್ಕೆ ಹೋಗಿದ್ದು ಮಾತ್ರವಲ್ಲದೆ ದೇವಾಲಯವನ್ನು ವಾಲ್ಮೀಕಿ ಹಿಂದೂಗಳಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶ ಕೊಟ್ಟಿತ್ತು. ಹಾಗಾಗಿ ಇವಾಕ್ಯೂ ಟ್ರಸ್ಟ್‌ಗೆ ಪ್ರಕರಣದ ಹೋರಾಟವನ್ನು ನ್ಯಾಯಾಲಯ ಹೊರತುಪಡಿಸಿ ಯಾವುದೇ ಆಯ್ಕೆ ಇರಲಿಲ್ಲ. ನ್ಯಾಯಾಲಯವು ಸುಳ್ಳು ಪ್ರತಿಪಾದನೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಛೀಮಾರಿ ಹಾಕಿದೆ” ಎಂದು ಅಧಿಕಾರಿ ಹೇಳಿದ್ದಾರೆ.

1992 ರಲ್ಲಿ ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಉದ್ರಿಕ್ತ ಜನಸಮೂಹವು ಶಸ್ತ್ರಾಸ್ತ್ರಗಳನ್ನು ಹಿಡಿದು ವಾಲ್ಮೀಕಿ ದೇವಾಲಯಕ್ಕೆ ನುಗ್ಗಿತ್ತು. ಕೃಷ್ಣ ಮತ್ತು ವಾಲ್ಮೀಕಿ ವಿಗ್ರಹಗಳನ್ನು ಒಡೆದು, ಅಡುಗೆಮನೆಯಲ್ಲಿದ್ದ ಪಾತ್ರೆ ಪಗಡೆಗಳನ್ನು ಒಡೆದು, ಪ್ರತಿಮೆಗಳ ಮೇಲೆ ಅಲಂಕರಿಸಿದ ಚಿನ್ನವನ್ನು ವಶಪಡಿಸಿಕೊಂಡಿದ್ದರು ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ದೇವಾಲಯವನ್ನು ಕೆಡವಿ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಬೆಂಕಿ  ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿ ನಂದಿಸಲು ಅಧಿಕಾರಿಗಳಿಗೆ ದಿನಗಟ್ಟಲೆ ಪರದಾಡಬೇಕಾಯಿತು ಎಂದು ವರದಿ ಹೇಳಿದೆ.

ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಿಂದ ರಚಿಸಲ್ಪಟ್ಟ ಏಕವ್ಯಕ್ತಿ ಆಯೋಗವು ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿತು. ಈ ಆಯೋಗವೂ ಹಿಂದೂ ಸಮುದಾಯಕ್ಕೆ ಉತ್ತಮ ಸೌಲಭ್ಯಗಳೊಂದಿಗೆ ದೇವಾಲಯವನ್ನು ನವೀಕರಿಸಬೇಕು ಎಂದು ಇವಾಕ್ಯೂ ಟ್ರಸ್ಟ್‌ ವಕ್ತಾರರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ದೇಶ ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದ ಸಿಖ್ಖರು ಮತ್ತು ಹಿಂದೂಗಳು ಬಿಟ್ಟುಹೋದ ದೇವಾಲಯಗಳು ಮತ್ತು ಭೂಮಿಯನ್ನು ಇವಾಕ್ಯೂ ಟ್ರಸ್ಟ್‌ ನೋಡಿಕೊಳ್ಳುತ್ತದೆ. ಇವಾಕ್ಯೂ ಟ್ರಸ್ಟ್‌‌ ಪಾಕಿಸ್ತಾನದಾದ್ಯಂತ 200 ಗುರುದ್ವಾರಗಳು ಮತ್ತು 150 ದೇವಾಲಯಗಳನ್ನು ನೋಡಿಕೊಳ್ಳುತ್ತದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...