Homeಅಂತರಾಷ್ಟ್ರೀಯ1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ವೇಳೆ ದೇವಾಲಯವನ್ನು ಧ್ವಂಸ ಮಾಡಿ ಬೆಂಕಿ ಹಚ್ಚಲಾಗಿತ್ತು

- Advertisement -
- Advertisement -

ಸುದೀರ್ಘ ಕಾನೂನು ಹೋರಾಟದ ನಂತರ ಪಾಕಿಸ್ತಾನದ ಲಾಹೋರ್ ನಗರದಲ್ಲಿ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ದೇಶದ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣಾ ಫೆಡರಲ್ ಸಂಸ್ಥೆಯಾದ ದಿ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ)  ಬುಧವಾರ ತಿಳಿಸಿದೆ. ಈಗಾಗಲೆ ಅಲ್ಲಿರುವ “ಅಕ್ರಮ ನಿವಾಸಿಗಳನ್ನು” ಹೊರಹಾಕಿದ ನಂತರ ಕೆಲಸ ಪ್ರಾರಂಭಿಸುವುದಾಗಿ ಸಂಸ್ಥೆ ಹೇಳಿದೆ.

ಇವಾಕ್ಯೂ ಟ್ರಸ್ಟ್‌ ಕಳೆದ ತಿಂಗಳು ಪ್ರಸಿದ್ಧ ಅನಾರ್ಕಲಿ ಬಜಾರ್ ಲಾಹೋರ್ ಬಳಿ ಇರುವ ವಾಲ್ಮೀಕಿ ದೇವಾಲಯವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ. ಕೃಷ್ಣ ದೇವಾಲಯದ ಪಕ್ಕದ ವಾಲ್ಮೀಕಿ ದೇವಾಲಯವು ಲಾಹೋರ್‌ನಲ್ಲಿರುವ ಏಕೈಕ ಸಕ್ರಿಯವಾಗಿರುವ ದೇವಾಲಯವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಹೇಳಿಕೊಳ್ಳುವ ಕ್ರೈಸ್ತ ಕುಟುಂಬ ಕಳೆದ ಎರಡು ದಶಕಗಳಿಂದ ವಾಲ್ಮೀಕಿ ಜಾತಿಯ ಹಿಂದೂಗಳಿಗೆ ಮಾತ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುತ್ತಿತ್ತು. ಇಪ್ಪತ್ತು ವರ್ಷಗಳ ಹಿಂದೆ ಕ್ರಿಶ್ಚಿಯನ್ ಕುಟುಂಬ ದೇವಾಲಯವನ್ನು ವಶಪಡಿಸಿಕೊಂಡಿತ್ತು.

‘ಮಾಸ್ಟರ್ ಪ್ಲಾನ್’ ಪ್ರಕಾರ ಮುಂದಿನ ದಿನಗಳಲ್ಲಿ ವಾಲ್ಮೀಕಿ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ಇವಾಕ್ಯೂ ಟ್ರಸ್ಟ್ ವಕ್ತಾರ ಅಮೀರ್ ಹಶ್ಮಿ ಪಿಟಿಐಗೆ ತಿಳಿಸಿದ್ದಾರೆ. “100 ಕ್ಕೂ ಹೆಚ್ಚು ಹಿಂದೂಗಳು, ಕೆಲವು ಸಿಖ್ ಮತ್ತು ಕ್ರಿಶ್ಚಿಯನ್ ನಾಯಕರು ಇಂದು ವಾಲ್ಮೀಕಿ ದೇವಸ್ಥಾನದಲ್ಲಿ ಜಮಾಯಿಸಿದರು. ಹಿಂದೂಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ಮಾಡಿದರು” ಎಂದು ಅವರು ಹೇಳಿದ್ದಾರೆ.

“ದೇವಾಲಯದ ಭೂಮಿಯನ್ನು ಕಂದಾಯ ದಾಖಲೆಯಲ್ಲಿ ಇಟಿಪಿಬಿಗೆ ವರ್ಗಾಯಿಸಲಾಗಿದೆ. ಆದರೆ ಕುಟುಂಬವು 2010-2011 ರಲ್ಲಿ ಆಸ್ತಿಯ ಮಾಲೀಕರು ಎಂದು ಹೇಳಿಕೊಂಡು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು” ಎಂದು ಇವಾಕ್ಯೂ ಟ್ರಸ್ಟ್‌ ಅಧಿಕಾರಿಯೊಬ್ಬರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

“ಕುಟುಂಬವು ನ್ಯಾಯಾಲಯಕ್ಕೆ ಹೋಗಿದ್ದು ಮಾತ್ರವಲ್ಲದೆ ದೇವಾಲಯವನ್ನು ವಾಲ್ಮೀಕಿ ಹಿಂದೂಗಳಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶ ಕೊಟ್ಟಿತ್ತು. ಹಾಗಾಗಿ ಇವಾಕ್ಯೂ ಟ್ರಸ್ಟ್‌ಗೆ ಪ್ರಕರಣದ ಹೋರಾಟವನ್ನು ನ್ಯಾಯಾಲಯ ಹೊರತುಪಡಿಸಿ ಯಾವುದೇ ಆಯ್ಕೆ ಇರಲಿಲ್ಲ. ನ್ಯಾಯಾಲಯವು ಸುಳ್ಳು ಪ್ರತಿಪಾದನೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಛೀಮಾರಿ ಹಾಕಿದೆ” ಎಂದು ಅಧಿಕಾರಿ ಹೇಳಿದ್ದಾರೆ.

1992 ರಲ್ಲಿ ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಉದ್ರಿಕ್ತ ಜನಸಮೂಹವು ಶಸ್ತ್ರಾಸ್ತ್ರಗಳನ್ನು ಹಿಡಿದು ವಾಲ್ಮೀಕಿ ದೇವಾಲಯಕ್ಕೆ ನುಗ್ಗಿತ್ತು. ಕೃಷ್ಣ ಮತ್ತು ವಾಲ್ಮೀಕಿ ವಿಗ್ರಹಗಳನ್ನು ಒಡೆದು, ಅಡುಗೆಮನೆಯಲ್ಲಿದ್ದ ಪಾತ್ರೆ ಪಗಡೆಗಳನ್ನು ಒಡೆದು, ಪ್ರತಿಮೆಗಳ ಮೇಲೆ ಅಲಂಕರಿಸಿದ ಚಿನ್ನವನ್ನು ವಶಪಡಿಸಿಕೊಂಡಿದ್ದರು ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ದೇವಾಲಯವನ್ನು ಕೆಡವಿ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಬೆಂಕಿ  ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿ ನಂದಿಸಲು ಅಧಿಕಾರಿಗಳಿಗೆ ದಿನಗಟ್ಟಲೆ ಪರದಾಡಬೇಕಾಯಿತು ಎಂದು ವರದಿ ಹೇಳಿದೆ.

ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಿಂದ ರಚಿಸಲ್ಪಟ್ಟ ಏಕವ್ಯಕ್ತಿ ಆಯೋಗವು ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿತು. ಈ ಆಯೋಗವೂ ಹಿಂದೂ ಸಮುದಾಯಕ್ಕೆ ಉತ್ತಮ ಸೌಲಭ್ಯಗಳೊಂದಿಗೆ ದೇವಾಲಯವನ್ನು ನವೀಕರಿಸಬೇಕು ಎಂದು ಇವಾಕ್ಯೂ ಟ್ರಸ್ಟ್‌ ವಕ್ತಾರರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ದೇಶ ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದ ಸಿಖ್ಖರು ಮತ್ತು ಹಿಂದೂಗಳು ಬಿಟ್ಟುಹೋದ ದೇವಾಲಯಗಳು ಮತ್ತು ಭೂಮಿಯನ್ನು ಇವಾಕ್ಯೂ ಟ್ರಸ್ಟ್‌ ನೋಡಿಕೊಳ್ಳುತ್ತದೆ. ಇವಾಕ್ಯೂ ಟ್ರಸ್ಟ್‌‌ ಪಾಕಿಸ್ತಾನದಾದ್ಯಂತ 200 ಗುರುದ್ವಾರಗಳು ಮತ್ತು 150 ದೇವಾಲಯಗಳನ್ನು ನೋಡಿಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...