Homeಮುಖಪುಟತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ.

- Advertisement -
- Advertisement -

ತಮಿಳುನಾಡಿನ ಶಿವಕಾಸಿಯಲ್ಲಿರುವ ಎಂ ಪುದುಪಟ್ಟಿ ಎಂಬ ಗ್ರಾಮದಲ್ಲಿ, ಅರ್ಜುನ ನದಿಯ ದಡದ ಬಳಿ 1,200 ವರ್ಷಗಳಷ್ಟು ಹಳೆಯದಾದ ಮತ್ತು ಬಂಡೆಯಲ್ಲಿ ಕೊರೆದಂತೆ ಇರುವ ದೇವಸ್ಥಾನ ಪತ್ತೆಯಾಗಿದೆ.

Photo Courtesy: Sarkardaily

ಪುರಾತತ್ವಶಾಸ್ತ್ರಜ್ಞರು ಈ ದೇವಸ್ಥಾನ ಬಂಡೆಯಿಂದ ನಿರ್ಮಿಸಲ್ಪಟ್ಟಿದೆ ಎಂದು ಗುರುತಿಸಿದ್ದಾರೆ. ಆದರೂ ಇಲ್ಲಿರುವ ಮೂರೂ ಕೋಣೆಗಳಲ್ಲಿಯೂ (ಗರ್ಭಗುಡಿ, ಅರ್ಧಮಂಟಪ ಮತ್ತು ಮಹಾ ಮಂಟಪ) ಯಾವುದೇ ದೇವರ ವಿಗ್ರಹಗಳು ಪತ್ತೆಯಾಗಿಲ್ಲ. ಇದು 20 ಅಡಿ ಉದ್ದದ ಸುಣ್ಣದ ದಿಬ್ಬದ ಪ್ರವೇಶದ್ವಾರವನ್ನು ಹೊಂದಿದೆ.

ಗೋಡೆಗಳ ಮೇಲೆ ಮತ್ತು ಚಾವಣಿಯಲ್ಲಿ ಸಿಮೆಂಟ್‌ನ ಕುರುಹುಗಳಿವೆ ಎಂದು ತಜ್ಞರು ಹೇಳಿದ್ದಾರೆ. ಸುಮಾರು 100 ವರ್ಷಗಳ ಹಿಂದೆ ದೇವಸ್ಥಾನದ ಭಕ್ತರು ದುರಸ್ಥಿ ನಡೆಸಿದ್ದಿರಬಹುದು ಎಂದು ಪುರಾತತ್ತ್ವಜ್ಞರು ಊಹಿಸಿದ್ದಾರೆ. ದೇವಸ್ಥಾನದ ಒಳಗೆ ಹಲವು ಕಡೆ ಸುಣ್ಣದ ಕಲ್ಲು ಕುಸಿಯುತ್ತಿದೆ. ಮಹಾ ಮಂಟಪದ ಸೀಲಿಂಗ್‌ನಲ್ಲಿ ಬೃಹತ್ ರಂಧ್ರವಿದೆ ಎನ್ನಲಾಗಿದೆ.


ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ..


ರಾಜ್ಯ ಪುರಾತತ್ವ ವಿಭಾಗದ ನಿವೃತ್ತ ಸಹಾಯಕ ನಿರ್ದೇಶಕ ಡಾ.ಸಿ.ಸಂತಲಿಂಗಂ ಮಾತನಾಡಿ, ಈ ದೇವಾಲಯವು ಮೂರು ಅಂಶಗಳಲ್ಲಿ ವಿಶಿಷ್ಟವಾಗಿದೆ ಎಂದಿದ್ದಾರೆ.

“ಮೊದಲನೆಯದು: ಇದು ಸಂಧಾರ ಮಾದರಿಯ ದೇವಾಲಯವಾಗಿದೆ. ಭಾರತದಲ್ಲಿ ಇದುವರೆಗೂ ಸಂಧಾರ ಮಾದರಿಯ, ಬಂಡೆಯಲ್ಲಿ ಕತ್ತರಿಸಿದ ದೇವಾಲಯವಿಲ್ಲ. ಈ ದೇವಾಲಯಗಳು ದೇವಾಲಯದ ಸುತ್ತಲೂ ವೃತ್ತಾಕಾರದ ಹಾದಿಯನ್ನು (ಪ್ರದಕ್ಷಿಣಪಥ) ಹೊಂದಿವೆ. ಎಲ್ಲಾ ದೇವಾಲಯಗಳಲ್ಲಿ ಈ ಹಾದಿಗಳಿಲ್ಲ ಎಂದು ಮೂಲಗಳು ತಿಳಿಸಿವೆ.

ಎರಡನೆಯದು: ದೇವಾಲಯವು ಎರಡು ಸುತ್ತುವರಿದ ಹಾದಿಗಳನ್ನು ಹೊಂದಿದೆ. ಇದು ಬಹಳ ಅಪರೂಪ. ಒಂದು ಮಾರ್ಗವು ಅರ್ಧಮಂಟಪದಿಂದ ಪ್ರದಕ್ಷಿಣಾಕಾರವಾಗಿ ಚಲಿಸುತ್ತಿದ್ದರೆ, ಎರಡನೆಯದು ಮಹಾಮಂಟಪದ ಪಕ್ಕದಲ್ಲಿದೆ.

ಮೂರನೆಯದು: ದೇವಾಲಯವನ್ನು ಸಂಪೂರ್ಣವಾಗಿ ಸುಣ್ಣದ ಕಲ್ಲುಗಳಿಂದ ಕೆತ್ತಲಾಗಿದೆ. ಇದು ಕಡಿಮೆ ಗುಣಮಟ್ಟದ ಕಲ್ಲಾಗಿದ್ದು, ಹಾಗಾಗಿಯೇ ದೇವಾಲಯದಲ್ಲಿ ಕಲಾತ್ಮಕ ವಿನ್ಯಾಸ, ಶಿಲ್ಪಕಲೆ ಅಥವಾ ಕೆತ್ತನೆ ಇಲ್ಲದಿರುವುದಕ್ಕೆ ಕಾರಣವಾಗಿದೆ. ಆದರೂ ಗರ್ಭಗೃಹದ ಪ್ರವೇಶದ್ವಾರದ ಎರಡೂ ಬದಿಗಳಲ್ಲಿ ಗೂಡುಗಳಿವೆ. ಇದಲ್ಲದೆ, ಗರ್ಭಗೃಹದಲ್ಲಿ ಕಲ್ಲಿನ ನಾಗ ಪ್ರತಿಮೆ ಇದೆ. ಪೂಜೆ ಮಾಡುವ ಸಲುವಾಗಿ, ಭಕ್ತರು 100 ವರ್ಷಗಳ ಹಿಂದೆ ಇದನ್ನು ಇಟ್ಟಿರಬಹುದು” ಎಂದು ಸಂತಲಿಂಗಂ ಹೇಳಿದ್ದಾರೆ.

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ. ಇದನ್ನು ಮರಳುಗಲ್ಲಿನಿಂದ ಕೆತ್ತಲಾಗಿದೆ. ಇದು ಸುಣ್ಣದ ಕಲ್ಲುಗಳಿಗೆ ಹೋಲುವ ಬಂಡೆಯಾಗಿದೆ ಎಂದು ಸಂತಲಿಂಗಂ ಹೇಳಿದರು.


ಇದನ್ನೂ ಓದಿ: ಆರ್ಯ-ಅನಾರ್ಯರ ನಡುವಿನ ಕಾಳಗ ಮತ್ತು ಮಿಲನ: ಗೊಂಡಿಯರ ಸಂಭೂ ಶೇಖರ ಶಂಭೋ ಶಂಕರನಾದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....