Homeಮುಖಪುಟತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ.

- Advertisement -
- Advertisement -

ತಮಿಳುನಾಡಿನ ಶಿವಕಾಸಿಯಲ್ಲಿರುವ ಎಂ ಪುದುಪಟ್ಟಿ ಎಂಬ ಗ್ರಾಮದಲ್ಲಿ, ಅರ್ಜುನ ನದಿಯ ದಡದ ಬಳಿ 1,200 ವರ್ಷಗಳಷ್ಟು ಹಳೆಯದಾದ ಮತ್ತು ಬಂಡೆಯಲ್ಲಿ ಕೊರೆದಂತೆ ಇರುವ ದೇವಸ್ಥಾನ ಪತ್ತೆಯಾಗಿದೆ.

Photo Courtesy: Sarkardaily

ಪುರಾತತ್ವಶಾಸ್ತ್ರಜ್ಞರು ಈ ದೇವಸ್ಥಾನ ಬಂಡೆಯಿಂದ ನಿರ್ಮಿಸಲ್ಪಟ್ಟಿದೆ ಎಂದು ಗುರುತಿಸಿದ್ದಾರೆ. ಆದರೂ ಇಲ್ಲಿರುವ ಮೂರೂ ಕೋಣೆಗಳಲ್ಲಿಯೂ (ಗರ್ಭಗುಡಿ, ಅರ್ಧಮಂಟಪ ಮತ್ತು ಮಹಾ ಮಂಟಪ) ಯಾವುದೇ ದೇವರ ವಿಗ್ರಹಗಳು ಪತ್ತೆಯಾಗಿಲ್ಲ. ಇದು 20 ಅಡಿ ಉದ್ದದ ಸುಣ್ಣದ ದಿಬ್ಬದ ಪ್ರವೇಶದ್ವಾರವನ್ನು ಹೊಂದಿದೆ.

ಗೋಡೆಗಳ ಮೇಲೆ ಮತ್ತು ಚಾವಣಿಯಲ್ಲಿ ಸಿಮೆಂಟ್‌ನ ಕುರುಹುಗಳಿವೆ ಎಂದು ತಜ್ಞರು ಹೇಳಿದ್ದಾರೆ. ಸುಮಾರು 100 ವರ್ಷಗಳ ಹಿಂದೆ ದೇವಸ್ಥಾನದ ಭಕ್ತರು ದುರಸ್ಥಿ ನಡೆಸಿದ್ದಿರಬಹುದು ಎಂದು ಪುರಾತತ್ತ್ವಜ್ಞರು ಊಹಿಸಿದ್ದಾರೆ. ದೇವಸ್ಥಾನದ ಒಳಗೆ ಹಲವು ಕಡೆ ಸುಣ್ಣದ ಕಲ್ಲು ಕುಸಿಯುತ್ತಿದೆ. ಮಹಾ ಮಂಟಪದ ಸೀಲಿಂಗ್‌ನಲ್ಲಿ ಬೃಹತ್ ರಂಧ್ರವಿದೆ ಎನ್ನಲಾಗಿದೆ.


ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ..


ರಾಜ್ಯ ಪುರಾತತ್ವ ವಿಭಾಗದ ನಿವೃತ್ತ ಸಹಾಯಕ ನಿರ್ದೇಶಕ ಡಾ.ಸಿ.ಸಂತಲಿಂಗಂ ಮಾತನಾಡಿ, ಈ ದೇವಾಲಯವು ಮೂರು ಅಂಶಗಳಲ್ಲಿ ವಿಶಿಷ್ಟವಾಗಿದೆ ಎಂದಿದ್ದಾರೆ.

“ಮೊದಲನೆಯದು: ಇದು ಸಂಧಾರ ಮಾದರಿಯ ದೇವಾಲಯವಾಗಿದೆ. ಭಾರತದಲ್ಲಿ ಇದುವರೆಗೂ ಸಂಧಾರ ಮಾದರಿಯ, ಬಂಡೆಯಲ್ಲಿ ಕತ್ತರಿಸಿದ ದೇವಾಲಯವಿಲ್ಲ. ಈ ದೇವಾಲಯಗಳು ದೇವಾಲಯದ ಸುತ್ತಲೂ ವೃತ್ತಾಕಾರದ ಹಾದಿಯನ್ನು (ಪ್ರದಕ್ಷಿಣಪಥ) ಹೊಂದಿವೆ. ಎಲ್ಲಾ ದೇವಾಲಯಗಳಲ್ಲಿ ಈ ಹಾದಿಗಳಿಲ್ಲ ಎಂದು ಮೂಲಗಳು ತಿಳಿಸಿವೆ.

ಎರಡನೆಯದು: ದೇವಾಲಯವು ಎರಡು ಸುತ್ತುವರಿದ ಹಾದಿಗಳನ್ನು ಹೊಂದಿದೆ. ಇದು ಬಹಳ ಅಪರೂಪ. ಒಂದು ಮಾರ್ಗವು ಅರ್ಧಮಂಟಪದಿಂದ ಪ್ರದಕ್ಷಿಣಾಕಾರವಾಗಿ ಚಲಿಸುತ್ತಿದ್ದರೆ, ಎರಡನೆಯದು ಮಹಾಮಂಟಪದ ಪಕ್ಕದಲ್ಲಿದೆ.

ಮೂರನೆಯದು: ದೇವಾಲಯವನ್ನು ಸಂಪೂರ್ಣವಾಗಿ ಸುಣ್ಣದ ಕಲ್ಲುಗಳಿಂದ ಕೆತ್ತಲಾಗಿದೆ. ಇದು ಕಡಿಮೆ ಗುಣಮಟ್ಟದ ಕಲ್ಲಾಗಿದ್ದು, ಹಾಗಾಗಿಯೇ ದೇವಾಲಯದಲ್ಲಿ ಕಲಾತ್ಮಕ ವಿನ್ಯಾಸ, ಶಿಲ್ಪಕಲೆ ಅಥವಾ ಕೆತ್ತನೆ ಇಲ್ಲದಿರುವುದಕ್ಕೆ ಕಾರಣವಾಗಿದೆ. ಆದರೂ ಗರ್ಭಗೃಹದ ಪ್ರವೇಶದ್ವಾರದ ಎರಡೂ ಬದಿಗಳಲ್ಲಿ ಗೂಡುಗಳಿವೆ. ಇದಲ್ಲದೆ, ಗರ್ಭಗೃಹದಲ್ಲಿ ಕಲ್ಲಿನ ನಾಗ ಪ್ರತಿಮೆ ಇದೆ. ಪೂಜೆ ಮಾಡುವ ಸಲುವಾಗಿ, ಭಕ್ತರು 100 ವರ್ಷಗಳ ಹಿಂದೆ ಇದನ್ನು ಇಟ್ಟಿರಬಹುದು” ಎಂದು ಸಂತಲಿಂಗಂ ಹೇಳಿದ್ದಾರೆ.

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ. ಇದನ್ನು ಮರಳುಗಲ್ಲಿನಿಂದ ಕೆತ್ತಲಾಗಿದೆ. ಇದು ಸುಣ್ಣದ ಕಲ್ಲುಗಳಿಗೆ ಹೋಲುವ ಬಂಡೆಯಾಗಿದೆ ಎಂದು ಸಂತಲಿಂಗಂ ಹೇಳಿದರು.


ಇದನ್ನೂ ಓದಿ: ಆರ್ಯ-ಅನಾರ್ಯರ ನಡುವಿನ ಕಾಳಗ ಮತ್ತು ಮಿಲನ: ಗೊಂಡಿಯರ ಸಂಭೂ ಶೇಖರ ಶಂಭೋ ಶಂಕರನಾದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...