Homeಮುಖಪುಟತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ.

- Advertisement -
- Advertisement -

ತಮಿಳುನಾಡಿನ ಶಿವಕಾಸಿಯಲ್ಲಿರುವ ಎಂ ಪುದುಪಟ್ಟಿ ಎಂಬ ಗ್ರಾಮದಲ್ಲಿ, ಅರ್ಜುನ ನದಿಯ ದಡದ ಬಳಿ 1,200 ವರ್ಷಗಳಷ್ಟು ಹಳೆಯದಾದ ಮತ್ತು ಬಂಡೆಯಲ್ಲಿ ಕೊರೆದಂತೆ ಇರುವ ದೇವಸ್ಥಾನ ಪತ್ತೆಯಾಗಿದೆ.

Photo Courtesy: Sarkardaily

ಪುರಾತತ್ವಶಾಸ್ತ್ರಜ್ಞರು ಈ ದೇವಸ್ಥಾನ ಬಂಡೆಯಿಂದ ನಿರ್ಮಿಸಲ್ಪಟ್ಟಿದೆ ಎಂದು ಗುರುತಿಸಿದ್ದಾರೆ. ಆದರೂ ಇಲ್ಲಿರುವ ಮೂರೂ ಕೋಣೆಗಳಲ್ಲಿಯೂ (ಗರ್ಭಗುಡಿ, ಅರ್ಧಮಂಟಪ ಮತ್ತು ಮಹಾ ಮಂಟಪ) ಯಾವುದೇ ದೇವರ ವಿಗ್ರಹಗಳು ಪತ್ತೆಯಾಗಿಲ್ಲ. ಇದು 20 ಅಡಿ ಉದ್ದದ ಸುಣ್ಣದ ದಿಬ್ಬದ ಪ್ರವೇಶದ್ವಾರವನ್ನು ಹೊಂದಿದೆ.

ಗೋಡೆಗಳ ಮೇಲೆ ಮತ್ತು ಚಾವಣಿಯಲ್ಲಿ ಸಿಮೆಂಟ್‌ನ ಕುರುಹುಗಳಿವೆ ಎಂದು ತಜ್ಞರು ಹೇಳಿದ್ದಾರೆ. ಸುಮಾರು 100 ವರ್ಷಗಳ ಹಿಂದೆ ದೇವಸ್ಥಾನದ ಭಕ್ತರು ದುರಸ್ಥಿ ನಡೆಸಿದ್ದಿರಬಹುದು ಎಂದು ಪುರಾತತ್ತ್ವಜ್ಞರು ಊಹಿಸಿದ್ದಾರೆ. ದೇವಸ್ಥಾನದ ಒಳಗೆ ಹಲವು ಕಡೆ ಸುಣ್ಣದ ಕಲ್ಲು ಕುಸಿಯುತ್ತಿದೆ. ಮಹಾ ಮಂಟಪದ ಸೀಲಿಂಗ್‌ನಲ್ಲಿ ಬೃಹತ್ ರಂಧ್ರವಿದೆ ಎನ್ನಲಾಗಿದೆ.


ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ..


ರಾಜ್ಯ ಪುರಾತತ್ವ ವಿಭಾಗದ ನಿವೃತ್ತ ಸಹಾಯಕ ನಿರ್ದೇಶಕ ಡಾ.ಸಿ.ಸಂತಲಿಂಗಂ ಮಾತನಾಡಿ, ಈ ದೇವಾಲಯವು ಮೂರು ಅಂಶಗಳಲ್ಲಿ ವಿಶಿಷ್ಟವಾಗಿದೆ ಎಂದಿದ್ದಾರೆ.

“ಮೊದಲನೆಯದು: ಇದು ಸಂಧಾರ ಮಾದರಿಯ ದೇವಾಲಯವಾಗಿದೆ. ಭಾರತದಲ್ಲಿ ಇದುವರೆಗೂ ಸಂಧಾರ ಮಾದರಿಯ, ಬಂಡೆಯಲ್ಲಿ ಕತ್ತರಿಸಿದ ದೇವಾಲಯವಿಲ್ಲ. ಈ ದೇವಾಲಯಗಳು ದೇವಾಲಯದ ಸುತ್ತಲೂ ವೃತ್ತಾಕಾರದ ಹಾದಿಯನ್ನು (ಪ್ರದಕ್ಷಿಣಪಥ) ಹೊಂದಿವೆ. ಎಲ್ಲಾ ದೇವಾಲಯಗಳಲ್ಲಿ ಈ ಹಾದಿಗಳಿಲ್ಲ ಎಂದು ಮೂಲಗಳು ತಿಳಿಸಿವೆ.

ಎರಡನೆಯದು: ದೇವಾಲಯವು ಎರಡು ಸುತ್ತುವರಿದ ಹಾದಿಗಳನ್ನು ಹೊಂದಿದೆ. ಇದು ಬಹಳ ಅಪರೂಪ. ಒಂದು ಮಾರ್ಗವು ಅರ್ಧಮಂಟಪದಿಂದ ಪ್ರದಕ್ಷಿಣಾಕಾರವಾಗಿ ಚಲಿಸುತ್ತಿದ್ದರೆ, ಎರಡನೆಯದು ಮಹಾಮಂಟಪದ ಪಕ್ಕದಲ್ಲಿದೆ.

ಮೂರನೆಯದು: ದೇವಾಲಯವನ್ನು ಸಂಪೂರ್ಣವಾಗಿ ಸುಣ್ಣದ ಕಲ್ಲುಗಳಿಂದ ಕೆತ್ತಲಾಗಿದೆ. ಇದು ಕಡಿಮೆ ಗುಣಮಟ್ಟದ ಕಲ್ಲಾಗಿದ್ದು, ಹಾಗಾಗಿಯೇ ದೇವಾಲಯದಲ್ಲಿ ಕಲಾತ್ಮಕ ವಿನ್ಯಾಸ, ಶಿಲ್ಪಕಲೆ ಅಥವಾ ಕೆತ್ತನೆ ಇಲ್ಲದಿರುವುದಕ್ಕೆ ಕಾರಣವಾಗಿದೆ. ಆದರೂ ಗರ್ಭಗೃಹದ ಪ್ರವೇಶದ್ವಾರದ ಎರಡೂ ಬದಿಗಳಲ್ಲಿ ಗೂಡುಗಳಿವೆ. ಇದಲ್ಲದೆ, ಗರ್ಭಗೃಹದಲ್ಲಿ ಕಲ್ಲಿನ ನಾಗ ಪ್ರತಿಮೆ ಇದೆ. ಪೂಜೆ ಮಾಡುವ ಸಲುವಾಗಿ, ಭಕ್ತರು 100 ವರ್ಷಗಳ ಹಿಂದೆ ಇದನ್ನು ಇಟ್ಟಿರಬಹುದು” ಎಂದು ಸಂತಲಿಂಗಂ ಹೇಳಿದ್ದಾರೆ.

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ. ಇದನ್ನು ಮರಳುಗಲ್ಲಿನಿಂದ ಕೆತ್ತಲಾಗಿದೆ. ಇದು ಸುಣ್ಣದ ಕಲ್ಲುಗಳಿಗೆ ಹೋಲುವ ಬಂಡೆಯಾಗಿದೆ ಎಂದು ಸಂತಲಿಂಗಂ ಹೇಳಿದರು.


ಇದನ್ನೂ ಓದಿ: ಆರ್ಯ-ಅನಾರ್ಯರ ನಡುವಿನ ಕಾಳಗ ಮತ್ತು ಮಿಲನ: ಗೊಂಡಿಯರ ಸಂಭೂ ಶೇಖರ ಶಂಭೋ ಶಂಕರನಾದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...