Homeಮುಖಪುಟತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ.

- Advertisement -
- Advertisement -

ತಮಿಳುನಾಡಿನ ಶಿವಕಾಸಿಯಲ್ಲಿರುವ ಎಂ ಪುದುಪಟ್ಟಿ ಎಂಬ ಗ್ರಾಮದಲ್ಲಿ, ಅರ್ಜುನ ನದಿಯ ದಡದ ಬಳಿ 1,200 ವರ್ಷಗಳಷ್ಟು ಹಳೆಯದಾದ ಮತ್ತು ಬಂಡೆಯಲ್ಲಿ ಕೊರೆದಂತೆ ಇರುವ ದೇವಸ್ಥಾನ ಪತ್ತೆಯಾಗಿದೆ.

Photo Courtesy: Sarkardaily

ಪುರಾತತ್ವಶಾಸ್ತ್ರಜ್ಞರು ಈ ದೇವಸ್ಥಾನ ಬಂಡೆಯಿಂದ ನಿರ್ಮಿಸಲ್ಪಟ್ಟಿದೆ ಎಂದು ಗುರುತಿಸಿದ್ದಾರೆ. ಆದರೂ ಇಲ್ಲಿರುವ ಮೂರೂ ಕೋಣೆಗಳಲ್ಲಿಯೂ (ಗರ್ಭಗುಡಿ, ಅರ್ಧಮಂಟಪ ಮತ್ತು ಮಹಾ ಮಂಟಪ) ಯಾವುದೇ ದೇವರ ವಿಗ್ರಹಗಳು ಪತ್ತೆಯಾಗಿಲ್ಲ. ಇದು 20 ಅಡಿ ಉದ್ದದ ಸುಣ್ಣದ ದಿಬ್ಬದ ಪ್ರವೇಶದ್ವಾರವನ್ನು ಹೊಂದಿದೆ.

ಗೋಡೆಗಳ ಮೇಲೆ ಮತ್ತು ಚಾವಣಿಯಲ್ಲಿ ಸಿಮೆಂಟ್‌ನ ಕುರುಹುಗಳಿವೆ ಎಂದು ತಜ್ಞರು ಹೇಳಿದ್ದಾರೆ. ಸುಮಾರು 100 ವರ್ಷಗಳ ಹಿಂದೆ ದೇವಸ್ಥಾನದ ಭಕ್ತರು ದುರಸ್ಥಿ ನಡೆಸಿದ್ದಿರಬಹುದು ಎಂದು ಪುರಾತತ್ತ್ವಜ್ಞರು ಊಹಿಸಿದ್ದಾರೆ. ದೇವಸ್ಥಾನದ ಒಳಗೆ ಹಲವು ಕಡೆ ಸುಣ್ಣದ ಕಲ್ಲು ಕುಸಿಯುತ್ತಿದೆ. ಮಹಾ ಮಂಟಪದ ಸೀಲಿಂಗ್‌ನಲ್ಲಿ ಬೃಹತ್ ರಂಧ್ರವಿದೆ ಎನ್ನಲಾಗಿದೆ.


ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ..


ರಾಜ್ಯ ಪುರಾತತ್ವ ವಿಭಾಗದ ನಿವೃತ್ತ ಸಹಾಯಕ ನಿರ್ದೇಶಕ ಡಾ.ಸಿ.ಸಂತಲಿಂಗಂ ಮಾತನಾಡಿ, ಈ ದೇವಾಲಯವು ಮೂರು ಅಂಶಗಳಲ್ಲಿ ವಿಶಿಷ್ಟವಾಗಿದೆ ಎಂದಿದ್ದಾರೆ.

“ಮೊದಲನೆಯದು: ಇದು ಸಂಧಾರ ಮಾದರಿಯ ದೇವಾಲಯವಾಗಿದೆ. ಭಾರತದಲ್ಲಿ ಇದುವರೆಗೂ ಸಂಧಾರ ಮಾದರಿಯ, ಬಂಡೆಯಲ್ಲಿ ಕತ್ತರಿಸಿದ ದೇವಾಲಯವಿಲ್ಲ. ಈ ದೇವಾಲಯಗಳು ದೇವಾಲಯದ ಸುತ್ತಲೂ ವೃತ್ತಾಕಾರದ ಹಾದಿಯನ್ನು (ಪ್ರದಕ್ಷಿಣಪಥ) ಹೊಂದಿವೆ. ಎಲ್ಲಾ ದೇವಾಲಯಗಳಲ್ಲಿ ಈ ಹಾದಿಗಳಿಲ್ಲ ಎಂದು ಮೂಲಗಳು ತಿಳಿಸಿವೆ.

ಎರಡನೆಯದು: ದೇವಾಲಯವು ಎರಡು ಸುತ್ತುವರಿದ ಹಾದಿಗಳನ್ನು ಹೊಂದಿದೆ. ಇದು ಬಹಳ ಅಪರೂಪ. ಒಂದು ಮಾರ್ಗವು ಅರ್ಧಮಂಟಪದಿಂದ ಪ್ರದಕ್ಷಿಣಾಕಾರವಾಗಿ ಚಲಿಸುತ್ತಿದ್ದರೆ, ಎರಡನೆಯದು ಮಹಾಮಂಟಪದ ಪಕ್ಕದಲ್ಲಿದೆ.

ಮೂರನೆಯದು: ದೇವಾಲಯವನ್ನು ಸಂಪೂರ್ಣವಾಗಿ ಸುಣ್ಣದ ಕಲ್ಲುಗಳಿಂದ ಕೆತ್ತಲಾಗಿದೆ. ಇದು ಕಡಿಮೆ ಗುಣಮಟ್ಟದ ಕಲ್ಲಾಗಿದ್ದು, ಹಾಗಾಗಿಯೇ ದೇವಾಲಯದಲ್ಲಿ ಕಲಾತ್ಮಕ ವಿನ್ಯಾಸ, ಶಿಲ್ಪಕಲೆ ಅಥವಾ ಕೆತ್ತನೆ ಇಲ್ಲದಿರುವುದಕ್ಕೆ ಕಾರಣವಾಗಿದೆ. ಆದರೂ ಗರ್ಭಗೃಹದ ಪ್ರವೇಶದ್ವಾರದ ಎರಡೂ ಬದಿಗಳಲ್ಲಿ ಗೂಡುಗಳಿವೆ. ಇದಲ್ಲದೆ, ಗರ್ಭಗೃಹದಲ್ಲಿ ಕಲ್ಲಿನ ನಾಗ ಪ್ರತಿಮೆ ಇದೆ. ಪೂಜೆ ಮಾಡುವ ಸಲುವಾಗಿ, ಭಕ್ತರು 100 ವರ್ಷಗಳ ಹಿಂದೆ ಇದನ್ನು ಇಟ್ಟಿರಬಹುದು” ಎಂದು ಸಂತಲಿಂಗಂ ಹೇಳಿದ್ದಾರೆ.

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ. ಇದನ್ನು ಮರಳುಗಲ್ಲಿನಿಂದ ಕೆತ್ತಲಾಗಿದೆ. ಇದು ಸುಣ್ಣದ ಕಲ್ಲುಗಳಿಗೆ ಹೋಲುವ ಬಂಡೆಯಾಗಿದೆ ಎಂದು ಸಂತಲಿಂಗಂ ಹೇಳಿದರು.


ಇದನ್ನೂ ಓದಿ: ಆರ್ಯ-ಅನಾರ್ಯರ ನಡುವಿನ ಕಾಳಗ ಮತ್ತು ಮಿಲನ: ಗೊಂಡಿಯರ ಸಂಭೂ ಶೇಖರ ಶಂಭೋ ಶಂಕರನಾದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...