Homeಮುಖಪುಟ`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

- Advertisement -
- Advertisement -

‘ಕಾಂಟ್‌ ಟೇಕ್ ದಿಸ್ ಶಿಟ್ ಎನಿಮೋರ್’ ಎಂಬ ಸಾಕ್ಷ್ಯಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವ ಭಾರತೀಯ ಪತ್ರಕರ್ತ ವಿನೋದ್ ಕಪ್ರಿ ಅವರ ಹೊಸ ಸಾಕ್ಷ್ಯಚಿತ್ರ, ‘1232 ಕಿ.ಮೀ’ ಮಾರ್ಚ್‌‌ 24 ರ ಬುಧವಾರದಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಗೊಂಡಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ದುಃಸ್ಥಿತಿಯನ್ನು ಆಧರಿಸಿದ ಈ ಚಿತ್ರವು  ಕನ್ನಡ, ತಮಿಳು‌, ಮಲಯಾಳಂ, ತೆಲುಗು, ಮರಾಠಿ, ಬಾಂಗ್ಲಾ, ಹಿಂದಿ ಭಾಷೆಯಲ್ಲಿ ಲಭ್ಯವಿದೆ.

ಲಾಕ್‌ಡೌನ್‌ ಸಮಯದಲ್ಲಿ ಯಾವುದೇ ಸಾರಿಗೆ ವ್ಯವಸ್ಥೆ, ಆಹಾರ ಮತ್ತು ಆಶ್ರಯವಿಲ್ಲದೆ ಉಳಿದುಕೊಂಡಿದ್ದ ಏಳು ವಲಸೆ ಕಾರ್ಮಿಕರ ಕಷ್ಟಕರ ಪ್ರಯಾಣವನ್ನು ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಈ ಏಳು ಮಂದಿ ಕಾರ್ಮಿಕರು ಘಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ 1232 ಕಿ.ಮೀ ಸೈಕಲ್ ತುಳಿದುಕೊಂಡು ಹೋಗಿದ್ದರು.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ವಾರದ ಹಿಂದೆಯೆ ಟೀಸರ್‌ ಅನ್ನು ಬಿಡುಗಡೆಗೊಳಿಸಲಾಗಿದ್ದು, ಅದು ರಸ್ತೆಗಳು, ಹೆದ್ದಾರಿಗಳು ಮತ್ತು ರಾಜ್ಯದ ಗಡಿಗಳಲ್ಲಿ ಸಿಕ್ಕಿಹಾಕಿಕೊಂಡಿರುವಂತಹ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಎತ್ತಿ ತೋರಿಸುತ್ತದೆ. ಹೃದಯ ವಿದ್ರಾವಕ ದೃಶ್ಯವಿರುವ ಟೀಸರ್‌ಗಳನ್ನು ಇಲ್ಲಿ ನೋಡಬಹುದು.

ವಿನೋದ್‌ ಕಪ್ರಿ ಅವರ ವಲಸೆ ಕಾರ್ಮಿಕರ ಜೊತಗಿನ ಪ್ರಯಾಣವು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ಪುಸ್ತಕಗಳಾಗಿಯು ಪ್ರಕಟಗೊಳ್ಳಲಿದೆ. ಪುಸ್ತಕಗಳು ಕ್ರಮವಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಕಟವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು 21 ದಿನಗಳ ಕಾಲ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ಮಾರ್ಚ್‌ 24 ರಂದೆ ಈ ಚಿತ್ರವನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿದೆ.

ಚಿತ್ರವನ್ನು ನಿರ್ಮಿಸಿರುವ ಪತ್ರಕರ್ತ ವಿನೋದ್‌‌ ಕಪ್ರಿ, ಕಳೆದ ವರ್ಷ ಲಾಕ್‌ಡೌನ್‌ ಘೋಷಣೆಯಾದಾಗ ವಲಸೆ ಕಾರ್ಮಿಕರೊಂದಿಗೆ ತಾವು ಕೂಡಾ ಪ್ರಯಾಣಿಸಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

ಈ ಬಗ್ಗೆ ಕಳೆದ ವರ್ಷ ಮೇ 5 ರಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದ್ದ ವಿನೋದ್, “1232 ಕಿಲೋಮೀಟರ್‌ಗಳು. ಗಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ ಪ್ರಾರಂಭವಾದ ನನ್ನ ಜೀವನದ ಕಠಿಣ ಮತ್ತು ಮರೆಯಲಾಗದ ಪ್ರಯಾಣವನ್ನು ಪೂರ್ಣಗೊಳಿಸಿದೆ. ನಾನು 7 ವಲಸೆ ಕಾರ್ಮಿಕರೊಂದಿಗೆ 1232 ಕಿಲೋಮೀಟರ್ ದೂರವನ್ನು ಕ್ರಮಿಸಿದ್ದು, ಈ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ತಲುಪಲು ಬೈಸಿಕಲ್ ಮೂಲಕ ಸವಾರಿ ಮಾಡುತ್ತಿದ್ದರು” ಎಂದು ಟ್ವೀಟ್ ಮಾಡಿದ್ದರು.

ಈ ಮೂಲಕ ಅವರು ತನ್ನ ಹೊಸ ಚಿತ್ರವು ನಿರ್ಮಾಣ ಹಂತದಲ್ಲಿದೆ, ಅದರ ಹೆಸರು ‘1232 ಕಿ.ಮೀ.’ ಎಂದು ಹೇಳಿಕೊಂಡಿದ್ದರು. ಈ ಟ್ವೀಟ್‌ನಲ್ಲಿ ಅವರು ಸಾಕ್ಷ್ಯಚಿತ್ರದ ಏಳು ವಲಸೆ ಕಾರ್ಮಿಕರು ಹಾಗೂ ಚಿತ್ರದ ಇತರ ದೃಶ್ಯಗಳ ಚಿತ್ರಗಳನ್ನು ಟ್ವಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...