Homeಮುಖಪುಟ`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

- Advertisement -
- Advertisement -

‘ಕಾಂಟ್‌ ಟೇಕ್ ದಿಸ್ ಶಿಟ್ ಎನಿಮೋರ್’ ಎಂಬ ಸಾಕ್ಷ್ಯಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವ ಭಾರತೀಯ ಪತ್ರಕರ್ತ ವಿನೋದ್ ಕಪ್ರಿ ಅವರ ಹೊಸ ಸಾಕ್ಷ್ಯಚಿತ್ರ, ‘1232 ಕಿ.ಮೀ’ ಮಾರ್ಚ್‌‌ 24 ರ ಬುಧವಾರದಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಗೊಂಡಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ದುಃಸ್ಥಿತಿಯನ್ನು ಆಧರಿಸಿದ ಈ ಚಿತ್ರವು  ಕನ್ನಡ, ತಮಿಳು‌, ಮಲಯಾಳಂ, ತೆಲುಗು, ಮರಾಠಿ, ಬಾಂಗ್ಲಾ, ಹಿಂದಿ ಭಾಷೆಯಲ್ಲಿ ಲಭ್ಯವಿದೆ.

ಲಾಕ್‌ಡೌನ್‌ ಸಮಯದಲ್ಲಿ ಯಾವುದೇ ಸಾರಿಗೆ ವ್ಯವಸ್ಥೆ, ಆಹಾರ ಮತ್ತು ಆಶ್ರಯವಿಲ್ಲದೆ ಉಳಿದುಕೊಂಡಿದ್ದ ಏಳು ವಲಸೆ ಕಾರ್ಮಿಕರ ಕಷ್ಟಕರ ಪ್ರಯಾಣವನ್ನು ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಈ ಏಳು ಮಂದಿ ಕಾರ್ಮಿಕರು ಘಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ 1232 ಕಿ.ಮೀ ಸೈಕಲ್ ತುಳಿದುಕೊಂಡು ಹೋಗಿದ್ದರು.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ವಾರದ ಹಿಂದೆಯೆ ಟೀಸರ್‌ ಅನ್ನು ಬಿಡುಗಡೆಗೊಳಿಸಲಾಗಿದ್ದು, ಅದು ರಸ್ತೆಗಳು, ಹೆದ್ದಾರಿಗಳು ಮತ್ತು ರಾಜ್ಯದ ಗಡಿಗಳಲ್ಲಿ ಸಿಕ್ಕಿಹಾಕಿಕೊಂಡಿರುವಂತಹ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಎತ್ತಿ ತೋರಿಸುತ್ತದೆ. ಹೃದಯ ವಿದ್ರಾವಕ ದೃಶ್ಯವಿರುವ ಟೀಸರ್‌ಗಳನ್ನು ಇಲ್ಲಿ ನೋಡಬಹುದು.

ವಿನೋದ್‌ ಕಪ್ರಿ ಅವರ ವಲಸೆ ಕಾರ್ಮಿಕರ ಜೊತಗಿನ ಪ್ರಯಾಣವು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ಪುಸ್ತಕಗಳಾಗಿಯು ಪ್ರಕಟಗೊಳ್ಳಲಿದೆ. ಪುಸ್ತಕಗಳು ಕ್ರಮವಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಕಟವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು 21 ದಿನಗಳ ಕಾಲ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ಮಾರ್ಚ್‌ 24 ರಂದೆ ಈ ಚಿತ್ರವನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿದೆ.

ಚಿತ್ರವನ್ನು ನಿರ್ಮಿಸಿರುವ ಪತ್ರಕರ್ತ ವಿನೋದ್‌‌ ಕಪ್ರಿ, ಕಳೆದ ವರ್ಷ ಲಾಕ್‌ಡೌನ್‌ ಘೋಷಣೆಯಾದಾಗ ವಲಸೆ ಕಾರ್ಮಿಕರೊಂದಿಗೆ ತಾವು ಕೂಡಾ ಪ್ರಯಾಣಿಸಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

ಈ ಬಗ್ಗೆ ಕಳೆದ ವರ್ಷ ಮೇ 5 ರಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದ್ದ ವಿನೋದ್, “1232 ಕಿಲೋಮೀಟರ್‌ಗಳು. ಗಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ ಪ್ರಾರಂಭವಾದ ನನ್ನ ಜೀವನದ ಕಠಿಣ ಮತ್ತು ಮರೆಯಲಾಗದ ಪ್ರಯಾಣವನ್ನು ಪೂರ್ಣಗೊಳಿಸಿದೆ. ನಾನು 7 ವಲಸೆ ಕಾರ್ಮಿಕರೊಂದಿಗೆ 1232 ಕಿಲೋಮೀಟರ್ ದೂರವನ್ನು ಕ್ರಮಿಸಿದ್ದು, ಈ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ತಲುಪಲು ಬೈಸಿಕಲ್ ಮೂಲಕ ಸವಾರಿ ಮಾಡುತ್ತಿದ್ದರು” ಎಂದು ಟ್ವೀಟ್ ಮಾಡಿದ್ದರು.

ಈ ಮೂಲಕ ಅವರು ತನ್ನ ಹೊಸ ಚಿತ್ರವು ನಿರ್ಮಾಣ ಹಂತದಲ್ಲಿದೆ, ಅದರ ಹೆಸರು ‘1232 ಕಿ.ಮೀ.’ ಎಂದು ಹೇಳಿಕೊಂಡಿದ್ದರು. ಈ ಟ್ವೀಟ್‌ನಲ್ಲಿ ಅವರು ಸಾಕ್ಷ್ಯಚಿತ್ರದ ಏಳು ವಲಸೆ ಕಾರ್ಮಿಕರು ಹಾಗೂ ಚಿತ್ರದ ಇತರ ದೃಶ್ಯಗಳ ಚಿತ್ರಗಳನ್ನು ಟ್ವಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...