Homeಮುಖಪುಟ`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

- Advertisement -
- Advertisement -

‘ಕಾಂಟ್‌ ಟೇಕ್ ದಿಸ್ ಶಿಟ್ ಎನಿಮೋರ್’ ಎಂಬ ಸಾಕ್ಷ್ಯಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವ ಭಾರತೀಯ ಪತ್ರಕರ್ತ ವಿನೋದ್ ಕಪ್ರಿ ಅವರ ಹೊಸ ಸಾಕ್ಷ್ಯಚಿತ್ರ, ‘1232 ಕಿ.ಮೀ’ ಮಾರ್ಚ್‌‌ 24 ರ ಬುಧವಾರದಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಗೊಂಡಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ದುಃಸ್ಥಿತಿಯನ್ನು ಆಧರಿಸಿದ ಈ ಚಿತ್ರವು  ಕನ್ನಡ, ತಮಿಳು‌, ಮಲಯಾಳಂ, ತೆಲುಗು, ಮರಾಠಿ, ಬಾಂಗ್ಲಾ, ಹಿಂದಿ ಭಾಷೆಯಲ್ಲಿ ಲಭ್ಯವಿದೆ.

ಲಾಕ್‌ಡೌನ್‌ ಸಮಯದಲ್ಲಿ ಯಾವುದೇ ಸಾರಿಗೆ ವ್ಯವಸ್ಥೆ, ಆಹಾರ ಮತ್ತು ಆಶ್ರಯವಿಲ್ಲದೆ ಉಳಿದುಕೊಂಡಿದ್ದ ಏಳು ವಲಸೆ ಕಾರ್ಮಿಕರ ಕಷ್ಟಕರ ಪ್ರಯಾಣವನ್ನು ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಈ ಏಳು ಮಂದಿ ಕಾರ್ಮಿಕರು ಘಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ 1232 ಕಿ.ಮೀ ಸೈಕಲ್ ತುಳಿದುಕೊಂಡು ಹೋಗಿದ್ದರು.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ವಾರದ ಹಿಂದೆಯೆ ಟೀಸರ್‌ ಅನ್ನು ಬಿಡುಗಡೆಗೊಳಿಸಲಾಗಿದ್ದು, ಅದು ರಸ್ತೆಗಳು, ಹೆದ್ದಾರಿಗಳು ಮತ್ತು ರಾಜ್ಯದ ಗಡಿಗಳಲ್ಲಿ ಸಿಕ್ಕಿಹಾಕಿಕೊಂಡಿರುವಂತಹ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಎತ್ತಿ ತೋರಿಸುತ್ತದೆ. ಹೃದಯ ವಿದ್ರಾವಕ ದೃಶ್ಯವಿರುವ ಟೀಸರ್‌ಗಳನ್ನು ಇಲ್ಲಿ ನೋಡಬಹುದು.

ವಿನೋದ್‌ ಕಪ್ರಿ ಅವರ ವಲಸೆ ಕಾರ್ಮಿಕರ ಜೊತಗಿನ ಪ್ರಯಾಣವು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ಪುಸ್ತಕಗಳಾಗಿಯು ಪ್ರಕಟಗೊಳ್ಳಲಿದೆ. ಪುಸ್ತಕಗಳು ಕ್ರಮವಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಕಟವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು 21 ದಿನಗಳ ಕಾಲ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ಮಾರ್ಚ್‌ 24 ರಂದೆ ಈ ಚಿತ್ರವನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿದೆ.

ಚಿತ್ರವನ್ನು ನಿರ್ಮಿಸಿರುವ ಪತ್ರಕರ್ತ ವಿನೋದ್‌‌ ಕಪ್ರಿ, ಕಳೆದ ವರ್ಷ ಲಾಕ್‌ಡೌನ್‌ ಘೋಷಣೆಯಾದಾಗ ವಲಸೆ ಕಾರ್ಮಿಕರೊಂದಿಗೆ ತಾವು ಕೂಡಾ ಪ್ರಯಾಣಿಸಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

ಈ ಬಗ್ಗೆ ಕಳೆದ ವರ್ಷ ಮೇ 5 ರಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದ್ದ ವಿನೋದ್, “1232 ಕಿಲೋಮೀಟರ್‌ಗಳು. ಗಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ ಪ್ರಾರಂಭವಾದ ನನ್ನ ಜೀವನದ ಕಠಿಣ ಮತ್ತು ಮರೆಯಲಾಗದ ಪ್ರಯಾಣವನ್ನು ಪೂರ್ಣಗೊಳಿಸಿದೆ. ನಾನು 7 ವಲಸೆ ಕಾರ್ಮಿಕರೊಂದಿಗೆ 1232 ಕಿಲೋಮೀಟರ್ ದೂರವನ್ನು ಕ್ರಮಿಸಿದ್ದು, ಈ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ತಲುಪಲು ಬೈಸಿಕಲ್ ಮೂಲಕ ಸವಾರಿ ಮಾಡುತ್ತಿದ್ದರು” ಎಂದು ಟ್ವೀಟ್ ಮಾಡಿದ್ದರು.

ಈ ಮೂಲಕ ಅವರು ತನ್ನ ಹೊಸ ಚಿತ್ರವು ನಿರ್ಮಾಣ ಹಂತದಲ್ಲಿದೆ, ಅದರ ಹೆಸರು ‘1232 ಕಿ.ಮೀ.’ ಎಂದು ಹೇಳಿಕೊಂಡಿದ್ದರು. ಈ ಟ್ವೀಟ್‌ನಲ್ಲಿ ಅವರು ಸಾಕ್ಷ್ಯಚಿತ್ರದ ಏಳು ವಲಸೆ ಕಾರ್ಮಿಕರು ಹಾಗೂ ಚಿತ್ರದ ಇತರ ದೃಶ್ಯಗಳ ಚಿತ್ರಗಳನ್ನು ಟ್ವಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...