Homeಮುಖಪುಟ`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

- Advertisement -
- Advertisement -

‘ಕಾಂಟ್‌ ಟೇಕ್ ದಿಸ್ ಶಿಟ್ ಎನಿಮೋರ್’ ಎಂಬ ಸಾಕ್ಷ್ಯಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವ ಭಾರತೀಯ ಪತ್ರಕರ್ತ ವಿನೋದ್ ಕಪ್ರಿ ಅವರ ಹೊಸ ಸಾಕ್ಷ್ಯಚಿತ್ರ, ‘1232 ಕಿ.ಮೀ’ ಮಾರ್ಚ್‌‌ 24 ರ ಬುಧವಾರದಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಗೊಂಡಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ದುಃಸ್ಥಿತಿಯನ್ನು ಆಧರಿಸಿದ ಈ ಚಿತ್ರವು  ಕನ್ನಡ, ತಮಿಳು‌, ಮಲಯಾಳಂ, ತೆಲುಗು, ಮರಾಠಿ, ಬಾಂಗ್ಲಾ, ಹಿಂದಿ ಭಾಷೆಯಲ್ಲಿ ಲಭ್ಯವಿದೆ.

ಲಾಕ್‌ಡೌನ್‌ ಸಮಯದಲ್ಲಿ ಯಾವುದೇ ಸಾರಿಗೆ ವ್ಯವಸ್ಥೆ, ಆಹಾರ ಮತ್ತು ಆಶ್ರಯವಿಲ್ಲದೆ ಉಳಿದುಕೊಂಡಿದ್ದ ಏಳು ವಲಸೆ ಕಾರ್ಮಿಕರ ಕಷ್ಟಕರ ಪ್ರಯಾಣವನ್ನು ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಈ ಏಳು ಮಂದಿ ಕಾರ್ಮಿಕರು ಘಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ 1232 ಕಿ.ಮೀ ಸೈಕಲ್ ತುಳಿದುಕೊಂಡು ಹೋಗಿದ್ದರು.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ವಾರದ ಹಿಂದೆಯೆ ಟೀಸರ್‌ ಅನ್ನು ಬಿಡುಗಡೆಗೊಳಿಸಲಾಗಿದ್ದು, ಅದು ರಸ್ತೆಗಳು, ಹೆದ್ದಾರಿಗಳು ಮತ್ತು ರಾಜ್ಯದ ಗಡಿಗಳಲ್ಲಿ ಸಿಕ್ಕಿಹಾಕಿಕೊಂಡಿರುವಂತಹ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಎತ್ತಿ ತೋರಿಸುತ್ತದೆ. ಹೃದಯ ವಿದ್ರಾವಕ ದೃಶ್ಯವಿರುವ ಟೀಸರ್‌ಗಳನ್ನು ಇಲ್ಲಿ ನೋಡಬಹುದು.

ವಿನೋದ್‌ ಕಪ್ರಿ ಅವರ ವಲಸೆ ಕಾರ್ಮಿಕರ ಜೊತಗಿನ ಪ್ರಯಾಣವು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ಪುಸ್ತಕಗಳಾಗಿಯು ಪ್ರಕಟಗೊಳ್ಳಲಿದೆ. ಪುಸ್ತಕಗಳು ಕ್ರಮವಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಕಟವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು 21 ದಿನಗಳ ಕಾಲ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ಮಾರ್ಚ್‌ 24 ರಂದೆ ಈ ಚಿತ್ರವನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿದೆ.

ಚಿತ್ರವನ್ನು ನಿರ್ಮಿಸಿರುವ ಪತ್ರಕರ್ತ ವಿನೋದ್‌‌ ಕಪ್ರಿ, ಕಳೆದ ವರ್ಷ ಲಾಕ್‌ಡೌನ್‌ ಘೋಷಣೆಯಾದಾಗ ವಲಸೆ ಕಾರ್ಮಿಕರೊಂದಿಗೆ ತಾವು ಕೂಡಾ ಪ್ರಯಾಣಿಸಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

ಈ ಬಗ್ಗೆ ಕಳೆದ ವರ್ಷ ಮೇ 5 ರಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದ್ದ ವಿನೋದ್, “1232 ಕಿಲೋಮೀಟರ್‌ಗಳು. ಗಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ ಪ್ರಾರಂಭವಾದ ನನ್ನ ಜೀವನದ ಕಠಿಣ ಮತ್ತು ಮರೆಯಲಾಗದ ಪ್ರಯಾಣವನ್ನು ಪೂರ್ಣಗೊಳಿಸಿದೆ. ನಾನು 7 ವಲಸೆ ಕಾರ್ಮಿಕರೊಂದಿಗೆ 1232 ಕಿಲೋಮೀಟರ್ ದೂರವನ್ನು ಕ್ರಮಿಸಿದ್ದು, ಈ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ತಲುಪಲು ಬೈಸಿಕಲ್ ಮೂಲಕ ಸವಾರಿ ಮಾಡುತ್ತಿದ್ದರು” ಎಂದು ಟ್ವೀಟ್ ಮಾಡಿದ್ದರು.

ಈ ಮೂಲಕ ಅವರು ತನ್ನ ಹೊಸ ಚಿತ್ರವು ನಿರ್ಮಾಣ ಹಂತದಲ್ಲಿದೆ, ಅದರ ಹೆಸರು ‘1232 ಕಿ.ಮೀ.’ ಎಂದು ಹೇಳಿಕೊಂಡಿದ್ದರು. ಈ ಟ್ವೀಟ್‌ನಲ್ಲಿ ಅವರು ಸಾಕ್ಷ್ಯಚಿತ್ರದ ಏಳು ವಲಸೆ ಕಾರ್ಮಿಕರು ಹಾಗೂ ಚಿತ್ರದ ಇತರ ದೃಶ್ಯಗಳ ಚಿತ್ರಗಳನ್ನು ಟ್ವಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...