Homeಮುಖಪುಟ`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

- Advertisement -
- Advertisement -

‘ಕಾಂಟ್‌ ಟೇಕ್ ದಿಸ್ ಶಿಟ್ ಎನಿಮೋರ್’ ಎಂಬ ಸಾಕ್ಷ್ಯಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವ ಭಾರತೀಯ ಪತ್ರಕರ್ತ ವಿನೋದ್ ಕಪ್ರಿ ಅವರ ಹೊಸ ಸಾಕ್ಷ್ಯಚಿತ್ರ, ‘1232 ಕಿ.ಮೀ’ ಮಾರ್ಚ್‌‌ 24 ರ ಬುಧವಾರದಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಗೊಂಡಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ದುಃಸ್ಥಿತಿಯನ್ನು ಆಧರಿಸಿದ ಈ ಚಿತ್ರವು  ಕನ್ನಡ, ತಮಿಳು‌, ಮಲಯಾಳಂ, ತೆಲುಗು, ಮರಾಠಿ, ಬಾಂಗ್ಲಾ, ಹಿಂದಿ ಭಾಷೆಯಲ್ಲಿ ಲಭ್ಯವಿದೆ.

ಲಾಕ್‌ಡೌನ್‌ ಸಮಯದಲ್ಲಿ ಯಾವುದೇ ಸಾರಿಗೆ ವ್ಯವಸ್ಥೆ, ಆಹಾರ ಮತ್ತು ಆಶ್ರಯವಿಲ್ಲದೆ ಉಳಿದುಕೊಂಡಿದ್ದ ಏಳು ವಲಸೆ ಕಾರ್ಮಿಕರ ಕಷ್ಟಕರ ಪ್ರಯಾಣವನ್ನು ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಈ ಏಳು ಮಂದಿ ಕಾರ್ಮಿಕರು ಘಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ 1232 ಕಿ.ಮೀ ಸೈಕಲ್ ತುಳಿದುಕೊಂಡು ಹೋಗಿದ್ದರು.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ವಾರದ ಹಿಂದೆಯೆ ಟೀಸರ್‌ ಅನ್ನು ಬಿಡುಗಡೆಗೊಳಿಸಲಾಗಿದ್ದು, ಅದು ರಸ್ತೆಗಳು, ಹೆದ್ದಾರಿಗಳು ಮತ್ತು ರಾಜ್ಯದ ಗಡಿಗಳಲ್ಲಿ ಸಿಕ್ಕಿಹಾಕಿಕೊಂಡಿರುವಂತಹ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಎತ್ತಿ ತೋರಿಸುತ್ತದೆ. ಹೃದಯ ವಿದ್ರಾವಕ ದೃಶ್ಯವಿರುವ ಟೀಸರ್‌ಗಳನ್ನು ಇಲ್ಲಿ ನೋಡಬಹುದು.

ವಿನೋದ್‌ ಕಪ್ರಿ ಅವರ ವಲಸೆ ಕಾರ್ಮಿಕರ ಜೊತಗಿನ ಪ್ರಯಾಣವು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ಪುಸ್ತಕಗಳಾಗಿಯು ಪ್ರಕಟಗೊಳ್ಳಲಿದೆ. ಪುಸ್ತಕಗಳು ಕ್ರಮವಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಕಟವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು 21 ದಿನಗಳ ಕಾಲ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ಮಾರ್ಚ್‌ 24 ರಂದೆ ಈ ಚಿತ್ರವನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿದೆ.

ಚಿತ್ರವನ್ನು ನಿರ್ಮಿಸಿರುವ ಪತ್ರಕರ್ತ ವಿನೋದ್‌‌ ಕಪ್ರಿ, ಕಳೆದ ವರ್ಷ ಲಾಕ್‌ಡೌನ್‌ ಘೋಷಣೆಯಾದಾಗ ವಲಸೆ ಕಾರ್ಮಿಕರೊಂದಿಗೆ ತಾವು ಕೂಡಾ ಪ್ರಯಾಣಿಸಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

ಈ ಬಗ್ಗೆ ಕಳೆದ ವರ್ಷ ಮೇ 5 ರಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದ್ದ ವಿನೋದ್, “1232 ಕಿಲೋಮೀಟರ್‌ಗಳು. ಗಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ ಪ್ರಾರಂಭವಾದ ನನ್ನ ಜೀವನದ ಕಠಿಣ ಮತ್ತು ಮರೆಯಲಾಗದ ಪ್ರಯಾಣವನ್ನು ಪೂರ್ಣಗೊಳಿಸಿದೆ. ನಾನು 7 ವಲಸೆ ಕಾರ್ಮಿಕರೊಂದಿಗೆ 1232 ಕಿಲೋಮೀಟರ್ ದೂರವನ್ನು ಕ್ರಮಿಸಿದ್ದು, ಈ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ತಲುಪಲು ಬೈಸಿಕಲ್ ಮೂಲಕ ಸವಾರಿ ಮಾಡುತ್ತಿದ್ದರು” ಎಂದು ಟ್ವೀಟ್ ಮಾಡಿದ್ದರು.

ಈ ಮೂಲಕ ಅವರು ತನ್ನ ಹೊಸ ಚಿತ್ರವು ನಿರ್ಮಾಣ ಹಂತದಲ್ಲಿದೆ, ಅದರ ಹೆಸರು ‘1232 ಕಿ.ಮೀ.’ ಎಂದು ಹೇಳಿಕೊಂಡಿದ್ದರು. ಈ ಟ್ವೀಟ್‌ನಲ್ಲಿ ಅವರು ಸಾಕ್ಷ್ಯಚಿತ್ರದ ಏಳು ವಲಸೆ ಕಾರ್ಮಿಕರು ಹಾಗೂ ಚಿತ್ರದ ಇತರ ದೃಶ್ಯಗಳ ಚಿತ್ರಗಳನ್ನು ಟ್ವಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...