Homeಅಂತರಾಷ್ಟ್ರೀಯಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

ಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

- Advertisement -
- Advertisement -

ಜಾಗತಿಕವಾಗಿ 2025ರಲ್ಲಿ ನೂರಾ ಇಪ್ಪತ್ತೆಂಟು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ (ಡಿ.31) ತಿಳಿಸಿದೆ.

ಪತ್ರಕರ್ತರ ಹತ್ಯೆಗಳಲ್ಲಿ ಅರ್ಧಕ್ಕಿಂತ ಹೆಚ್ಚು (74) ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿವೆ ಎಂದು ಬೆಲ್ಜಿಯಂ ಮೂಲದ ಒಕ್ಕೂಟ ತಿಳಿಸಿದೆ. ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್ ಆಕ್ರಮಣ ನಡೆಸಿದ ಸಮಯದಲ್ಲಿ ಗಾಝಾ ಒಂದರಲ್ಲೇ 44 ಪ್ರತಿಶತ (56) ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಒಕ್ಕೂಟ ಹೇಳಿದೆ.

ಆಫ್ರಿಕಾದಲ್ಲಿ 18 ಪತ್ರಕರ್ತರು, ಏಷ್ಯಾ-ಪೆಸಿಫಿಕ್‌ನಲ್ಲಿ 15, ಅಮೆರಿಕದಲ್ಲಿ 11 ಮತ್ತು ಯುರೋಪಿನಲ್ಲಿ 10 ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಈ ಪಟ್ಟಿಯಲ್ಲಿ ಒಂಬತ್ತು ಆಕಸ್ಮಿಕ ಸಾವುಗಳೂ ಸೇರಿವೆ.

ಭಾರತದಲ್ಲಿ, ನಾಲ್ಕು ಸಾವುಗಳನ್ನು ಒಕ್ಕೂಟ ದಾಖಲಿಸಿದೆ. ಜನವರಿ 1, 2025 ರಂದು ಬಸ್ತಾರ್ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಹತ್ಯೆ ಇದರಲ್ಲಿ ಒಳಗೊಂಡಿದೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ಮುಖೇಶ್ ಚಂದ್ರಕರ್ ಅವರನ್ನು ಕೊಲೆ ಮಾಡಲಾಗಿತ್ತು. ರಸ್ತೆ ಗುತ್ತಿಗೆದಾರರ ಆಸ್ತಿಯಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಅವರ ಶವ ಪತ್ತೆಯಾಗಿತ್ತು.

ಜಗತ್ತಿನಾದ್ಯಂತ 533 ಪತ್ರಕರ್ತರನ್ನು ತಮ್ಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜೈಲಿಗೆ ಹಾಕಲಾಗಿದೆ ಎಂದು ಒಕ್ಕೂಟ ತಿಳಿಸಿದೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಜೈಲು ಶಿಕ್ಷೆಗೆ ಒಳಗಾದ ಪತ್ರಕರ್ತರ ಸಂಖ್ಯೆ ಅತಿ ಹೆಚ್ಚಿದೆ. ಈ ಪ್ರದೇಶದಲ್ಲಿ ಜೈಲಿನಲ್ಲಿರುವ 277 ಪತ್ರಕರ್ತರಲ್ಲಿ 143 ಮಂದಿ ಚೀನಾದಲ್ಲಿ ಮತ್ತು 49 ಮಂದಿ ಮ್ಯಾನ್ಮಾರ್‌ನಲ್ಲಿದ್ದಾರೆ.

2024ರಲ್ಲಿ, ಒಕ್ಕೂಟ 122 ಪತ್ರಕರ್ತರ ಸಾವುಗಳನ್ನು ಮತ್ತು 516 ಜನರನ್ನು ಜೈಲಿಗೆ ಹಾಕಲಾಗಿದೆ ಎಂದು ಹೇಳಿತ್ತು.

ಒಕ್ಕೂಟ ಪತ್ರಕರ್ತರನ್ನು ರಕ್ಷಿಸುವಲ್ಲಿ ಅಧಿಕಾರಿಗಳ ಅಥವಾ ಆಡಳಿತದ ‘ನಿರಂತರ ವೈಫಲ್ಯ’ ವನ್ನು ಖಂಡಿಸಿದೆ. ಹಿಂಸಾಚಾರವನ್ನು ಕೊನೆಗೊಳಿಸಲು ತಕ್ಷಣದ ಮತ್ತು ನಿರ್ಣಾಯಕ ಕ್ರಮಕ್ಕೆ ಕರೆ ನೀಡಿದೆ.

ಒಂದು ವರ್ಷದಲ್ಲಿ 128 ಪತ್ರಕರ್ತರು ಕೊಲ್ಲಲ್ಪಡುತ್ತಿರುವುದು ‘ಕೇವಲ ಅಂಕಿಅಂಶವಲ್ಲ, ಇದು ಜಾಗತಿಕ ಬಿಕ್ಕಟ್ಟು’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆಂಥೋನಿ ಬೆಲ್ಲಂಗರ್ ಹೇಳಿದ್ದಾರೆ.

ಪತ್ರಕರ್ತರು ತಮ್ಮ ಕೆಲಸ ಮಾಡಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಳ್ಳುವ ಈ ಪ್ರವೃತ್ತಿ ಅತ್ಯಂತ ಕ್ರೂರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಗಳು ಮಾಧ್ಯಮ ಕಾರ್ಯಕರ್ತರನ್ನು ರಕ್ಷಿಸಲು, ಕೊಲೆಗಾರರನ್ನು ನ್ಯಾಯಾಂಗದ ಮುಂದೆ ತರಬೇಕು ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

1990ರಿಂದ ಮತ್ತು ವಾರ್ಷಿಕ ಪಟ್ಟಿ ಬಿಡುಗಡೆಯಾದ ನಂತರ, ಒಕ್ಕೂಟ ಜಾಗತಿಕವಾಗಿ 3,170ಕ್ಕೂ ಹೆಚ್ಚು ಪತ್ರಕರ್ತರ ಸಾವುಗಳನ್ನು ದಾಖಲಿಸಿದೆ, ಪ್ರತಿ ವರ್ಷ ಸರಾಸರಿ 91 ಕೊಲೆಗಳು ಸಂಭವಿಸುತ್ತಿವೆ.

ಡಿಸೆಂಬರ್ 10ರಂದು, ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ 2025 ರಲ್ಲಿ 126 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳಿತ್ತು. ಜಾಗತಿಕ ಮಾಧ್ಯಮ ಕಾವಲು ಸಂಸ್ಥೆಯು ಇಡೀ ವರ್ಷದ ಕೊನೆಯ 20 ದಿನಗಳನ್ನು ಒಳಗೊಂಡ ನವೀಕರಿಸಿದ ಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ.

ಡಿಸೆಂಬರ್ 23ರಂದು, ಫ್ರೀ ಸ್ಪೀಚ್ ಕಲೆಕ್ಟಿವ್ 2025ರಲ್ಲಿ ಭಾರತದಲ್ಲಿ ಎಂಟು ಪತ್ರಕರ್ತರನ್ನು ಕೊಲ್ಲಲಾಗಿದೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...