Homeಅಂತರಾಷ್ಟ್ರೀಯಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

ಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

- Advertisement -
- Advertisement -

ಜಾಗತಿಕವಾಗಿ 2025ರಲ್ಲಿ ನೂರಾ ಇಪ್ಪತ್ತೆಂಟು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ (ಡಿ.31) ತಿಳಿಸಿದೆ.

ಪತ್ರಕರ್ತರ ಹತ್ಯೆಗಳಲ್ಲಿ ಅರ್ಧಕ್ಕಿಂತ ಹೆಚ್ಚು (74) ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿವೆ ಎಂದು ಬೆಲ್ಜಿಯಂ ಮೂಲದ ಒಕ್ಕೂಟ ತಿಳಿಸಿದೆ. ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್ ಆಕ್ರಮಣ ನಡೆಸಿದ ಸಮಯದಲ್ಲಿ ಗಾಝಾ ಒಂದರಲ್ಲೇ 44 ಪ್ರತಿಶತ (56) ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಒಕ್ಕೂಟ ಹೇಳಿದೆ.

ಆಫ್ರಿಕಾದಲ್ಲಿ 18 ಪತ್ರಕರ್ತರು, ಏಷ್ಯಾ-ಪೆಸಿಫಿಕ್‌ನಲ್ಲಿ 15, ಅಮೆರಿಕದಲ್ಲಿ 11 ಮತ್ತು ಯುರೋಪಿನಲ್ಲಿ 10 ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಈ ಪಟ್ಟಿಯಲ್ಲಿ ಒಂಬತ್ತು ಆಕಸ್ಮಿಕ ಸಾವುಗಳೂ ಸೇರಿವೆ.

ಭಾರತದಲ್ಲಿ, ನಾಲ್ಕು ಸಾವುಗಳನ್ನು ಒಕ್ಕೂಟ ದಾಖಲಿಸಿದೆ. ಜನವರಿ 1, 2025 ರಂದು ಬಸ್ತಾರ್ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಹತ್ಯೆ ಇದರಲ್ಲಿ ಒಳಗೊಂಡಿದೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ಮುಖೇಶ್ ಚಂದ್ರಕರ್ ಅವರನ್ನು ಕೊಲೆ ಮಾಡಲಾಗಿತ್ತು. ರಸ್ತೆ ಗುತ್ತಿಗೆದಾರರ ಆಸ್ತಿಯಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಅವರ ಶವ ಪತ್ತೆಯಾಗಿತ್ತು.

ಜಗತ್ತಿನಾದ್ಯಂತ 533 ಪತ್ರಕರ್ತರನ್ನು ತಮ್ಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜೈಲಿಗೆ ಹಾಕಲಾಗಿದೆ ಎಂದು ಒಕ್ಕೂಟ ತಿಳಿಸಿದೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಜೈಲು ಶಿಕ್ಷೆಗೆ ಒಳಗಾದ ಪತ್ರಕರ್ತರ ಸಂಖ್ಯೆ ಅತಿ ಹೆಚ್ಚಿದೆ. ಈ ಪ್ರದೇಶದಲ್ಲಿ ಜೈಲಿನಲ್ಲಿರುವ 277 ಪತ್ರಕರ್ತರಲ್ಲಿ 143 ಮಂದಿ ಚೀನಾದಲ್ಲಿ ಮತ್ತು 49 ಮಂದಿ ಮ್ಯಾನ್ಮಾರ್‌ನಲ್ಲಿದ್ದಾರೆ.

2024ರಲ್ಲಿ, ಒಕ್ಕೂಟ 122 ಪತ್ರಕರ್ತರ ಸಾವುಗಳನ್ನು ಮತ್ತು 516 ಜನರನ್ನು ಜೈಲಿಗೆ ಹಾಕಲಾಗಿದೆ ಎಂದು ಹೇಳಿತ್ತು.

ಒಕ್ಕೂಟ ಪತ್ರಕರ್ತರನ್ನು ರಕ್ಷಿಸುವಲ್ಲಿ ಅಧಿಕಾರಿಗಳ ಅಥವಾ ಆಡಳಿತದ ‘ನಿರಂತರ ವೈಫಲ್ಯ’ ವನ್ನು ಖಂಡಿಸಿದೆ. ಹಿಂಸಾಚಾರವನ್ನು ಕೊನೆಗೊಳಿಸಲು ತಕ್ಷಣದ ಮತ್ತು ನಿರ್ಣಾಯಕ ಕ್ರಮಕ್ಕೆ ಕರೆ ನೀಡಿದೆ.

ಒಂದು ವರ್ಷದಲ್ಲಿ 128 ಪತ್ರಕರ್ತರು ಕೊಲ್ಲಲ್ಪಡುತ್ತಿರುವುದು ‘ಕೇವಲ ಅಂಕಿಅಂಶವಲ್ಲ, ಇದು ಜಾಗತಿಕ ಬಿಕ್ಕಟ್ಟು’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆಂಥೋನಿ ಬೆಲ್ಲಂಗರ್ ಹೇಳಿದ್ದಾರೆ.

ಪತ್ರಕರ್ತರು ತಮ್ಮ ಕೆಲಸ ಮಾಡಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಳ್ಳುವ ಈ ಪ್ರವೃತ್ತಿ ಅತ್ಯಂತ ಕ್ರೂರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಗಳು ಮಾಧ್ಯಮ ಕಾರ್ಯಕರ್ತರನ್ನು ರಕ್ಷಿಸಲು, ಕೊಲೆಗಾರರನ್ನು ನ್ಯಾಯಾಂಗದ ಮುಂದೆ ತರಬೇಕು ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

1990ರಿಂದ ಮತ್ತು ವಾರ್ಷಿಕ ಪಟ್ಟಿ ಬಿಡುಗಡೆಯಾದ ನಂತರ, ಒಕ್ಕೂಟ ಜಾಗತಿಕವಾಗಿ 3,170ಕ್ಕೂ ಹೆಚ್ಚು ಪತ್ರಕರ್ತರ ಸಾವುಗಳನ್ನು ದಾಖಲಿಸಿದೆ, ಪ್ರತಿ ವರ್ಷ ಸರಾಸರಿ 91 ಕೊಲೆಗಳು ಸಂಭವಿಸುತ್ತಿವೆ.

ಡಿಸೆಂಬರ್ 10ರಂದು, ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ 2025 ರಲ್ಲಿ 126 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳಿತ್ತು. ಜಾಗತಿಕ ಮಾಧ್ಯಮ ಕಾವಲು ಸಂಸ್ಥೆಯು ಇಡೀ ವರ್ಷದ ಕೊನೆಯ 20 ದಿನಗಳನ್ನು ಒಳಗೊಂಡ ನವೀಕರಿಸಿದ ಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ.

ಡಿಸೆಂಬರ್ 23ರಂದು, ಫ್ರೀ ಸ್ಪೀಚ್ ಕಲೆಕ್ಟಿವ್ 2025ರಲ್ಲಿ ಭಾರತದಲ್ಲಿ ಎಂಟು ಪತ್ರಕರ್ತರನ್ನು ಕೊಲ್ಲಲಾಗಿದೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...