Homeಅಂತರಾಷ್ಟ್ರೀಯಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

ಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

- Advertisement -
- Advertisement -

ಜಾಗತಿಕವಾಗಿ 2025ರಲ್ಲಿ ನೂರಾ ಇಪ್ಪತ್ತೆಂಟು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ (ಡಿ.31) ತಿಳಿಸಿದೆ.

ಪತ್ರಕರ್ತರ ಹತ್ಯೆಗಳಲ್ಲಿ ಅರ್ಧಕ್ಕಿಂತ ಹೆಚ್ಚು (74) ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿವೆ ಎಂದು ಬೆಲ್ಜಿಯಂ ಮೂಲದ ಒಕ್ಕೂಟ ತಿಳಿಸಿದೆ. ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್ ಆಕ್ರಮಣ ನಡೆಸಿದ ಸಮಯದಲ್ಲಿ ಗಾಝಾ ಒಂದರಲ್ಲೇ 44 ಪ್ರತಿಶತ (56) ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಒಕ್ಕೂಟ ಹೇಳಿದೆ.

ಆಫ್ರಿಕಾದಲ್ಲಿ 18 ಪತ್ರಕರ್ತರು, ಏಷ್ಯಾ-ಪೆಸಿಫಿಕ್‌ನಲ್ಲಿ 15, ಅಮೆರಿಕದಲ್ಲಿ 11 ಮತ್ತು ಯುರೋಪಿನಲ್ಲಿ 10 ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಈ ಪಟ್ಟಿಯಲ್ಲಿ ಒಂಬತ್ತು ಆಕಸ್ಮಿಕ ಸಾವುಗಳೂ ಸೇರಿವೆ.

ಭಾರತದಲ್ಲಿ, ನಾಲ್ಕು ಸಾವುಗಳನ್ನು ಒಕ್ಕೂಟ ದಾಖಲಿಸಿದೆ. ಜನವರಿ 1, 2025 ರಂದು ಬಸ್ತಾರ್ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಹತ್ಯೆ ಇದರಲ್ಲಿ ಒಳಗೊಂಡಿದೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ಮುಖೇಶ್ ಚಂದ್ರಕರ್ ಅವರನ್ನು ಕೊಲೆ ಮಾಡಲಾಗಿತ್ತು. ರಸ್ತೆ ಗುತ್ತಿಗೆದಾರರ ಆಸ್ತಿಯಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಅವರ ಶವ ಪತ್ತೆಯಾಗಿತ್ತು.

ಜಗತ್ತಿನಾದ್ಯಂತ 533 ಪತ್ರಕರ್ತರನ್ನು ತಮ್ಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜೈಲಿಗೆ ಹಾಕಲಾಗಿದೆ ಎಂದು ಒಕ್ಕೂಟ ತಿಳಿಸಿದೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಜೈಲು ಶಿಕ್ಷೆಗೆ ಒಳಗಾದ ಪತ್ರಕರ್ತರ ಸಂಖ್ಯೆ ಅತಿ ಹೆಚ್ಚಿದೆ. ಈ ಪ್ರದೇಶದಲ್ಲಿ ಜೈಲಿನಲ್ಲಿರುವ 277 ಪತ್ರಕರ್ತರಲ್ಲಿ 143 ಮಂದಿ ಚೀನಾದಲ್ಲಿ ಮತ್ತು 49 ಮಂದಿ ಮ್ಯಾನ್ಮಾರ್‌ನಲ್ಲಿದ್ದಾರೆ.

2024ರಲ್ಲಿ, ಒಕ್ಕೂಟ 122 ಪತ್ರಕರ್ತರ ಸಾವುಗಳನ್ನು ಮತ್ತು 516 ಜನರನ್ನು ಜೈಲಿಗೆ ಹಾಕಲಾಗಿದೆ ಎಂದು ಹೇಳಿತ್ತು.

ಒಕ್ಕೂಟ ಪತ್ರಕರ್ತರನ್ನು ರಕ್ಷಿಸುವಲ್ಲಿ ಅಧಿಕಾರಿಗಳ ಅಥವಾ ಆಡಳಿತದ ‘ನಿರಂತರ ವೈಫಲ್ಯ’ ವನ್ನು ಖಂಡಿಸಿದೆ. ಹಿಂಸಾಚಾರವನ್ನು ಕೊನೆಗೊಳಿಸಲು ತಕ್ಷಣದ ಮತ್ತು ನಿರ್ಣಾಯಕ ಕ್ರಮಕ್ಕೆ ಕರೆ ನೀಡಿದೆ.

ಒಂದು ವರ್ಷದಲ್ಲಿ 128 ಪತ್ರಕರ್ತರು ಕೊಲ್ಲಲ್ಪಡುತ್ತಿರುವುದು ‘ಕೇವಲ ಅಂಕಿಅಂಶವಲ್ಲ, ಇದು ಜಾಗತಿಕ ಬಿಕ್ಕಟ್ಟು’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆಂಥೋನಿ ಬೆಲ್ಲಂಗರ್ ಹೇಳಿದ್ದಾರೆ.

ಪತ್ರಕರ್ತರು ತಮ್ಮ ಕೆಲಸ ಮಾಡಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಳ್ಳುವ ಈ ಪ್ರವೃತ್ತಿ ಅತ್ಯಂತ ಕ್ರೂರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಗಳು ಮಾಧ್ಯಮ ಕಾರ್ಯಕರ್ತರನ್ನು ರಕ್ಷಿಸಲು, ಕೊಲೆಗಾರರನ್ನು ನ್ಯಾಯಾಂಗದ ಮುಂದೆ ತರಬೇಕು ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

1990ರಿಂದ ಮತ್ತು ವಾರ್ಷಿಕ ಪಟ್ಟಿ ಬಿಡುಗಡೆಯಾದ ನಂತರ, ಒಕ್ಕೂಟ ಜಾಗತಿಕವಾಗಿ 3,170ಕ್ಕೂ ಹೆಚ್ಚು ಪತ್ರಕರ್ತರ ಸಾವುಗಳನ್ನು ದಾಖಲಿಸಿದೆ, ಪ್ರತಿ ವರ್ಷ ಸರಾಸರಿ 91 ಕೊಲೆಗಳು ಸಂಭವಿಸುತ್ತಿವೆ.

ಡಿಸೆಂಬರ್ 10ರಂದು, ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ 2025 ರಲ್ಲಿ 126 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳಿತ್ತು. ಜಾಗತಿಕ ಮಾಧ್ಯಮ ಕಾವಲು ಸಂಸ್ಥೆಯು ಇಡೀ ವರ್ಷದ ಕೊನೆಯ 20 ದಿನಗಳನ್ನು ಒಳಗೊಂಡ ನವೀಕರಿಸಿದ ಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ.

ಡಿಸೆಂಬರ್ 23ರಂದು, ಫ್ರೀ ಸ್ಪೀಚ್ ಕಲೆಕ್ಟಿವ್ 2025ರಲ್ಲಿ ಭಾರತದಲ್ಲಿ ಎಂಟು ಪತ್ರಕರ್ತರನ್ನು ಕೊಲ್ಲಲಾಗಿದೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....