Homeಮುಖಪುಟವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ...

ವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ ಶಾಲೆಯ ಹುಡುಗಿ

ರಾಹುಲ್‌ ಗಾಂಧಿಯವರು "ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ" ಸಫಾಗೆ ಧನ್ಯವಾದ ಅರ್ಪಿಸಿದರು. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದಿದ್ದಾಳೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಗುರುವಾರ ತಮ್ಮ ಸಂಸದೀಯ ಕ್ಷೇತ್ರವಾದ ಕೇರಳದ ವಯನಾಡಿನ ಶಾಲೆಯೊಂದರಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಆಗ ಅವರು ನನ್ನ ಭಾಷಣವನ್ನುಇಂಗ್ಲಿಷ್‌ನಿಂದ ಮಲಯಾಳಂಗೆ ಅನುವಾದಿಸಲು ಯಾರಾದರೂ ಸಿದ್ಧರಿದ್ದೀರಾ? ಎಂದು ವಿದ್ಯಾರ್ಥಿಗಳಲ್ಲಿ ಪ್ರಶ್ನಿಸಿದರು. ಅವರ ಎಂದಿನ ಭಾಷಾಂತರಕಾರರಾಗಿದ್ದ ಪಕ್ಷದ ಮುಖಂಡ ಕೆ.ಸಿ.ವೇಣುಗೋಪಾಲ್ ನಗುತ್ತಾ ಕುಳಿತಿದ್ದರು.

ಎಲ್ಲರೂ ಆಶ್ಚರ್ಯಚಕಿತರಾಗಿ ನೋಡುತ್ತಿದ್ದರೆ, ಸರ್ಕಾರಿ ಶಾಲೆಯಲ್ಲಿ 12 ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸಫಾ ಸೆಬಿನ್ ಎದ್ದು ವೇದಿಕೆಯಲ್ಲಿದ್ದ ರಾಹುಲ್‌ ಗಾಂಧಿಯತ್ತ ಹೆಜ್ಜೆ ಹಾಕಿದಳು. ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಆಕೆಯನ್ನು ಸ್ವಾಗತಿಸಿದರು.

ಅವಳು ವೇದಿಕೆಯನ್ನು ತಲುಪಿ ರಾಹಲ್ ಗಾಂಧಿಯನ್ನು ಮುಖಾಮುಖಿಯಾಗಿ ಭೇಟಿಯಾದಾಗ, ಸಫಾಳ ಮೊದಲ ಪ್ರತಿಕ್ರಿಯೆ ಅವರನ್ನು ನಮಸ್ತೆಯಿಂದ ಸ್ವಾಗತಿಸುವುದು. ರಾಹುಲ್‌ ಗಾಂಧಿ ಬೆಚ್ಚಗಿನ ಹ್ಯಾಂಡ್‌ಶೇಕ್‌ ನೀಡಿ ಧನ್ಯವಾದ ತಿಳಿಸಿದರು. ಅವರು ವಿದ್ಯಾರ್ಥಿನಿಗೆ ಮೈಕ್ ಹಸ್ತಾಂತರಿಸಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಮುಕ್ತ ಮನಸ್ಸಿನಿಂದ ಚಿಂತಿಸುವುದು ವಿಜ್ಞಾನದ ಸಾರವಾಗಿದೆ. ಅದೇ ವಿಜ್ಞಾನವನ್ನು ಕಲಿಯುವ ಮೊದಲ ಹೆಜ್ಜೆಯಾಗಿದೆ. ನಿಮ್ಮ ಮನಸ್ಸು ಎಂದೂ ಮುಚ್ಚಬಾರದು. ಇತರರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಇತರರ ಅಭಿಪ್ರಾಯವನ್ನು ಗೌರವಿಸಬೇಕು. ಅವರ ಭಾಷೆ, ಧರ್ಮ, ಸಂಸ್ಕೃತಿಯನ್ನು ನಾವು ಗೌರವಿಸಬೇಕಾಗಿದೆ.

ವಿಡಿಯೋ ನೋಡಿ

“ನಮ್ಮ ದೇಶದಲ್ಲಿ ಈ ದಿನಗಳಲ್ಲಿ ನೀವು ಜನರನ್ನು ದ್ವೇಷಿಸಬಹುದು ಮತ್ತು ಅದೇ ಸಮಯದಲ್ಲಿ ವೈಜ್ಞಾನಿಕವಾಗಿ ಪ್ರಗತಿ ಹೊಂದಬಹುದು ಎಂಬ ಚರ್ಚೆ ಆರಂಭವಾಗಿದೆ. ಆದರೆ ಇದು ಸಂಪೂರ್ಣ ಅಸಂಬದ್ಧವಾಗಿದೆ” ಎಂದು ಅವರು ಹೇಳಿದರು. ಸಫಾ ಯಾವುದೇ ಗೊಂದಲವಿಲ್ಲದೇ ಸರಾಗವಾಗಿ ಮಲೆಯಾಳಂಗೆ ಅನುವಾದಿಸುತ್ತಿದ್ದರೆ ಅವಳ ಸಹಪಾಠಿಗಳು ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.

ಇನ್ನೊಬ್ಬರ ಅಭಿಪ್ರಾಯವನ್ನು ಮುಕ್ತವಾಗಿ ಸ್ಪೀಕರಿಸಿವುದೇ ವಿಜ್ಞಾನವನ್ನು ಕಲಿಯುವ ಅತಿ ಪ್ರಮುಖ ಅಂಶವಾಗಿದೆ. ಉತ್ತರಕ್ಕಿಂತ ಹೆಚ್ಚಾಗಿ ಪ್ರಶ್ನೆ ಕೇಳುವುದು ಅತಿ ಮುಖ್ಯವಾಗಿದೆ. ಹಾಗಾಗಿ ಎಲ್ಲಾ ಶಿಕ್ಷಕರು ಮಕ್ಕಳು ಹೆಚ್ಚು ಪ್ರಶ್ನೆ ಕೇಳು ಅವಕಾಶ ಮಾಡಿಕೊಡಿ. ಅದರಲ್ಲಿ ತಪ್ಪು ಪ್ರಶ್ನೆ, ಒಳ್ಳೆ ಪ್ರಶ್ನೆ ಎಂಬುದಿರುವುದಿಲ್ಲ ಎಂದರು.

ಎಲ್ಲಾ ಮಕ್ಕಳು, ಅದರಲ್ಲಿಯೂ ಚಿಕ್ಕಮಕ್ಕಳು ಎಲ್ಲಾ ವಿಷಯದ ಬಗ್ಗೆ ಕೂತೂಹಲವುಳ್ಳವರಾಗಿತ್ತಾರೆ. ಅವರಲ್ಲಿ ದ್ವೇಷ ಇರುವುದಿಲ್ಲ. ಇದೇ ರೀತಿ ಕಲಿಯಬೇಕು ಎಂದರು.

ದ್ವೇಷ, ಅಸೂಯೆ ಮನೋಭಾವನೆ ವಿಜ್ಞಾನಕ್ಕೆ ವಿರುದ್ಧವಾಗಿದೆ. ನೀವು ಜೀವನದಲ್ಲಿ ಏನಾದರೂ ಆಗಿ. ಆದರೆ ದ್ವೇಷ, ಅಸೂಯೆಯನ್ನು ನಾವು ಕೊಲ್ಲದಿದ್ದರೆ ಮುಂದೆ ಬರಲು ಸಾಧ್ಯವಿಲ್ಲ. ಕೇರಳದ ಶಾಲೆಗಳು ದೇಶದಲ್ಲಿಯೇ ಉತ್ತಮವಾಗಿದ್ದರೂ ಇನ್ನು ಸಾಕಾಗುವುದಿಲ್ಲ. ಕಳೆದ ತಿಂಗಳು ಒಬ್ಬ ವಿದ್ಯಾರ್ಥಿ ಹಾವು ಕಚ್ಚಿ ಮರಣ ಹೊಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಈ ರೀತಿಯಾಗಿ ಆಗದಂತೆ ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಇದನ್ನು ಪಾರ್ಲಿಮೆಂಟ್‌ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಭಾಷಣದ ನಂತರ ರಾಹುಲ್‌ ಗಾಂಧಿಯವರು “ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ” ಸಫಾಗೆ ಧನ್ಯವಾದ ಅರ್ಪಿಸಿದರು. ಕೇರಳದ ಸ್ಪೂರ್ತಿ ಕ್ರಿಯೆಯಲ್ಲಿದೆ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದು ಹೇಳಿದ್ದಾಳೆ.

“ಇದು ನನ್ನ ಜೀವನದ ಅತ್ಯುತ್ತಮ ಕ್ಷಣ. ನಾನೇ ಖುದ್ದು ಅನುವಾದ ಮಾಡಬೇಕು ಎಂಬುದರ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದೆ. ಯಾವುದೇ ಕಾರಣಕ್ಕೂ ಗೊಂದಲ ಮಾಡಿಕೊಳ್ಳಬಾರದೆಂದು ನಿರ್ಧರಿಸಿದ್ದೆ. ನಾನು ವೇದಿಕೆಗೆ ಹೋಗುವಾಗ ನಡುಗುತ್ತಿದ್ದೆ. ಆದರೆ ರಾಹುಲ್ ಗಾಂಧಿಯವರು ಶಾಂತಗೊಳಿಸಿದರು. ಅವರು ತುಂಬಾ ಸೌಮ್ಯ ಸ್ವಭಾವದರು” ಎಂದು ಆಕೆ ಎನ್‌ಡಿಟಿವಿಗೆ ತಿಳಿಸಿದ್ದಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...