Homeಮುಖಪುಟವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ...

ವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ ಶಾಲೆಯ ಹುಡುಗಿ

ರಾಹುಲ್‌ ಗಾಂಧಿಯವರು "ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ" ಸಫಾಗೆ ಧನ್ಯವಾದ ಅರ್ಪಿಸಿದರು. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದಿದ್ದಾಳೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಗುರುವಾರ ತಮ್ಮ ಸಂಸದೀಯ ಕ್ಷೇತ್ರವಾದ ಕೇರಳದ ವಯನಾಡಿನ ಶಾಲೆಯೊಂದರಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಆಗ ಅವರು ನನ್ನ ಭಾಷಣವನ್ನುಇಂಗ್ಲಿಷ್‌ನಿಂದ ಮಲಯಾಳಂಗೆ ಅನುವಾದಿಸಲು ಯಾರಾದರೂ ಸಿದ್ಧರಿದ್ದೀರಾ? ಎಂದು ವಿದ್ಯಾರ್ಥಿಗಳಲ್ಲಿ ಪ್ರಶ್ನಿಸಿದರು. ಅವರ ಎಂದಿನ ಭಾಷಾಂತರಕಾರರಾಗಿದ್ದ ಪಕ್ಷದ ಮುಖಂಡ ಕೆ.ಸಿ.ವೇಣುಗೋಪಾಲ್ ನಗುತ್ತಾ ಕುಳಿತಿದ್ದರು.

ಎಲ್ಲರೂ ಆಶ್ಚರ್ಯಚಕಿತರಾಗಿ ನೋಡುತ್ತಿದ್ದರೆ, ಸರ್ಕಾರಿ ಶಾಲೆಯಲ್ಲಿ 12 ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸಫಾ ಸೆಬಿನ್ ಎದ್ದು ವೇದಿಕೆಯಲ್ಲಿದ್ದ ರಾಹುಲ್‌ ಗಾಂಧಿಯತ್ತ ಹೆಜ್ಜೆ ಹಾಕಿದಳು. ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಆಕೆಯನ್ನು ಸ್ವಾಗತಿಸಿದರು.

ಅವಳು ವೇದಿಕೆಯನ್ನು ತಲುಪಿ ರಾಹಲ್ ಗಾಂಧಿಯನ್ನು ಮುಖಾಮುಖಿಯಾಗಿ ಭೇಟಿಯಾದಾಗ, ಸಫಾಳ ಮೊದಲ ಪ್ರತಿಕ್ರಿಯೆ ಅವರನ್ನು ನಮಸ್ತೆಯಿಂದ ಸ್ವಾಗತಿಸುವುದು. ರಾಹುಲ್‌ ಗಾಂಧಿ ಬೆಚ್ಚಗಿನ ಹ್ಯಾಂಡ್‌ಶೇಕ್‌ ನೀಡಿ ಧನ್ಯವಾದ ತಿಳಿಸಿದರು. ಅವರು ವಿದ್ಯಾರ್ಥಿನಿಗೆ ಮೈಕ್ ಹಸ್ತಾಂತರಿಸಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಮುಕ್ತ ಮನಸ್ಸಿನಿಂದ ಚಿಂತಿಸುವುದು ವಿಜ್ಞಾನದ ಸಾರವಾಗಿದೆ. ಅದೇ ವಿಜ್ಞಾನವನ್ನು ಕಲಿಯುವ ಮೊದಲ ಹೆಜ್ಜೆಯಾಗಿದೆ. ನಿಮ್ಮ ಮನಸ್ಸು ಎಂದೂ ಮುಚ್ಚಬಾರದು. ಇತರರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಇತರರ ಅಭಿಪ್ರಾಯವನ್ನು ಗೌರವಿಸಬೇಕು. ಅವರ ಭಾಷೆ, ಧರ್ಮ, ಸಂಸ್ಕೃತಿಯನ್ನು ನಾವು ಗೌರವಿಸಬೇಕಾಗಿದೆ.

ವಿಡಿಯೋ ನೋಡಿ

“ನಮ್ಮ ದೇಶದಲ್ಲಿ ಈ ದಿನಗಳಲ್ಲಿ ನೀವು ಜನರನ್ನು ದ್ವೇಷಿಸಬಹುದು ಮತ್ತು ಅದೇ ಸಮಯದಲ್ಲಿ ವೈಜ್ಞಾನಿಕವಾಗಿ ಪ್ರಗತಿ ಹೊಂದಬಹುದು ಎಂಬ ಚರ್ಚೆ ಆರಂಭವಾಗಿದೆ. ಆದರೆ ಇದು ಸಂಪೂರ್ಣ ಅಸಂಬದ್ಧವಾಗಿದೆ” ಎಂದು ಅವರು ಹೇಳಿದರು. ಸಫಾ ಯಾವುದೇ ಗೊಂದಲವಿಲ್ಲದೇ ಸರಾಗವಾಗಿ ಮಲೆಯಾಳಂಗೆ ಅನುವಾದಿಸುತ್ತಿದ್ದರೆ ಅವಳ ಸಹಪಾಠಿಗಳು ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.

ಇನ್ನೊಬ್ಬರ ಅಭಿಪ್ರಾಯವನ್ನು ಮುಕ್ತವಾಗಿ ಸ್ಪೀಕರಿಸಿವುದೇ ವಿಜ್ಞಾನವನ್ನು ಕಲಿಯುವ ಅತಿ ಪ್ರಮುಖ ಅಂಶವಾಗಿದೆ. ಉತ್ತರಕ್ಕಿಂತ ಹೆಚ್ಚಾಗಿ ಪ್ರಶ್ನೆ ಕೇಳುವುದು ಅತಿ ಮುಖ್ಯವಾಗಿದೆ. ಹಾಗಾಗಿ ಎಲ್ಲಾ ಶಿಕ್ಷಕರು ಮಕ್ಕಳು ಹೆಚ್ಚು ಪ್ರಶ್ನೆ ಕೇಳು ಅವಕಾಶ ಮಾಡಿಕೊಡಿ. ಅದರಲ್ಲಿ ತಪ್ಪು ಪ್ರಶ್ನೆ, ಒಳ್ಳೆ ಪ್ರಶ್ನೆ ಎಂಬುದಿರುವುದಿಲ್ಲ ಎಂದರು.

ಎಲ್ಲಾ ಮಕ್ಕಳು, ಅದರಲ್ಲಿಯೂ ಚಿಕ್ಕಮಕ್ಕಳು ಎಲ್ಲಾ ವಿಷಯದ ಬಗ್ಗೆ ಕೂತೂಹಲವುಳ್ಳವರಾಗಿತ್ತಾರೆ. ಅವರಲ್ಲಿ ದ್ವೇಷ ಇರುವುದಿಲ್ಲ. ಇದೇ ರೀತಿ ಕಲಿಯಬೇಕು ಎಂದರು.

ದ್ವೇಷ, ಅಸೂಯೆ ಮನೋಭಾವನೆ ವಿಜ್ಞಾನಕ್ಕೆ ವಿರುದ್ಧವಾಗಿದೆ. ನೀವು ಜೀವನದಲ್ಲಿ ಏನಾದರೂ ಆಗಿ. ಆದರೆ ದ್ವೇಷ, ಅಸೂಯೆಯನ್ನು ನಾವು ಕೊಲ್ಲದಿದ್ದರೆ ಮುಂದೆ ಬರಲು ಸಾಧ್ಯವಿಲ್ಲ. ಕೇರಳದ ಶಾಲೆಗಳು ದೇಶದಲ್ಲಿಯೇ ಉತ್ತಮವಾಗಿದ್ದರೂ ಇನ್ನು ಸಾಕಾಗುವುದಿಲ್ಲ. ಕಳೆದ ತಿಂಗಳು ಒಬ್ಬ ವಿದ್ಯಾರ್ಥಿ ಹಾವು ಕಚ್ಚಿ ಮರಣ ಹೊಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಈ ರೀತಿಯಾಗಿ ಆಗದಂತೆ ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಇದನ್ನು ಪಾರ್ಲಿಮೆಂಟ್‌ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಭಾಷಣದ ನಂತರ ರಾಹುಲ್‌ ಗಾಂಧಿಯವರು “ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ” ಸಫಾಗೆ ಧನ್ಯವಾದ ಅರ್ಪಿಸಿದರು. ಕೇರಳದ ಸ್ಪೂರ್ತಿ ಕ್ರಿಯೆಯಲ್ಲಿದೆ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದು ಹೇಳಿದ್ದಾಳೆ.

“ಇದು ನನ್ನ ಜೀವನದ ಅತ್ಯುತ್ತಮ ಕ್ಷಣ. ನಾನೇ ಖುದ್ದು ಅನುವಾದ ಮಾಡಬೇಕು ಎಂಬುದರ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದೆ. ಯಾವುದೇ ಕಾರಣಕ್ಕೂ ಗೊಂದಲ ಮಾಡಿಕೊಳ್ಳಬಾರದೆಂದು ನಿರ್ಧರಿಸಿದ್ದೆ. ನಾನು ವೇದಿಕೆಗೆ ಹೋಗುವಾಗ ನಡುಗುತ್ತಿದ್ದೆ. ಆದರೆ ರಾಹುಲ್ ಗಾಂಧಿಯವರು ಶಾಂತಗೊಳಿಸಿದರು. ಅವರು ತುಂಬಾ ಸೌಮ್ಯ ಸ್ವಭಾವದರು” ಎಂದು ಆಕೆ ಎನ್‌ಡಿಟಿವಿಗೆ ತಿಳಿಸಿದ್ದಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...