Homeಮುಖಪುಟವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ...

ವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ ಶಾಲೆಯ ಹುಡುಗಿ

ರಾಹುಲ್‌ ಗಾಂಧಿಯವರು "ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ" ಸಫಾಗೆ ಧನ್ಯವಾದ ಅರ್ಪಿಸಿದರು. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದಿದ್ದಾಳೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಗುರುವಾರ ತಮ್ಮ ಸಂಸದೀಯ ಕ್ಷೇತ್ರವಾದ ಕೇರಳದ ವಯನಾಡಿನ ಶಾಲೆಯೊಂದರಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಆಗ ಅವರು ನನ್ನ ಭಾಷಣವನ್ನುಇಂಗ್ಲಿಷ್‌ನಿಂದ ಮಲಯಾಳಂಗೆ ಅನುವಾದಿಸಲು ಯಾರಾದರೂ ಸಿದ್ಧರಿದ್ದೀರಾ? ಎಂದು ವಿದ್ಯಾರ್ಥಿಗಳಲ್ಲಿ ಪ್ರಶ್ನಿಸಿದರು. ಅವರ ಎಂದಿನ ಭಾಷಾಂತರಕಾರರಾಗಿದ್ದ ಪಕ್ಷದ ಮುಖಂಡ ಕೆ.ಸಿ.ವೇಣುಗೋಪಾಲ್ ನಗುತ್ತಾ ಕುಳಿತಿದ್ದರು.

ಎಲ್ಲರೂ ಆಶ್ಚರ್ಯಚಕಿತರಾಗಿ ನೋಡುತ್ತಿದ್ದರೆ, ಸರ್ಕಾರಿ ಶಾಲೆಯಲ್ಲಿ 12 ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸಫಾ ಸೆಬಿನ್ ಎದ್ದು ವೇದಿಕೆಯಲ್ಲಿದ್ದ ರಾಹುಲ್‌ ಗಾಂಧಿಯತ್ತ ಹೆಜ್ಜೆ ಹಾಕಿದಳು. ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಆಕೆಯನ್ನು ಸ್ವಾಗತಿಸಿದರು.

ಅವಳು ವೇದಿಕೆಯನ್ನು ತಲುಪಿ ರಾಹಲ್ ಗಾಂಧಿಯನ್ನು ಮುಖಾಮುಖಿಯಾಗಿ ಭೇಟಿಯಾದಾಗ, ಸಫಾಳ ಮೊದಲ ಪ್ರತಿಕ್ರಿಯೆ ಅವರನ್ನು ನಮಸ್ತೆಯಿಂದ ಸ್ವಾಗತಿಸುವುದು. ರಾಹುಲ್‌ ಗಾಂಧಿ ಬೆಚ್ಚಗಿನ ಹ್ಯಾಂಡ್‌ಶೇಕ್‌ ನೀಡಿ ಧನ್ಯವಾದ ತಿಳಿಸಿದರು. ಅವರು ವಿದ್ಯಾರ್ಥಿನಿಗೆ ಮೈಕ್ ಹಸ್ತಾಂತರಿಸಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಮುಕ್ತ ಮನಸ್ಸಿನಿಂದ ಚಿಂತಿಸುವುದು ವಿಜ್ಞಾನದ ಸಾರವಾಗಿದೆ. ಅದೇ ವಿಜ್ಞಾನವನ್ನು ಕಲಿಯುವ ಮೊದಲ ಹೆಜ್ಜೆಯಾಗಿದೆ. ನಿಮ್ಮ ಮನಸ್ಸು ಎಂದೂ ಮುಚ್ಚಬಾರದು. ಇತರರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಇತರರ ಅಭಿಪ್ರಾಯವನ್ನು ಗೌರವಿಸಬೇಕು. ಅವರ ಭಾಷೆ, ಧರ್ಮ, ಸಂಸ್ಕೃತಿಯನ್ನು ನಾವು ಗೌರವಿಸಬೇಕಾಗಿದೆ.

ವಿಡಿಯೋ ನೋಡಿ

“ನಮ್ಮ ದೇಶದಲ್ಲಿ ಈ ದಿನಗಳಲ್ಲಿ ನೀವು ಜನರನ್ನು ದ್ವೇಷಿಸಬಹುದು ಮತ್ತು ಅದೇ ಸಮಯದಲ್ಲಿ ವೈಜ್ಞಾನಿಕವಾಗಿ ಪ್ರಗತಿ ಹೊಂದಬಹುದು ಎಂಬ ಚರ್ಚೆ ಆರಂಭವಾಗಿದೆ. ಆದರೆ ಇದು ಸಂಪೂರ್ಣ ಅಸಂಬದ್ಧವಾಗಿದೆ” ಎಂದು ಅವರು ಹೇಳಿದರು. ಸಫಾ ಯಾವುದೇ ಗೊಂದಲವಿಲ್ಲದೇ ಸರಾಗವಾಗಿ ಮಲೆಯಾಳಂಗೆ ಅನುವಾದಿಸುತ್ತಿದ್ದರೆ ಅವಳ ಸಹಪಾಠಿಗಳು ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.

ಇನ್ನೊಬ್ಬರ ಅಭಿಪ್ರಾಯವನ್ನು ಮುಕ್ತವಾಗಿ ಸ್ಪೀಕರಿಸಿವುದೇ ವಿಜ್ಞಾನವನ್ನು ಕಲಿಯುವ ಅತಿ ಪ್ರಮುಖ ಅಂಶವಾಗಿದೆ. ಉತ್ತರಕ್ಕಿಂತ ಹೆಚ್ಚಾಗಿ ಪ್ರಶ್ನೆ ಕೇಳುವುದು ಅತಿ ಮುಖ್ಯವಾಗಿದೆ. ಹಾಗಾಗಿ ಎಲ್ಲಾ ಶಿಕ್ಷಕರು ಮಕ್ಕಳು ಹೆಚ್ಚು ಪ್ರಶ್ನೆ ಕೇಳು ಅವಕಾಶ ಮಾಡಿಕೊಡಿ. ಅದರಲ್ಲಿ ತಪ್ಪು ಪ್ರಶ್ನೆ, ಒಳ್ಳೆ ಪ್ರಶ್ನೆ ಎಂಬುದಿರುವುದಿಲ್ಲ ಎಂದರು.

ಎಲ್ಲಾ ಮಕ್ಕಳು, ಅದರಲ್ಲಿಯೂ ಚಿಕ್ಕಮಕ್ಕಳು ಎಲ್ಲಾ ವಿಷಯದ ಬಗ್ಗೆ ಕೂತೂಹಲವುಳ್ಳವರಾಗಿತ್ತಾರೆ. ಅವರಲ್ಲಿ ದ್ವೇಷ ಇರುವುದಿಲ್ಲ. ಇದೇ ರೀತಿ ಕಲಿಯಬೇಕು ಎಂದರು.

ದ್ವೇಷ, ಅಸೂಯೆ ಮನೋಭಾವನೆ ವಿಜ್ಞಾನಕ್ಕೆ ವಿರುದ್ಧವಾಗಿದೆ. ನೀವು ಜೀವನದಲ್ಲಿ ಏನಾದರೂ ಆಗಿ. ಆದರೆ ದ್ವೇಷ, ಅಸೂಯೆಯನ್ನು ನಾವು ಕೊಲ್ಲದಿದ್ದರೆ ಮುಂದೆ ಬರಲು ಸಾಧ್ಯವಿಲ್ಲ. ಕೇರಳದ ಶಾಲೆಗಳು ದೇಶದಲ್ಲಿಯೇ ಉತ್ತಮವಾಗಿದ್ದರೂ ಇನ್ನು ಸಾಕಾಗುವುದಿಲ್ಲ. ಕಳೆದ ತಿಂಗಳು ಒಬ್ಬ ವಿದ್ಯಾರ್ಥಿ ಹಾವು ಕಚ್ಚಿ ಮರಣ ಹೊಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಈ ರೀತಿಯಾಗಿ ಆಗದಂತೆ ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಇದನ್ನು ಪಾರ್ಲಿಮೆಂಟ್‌ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಭಾಷಣದ ನಂತರ ರಾಹುಲ್‌ ಗಾಂಧಿಯವರು “ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ” ಸಫಾಗೆ ಧನ್ಯವಾದ ಅರ್ಪಿಸಿದರು. ಕೇರಳದ ಸ್ಪೂರ್ತಿ ಕ್ರಿಯೆಯಲ್ಲಿದೆ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದು ಹೇಳಿದ್ದಾಳೆ.

“ಇದು ನನ್ನ ಜೀವನದ ಅತ್ಯುತ್ತಮ ಕ್ಷಣ. ನಾನೇ ಖುದ್ದು ಅನುವಾದ ಮಾಡಬೇಕು ಎಂಬುದರ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದೆ. ಯಾವುದೇ ಕಾರಣಕ್ಕೂ ಗೊಂದಲ ಮಾಡಿಕೊಳ್ಳಬಾರದೆಂದು ನಿರ್ಧರಿಸಿದ್ದೆ. ನಾನು ವೇದಿಕೆಗೆ ಹೋಗುವಾಗ ನಡುಗುತ್ತಿದ್ದೆ. ಆದರೆ ರಾಹುಲ್ ಗಾಂಧಿಯವರು ಶಾಂತಗೊಳಿಸಿದರು. ಅವರು ತುಂಬಾ ಸೌಮ್ಯ ಸ್ವಭಾವದರು” ಎಂದು ಆಕೆ ಎನ್‌ಡಿಟಿವಿಗೆ ತಿಳಿಸಿದ್ದಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...