Homeಮುಖಪುಟವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ...

ವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ ಶಾಲೆಯ ಹುಡುಗಿ

ರಾಹುಲ್‌ ಗಾಂಧಿಯವರು "ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ" ಸಫಾಗೆ ಧನ್ಯವಾದ ಅರ್ಪಿಸಿದರು. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದಿದ್ದಾಳೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಗುರುವಾರ ತಮ್ಮ ಸಂಸದೀಯ ಕ್ಷೇತ್ರವಾದ ಕೇರಳದ ವಯನಾಡಿನ ಶಾಲೆಯೊಂದರಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಆಗ ಅವರು ನನ್ನ ಭಾಷಣವನ್ನುಇಂಗ್ಲಿಷ್‌ನಿಂದ ಮಲಯಾಳಂಗೆ ಅನುವಾದಿಸಲು ಯಾರಾದರೂ ಸಿದ್ಧರಿದ್ದೀರಾ? ಎಂದು ವಿದ್ಯಾರ್ಥಿಗಳಲ್ಲಿ ಪ್ರಶ್ನಿಸಿದರು. ಅವರ ಎಂದಿನ ಭಾಷಾಂತರಕಾರರಾಗಿದ್ದ ಪಕ್ಷದ ಮುಖಂಡ ಕೆ.ಸಿ.ವೇಣುಗೋಪಾಲ್ ನಗುತ್ತಾ ಕುಳಿತಿದ್ದರು.

ಎಲ್ಲರೂ ಆಶ್ಚರ್ಯಚಕಿತರಾಗಿ ನೋಡುತ್ತಿದ್ದರೆ, ಸರ್ಕಾರಿ ಶಾಲೆಯಲ್ಲಿ 12 ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸಫಾ ಸೆಬಿನ್ ಎದ್ದು ವೇದಿಕೆಯಲ್ಲಿದ್ದ ರಾಹುಲ್‌ ಗಾಂಧಿಯತ್ತ ಹೆಜ್ಜೆ ಹಾಕಿದಳು. ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಆಕೆಯನ್ನು ಸ್ವಾಗತಿಸಿದರು.

ಅವಳು ವೇದಿಕೆಯನ್ನು ತಲುಪಿ ರಾಹಲ್ ಗಾಂಧಿಯನ್ನು ಮುಖಾಮುಖಿಯಾಗಿ ಭೇಟಿಯಾದಾಗ, ಸಫಾಳ ಮೊದಲ ಪ್ರತಿಕ್ರಿಯೆ ಅವರನ್ನು ನಮಸ್ತೆಯಿಂದ ಸ್ವಾಗತಿಸುವುದು. ರಾಹುಲ್‌ ಗಾಂಧಿ ಬೆಚ್ಚಗಿನ ಹ್ಯಾಂಡ್‌ಶೇಕ್‌ ನೀಡಿ ಧನ್ಯವಾದ ತಿಳಿಸಿದರು. ಅವರು ವಿದ್ಯಾರ್ಥಿನಿಗೆ ಮೈಕ್ ಹಸ್ತಾಂತರಿಸಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಮುಕ್ತ ಮನಸ್ಸಿನಿಂದ ಚಿಂತಿಸುವುದು ವಿಜ್ಞಾನದ ಸಾರವಾಗಿದೆ. ಅದೇ ವಿಜ್ಞಾನವನ್ನು ಕಲಿಯುವ ಮೊದಲ ಹೆಜ್ಜೆಯಾಗಿದೆ. ನಿಮ್ಮ ಮನಸ್ಸು ಎಂದೂ ಮುಚ್ಚಬಾರದು. ಇತರರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಇತರರ ಅಭಿಪ್ರಾಯವನ್ನು ಗೌರವಿಸಬೇಕು. ಅವರ ಭಾಷೆ, ಧರ್ಮ, ಸಂಸ್ಕೃತಿಯನ್ನು ನಾವು ಗೌರವಿಸಬೇಕಾಗಿದೆ.

ವಿಡಿಯೋ ನೋಡಿ

“ನಮ್ಮ ದೇಶದಲ್ಲಿ ಈ ದಿನಗಳಲ್ಲಿ ನೀವು ಜನರನ್ನು ದ್ವೇಷಿಸಬಹುದು ಮತ್ತು ಅದೇ ಸಮಯದಲ್ಲಿ ವೈಜ್ಞಾನಿಕವಾಗಿ ಪ್ರಗತಿ ಹೊಂದಬಹುದು ಎಂಬ ಚರ್ಚೆ ಆರಂಭವಾಗಿದೆ. ಆದರೆ ಇದು ಸಂಪೂರ್ಣ ಅಸಂಬದ್ಧವಾಗಿದೆ” ಎಂದು ಅವರು ಹೇಳಿದರು. ಸಫಾ ಯಾವುದೇ ಗೊಂದಲವಿಲ್ಲದೇ ಸರಾಗವಾಗಿ ಮಲೆಯಾಳಂಗೆ ಅನುವಾದಿಸುತ್ತಿದ್ದರೆ ಅವಳ ಸಹಪಾಠಿಗಳು ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.

ಇನ್ನೊಬ್ಬರ ಅಭಿಪ್ರಾಯವನ್ನು ಮುಕ್ತವಾಗಿ ಸ್ಪೀಕರಿಸಿವುದೇ ವಿಜ್ಞಾನವನ್ನು ಕಲಿಯುವ ಅತಿ ಪ್ರಮುಖ ಅಂಶವಾಗಿದೆ. ಉತ್ತರಕ್ಕಿಂತ ಹೆಚ್ಚಾಗಿ ಪ್ರಶ್ನೆ ಕೇಳುವುದು ಅತಿ ಮುಖ್ಯವಾಗಿದೆ. ಹಾಗಾಗಿ ಎಲ್ಲಾ ಶಿಕ್ಷಕರು ಮಕ್ಕಳು ಹೆಚ್ಚು ಪ್ರಶ್ನೆ ಕೇಳು ಅವಕಾಶ ಮಾಡಿಕೊಡಿ. ಅದರಲ್ಲಿ ತಪ್ಪು ಪ್ರಶ್ನೆ, ಒಳ್ಳೆ ಪ್ರಶ್ನೆ ಎಂಬುದಿರುವುದಿಲ್ಲ ಎಂದರು.

ಎಲ್ಲಾ ಮಕ್ಕಳು, ಅದರಲ್ಲಿಯೂ ಚಿಕ್ಕಮಕ್ಕಳು ಎಲ್ಲಾ ವಿಷಯದ ಬಗ್ಗೆ ಕೂತೂಹಲವುಳ್ಳವರಾಗಿತ್ತಾರೆ. ಅವರಲ್ಲಿ ದ್ವೇಷ ಇರುವುದಿಲ್ಲ. ಇದೇ ರೀತಿ ಕಲಿಯಬೇಕು ಎಂದರು.

ದ್ವೇಷ, ಅಸೂಯೆ ಮನೋಭಾವನೆ ವಿಜ್ಞಾನಕ್ಕೆ ವಿರುದ್ಧವಾಗಿದೆ. ನೀವು ಜೀವನದಲ್ಲಿ ಏನಾದರೂ ಆಗಿ. ಆದರೆ ದ್ವೇಷ, ಅಸೂಯೆಯನ್ನು ನಾವು ಕೊಲ್ಲದಿದ್ದರೆ ಮುಂದೆ ಬರಲು ಸಾಧ್ಯವಿಲ್ಲ. ಕೇರಳದ ಶಾಲೆಗಳು ದೇಶದಲ್ಲಿಯೇ ಉತ್ತಮವಾಗಿದ್ದರೂ ಇನ್ನು ಸಾಕಾಗುವುದಿಲ್ಲ. ಕಳೆದ ತಿಂಗಳು ಒಬ್ಬ ವಿದ್ಯಾರ್ಥಿ ಹಾವು ಕಚ್ಚಿ ಮರಣ ಹೊಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಈ ರೀತಿಯಾಗಿ ಆಗದಂತೆ ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಇದನ್ನು ಪಾರ್ಲಿಮೆಂಟ್‌ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಭಾಷಣದ ನಂತರ ರಾಹುಲ್‌ ಗಾಂಧಿಯವರು “ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ” ಸಫಾಗೆ ಧನ್ಯವಾದ ಅರ್ಪಿಸಿದರು. ಕೇರಳದ ಸ್ಪೂರ್ತಿ ಕ್ರಿಯೆಯಲ್ಲಿದೆ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದು ಹೇಳಿದ್ದಾಳೆ.

“ಇದು ನನ್ನ ಜೀವನದ ಅತ್ಯುತ್ತಮ ಕ್ಷಣ. ನಾನೇ ಖುದ್ದು ಅನುವಾದ ಮಾಡಬೇಕು ಎಂಬುದರ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದೆ. ಯಾವುದೇ ಕಾರಣಕ್ಕೂ ಗೊಂದಲ ಮಾಡಿಕೊಳ್ಳಬಾರದೆಂದು ನಿರ್ಧರಿಸಿದ್ದೆ. ನಾನು ವೇದಿಕೆಗೆ ಹೋಗುವಾಗ ನಡುಗುತ್ತಿದ್ದೆ. ಆದರೆ ರಾಹುಲ್ ಗಾಂಧಿಯವರು ಶಾಂತಗೊಳಿಸಿದರು. ಅವರು ತುಂಬಾ ಸೌಮ್ಯ ಸ್ವಭಾವದರು” ಎಂದು ಆಕೆ ಎನ್‌ಡಿಟಿವಿಗೆ ತಿಳಿಸಿದ್ದಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...