Homeಮುಖಪುಟವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ...

ವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ ಶಾಲೆಯ ಹುಡುಗಿ

ರಾಹುಲ್‌ ಗಾಂಧಿಯವರು "ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ" ಸಫಾಗೆ ಧನ್ಯವಾದ ಅರ್ಪಿಸಿದರು. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದಿದ್ದಾಳೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಗುರುವಾರ ತಮ್ಮ ಸಂಸದೀಯ ಕ್ಷೇತ್ರವಾದ ಕೇರಳದ ವಯನಾಡಿನ ಶಾಲೆಯೊಂದರಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಆಗ ಅವರು ನನ್ನ ಭಾಷಣವನ್ನುಇಂಗ್ಲಿಷ್‌ನಿಂದ ಮಲಯಾಳಂಗೆ ಅನುವಾದಿಸಲು ಯಾರಾದರೂ ಸಿದ್ಧರಿದ್ದೀರಾ? ಎಂದು ವಿದ್ಯಾರ್ಥಿಗಳಲ್ಲಿ ಪ್ರಶ್ನಿಸಿದರು. ಅವರ ಎಂದಿನ ಭಾಷಾಂತರಕಾರರಾಗಿದ್ದ ಪಕ್ಷದ ಮುಖಂಡ ಕೆ.ಸಿ.ವೇಣುಗೋಪಾಲ್ ನಗುತ್ತಾ ಕುಳಿತಿದ್ದರು.

ಎಲ್ಲರೂ ಆಶ್ಚರ್ಯಚಕಿತರಾಗಿ ನೋಡುತ್ತಿದ್ದರೆ, ಸರ್ಕಾರಿ ಶಾಲೆಯಲ್ಲಿ 12 ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸಫಾ ಸೆಬಿನ್ ಎದ್ದು ವೇದಿಕೆಯಲ್ಲಿದ್ದ ರಾಹುಲ್‌ ಗಾಂಧಿಯತ್ತ ಹೆಜ್ಜೆ ಹಾಕಿದಳು. ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಆಕೆಯನ್ನು ಸ್ವಾಗತಿಸಿದರು.

ಅವಳು ವೇದಿಕೆಯನ್ನು ತಲುಪಿ ರಾಹಲ್ ಗಾಂಧಿಯನ್ನು ಮುಖಾಮುಖಿಯಾಗಿ ಭೇಟಿಯಾದಾಗ, ಸಫಾಳ ಮೊದಲ ಪ್ರತಿಕ್ರಿಯೆ ಅವರನ್ನು ನಮಸ್ತೆಯಿಂದ ಸ್ವಾಗತಿಸುವುದು. ರಾಹುಲ್‌ ಗಾಂಧಿ ಬೆಚ್ಚಗಿನ ಹ್ಯಾಂಡ್‌ಶೇಕ್‌ ನೀಡಿ ಧನ್ಯವಾದ ತಿಳಿಸಿದರು. ಅವರು ವಿದ್ಯಾರ್ಥಿನಿಗೆ ಮೈಕ್ ಹಸ್ತಾಂತರಿಸಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಮುಕ್ತ ಮನಸ್ಸಿನಿಂದ ಚಿಂತಿಸುವುದು ವಿಜ್ಞಾನದ ಸಾರವಾಗಿದೆ. ಅದೇ ವಿಜ್ಞಾನವನ್ನು ಕಲಿಯುವ ಮೊದಲ ಹೆಜ್ಜೆಯಾಗಿದೆ. ನಿಮ್ಮ ಮನಸ್ಸು ಎಂದೂ ಮುಚ್ಚಬಾರದು. ಇತರರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಇತರರ ಅಭಿಪ್ರಾಯವನ್ನು ಗೌರವಿಸಬೇಕು. ಅವರ ಭಾಷೆ, ಧರ್ಮ, ಸಂಸ್ಕೃತಿಯನ್ನು ನಾವು ಗೌರವಿಸಬೇಕಾಗಿದೆ.

ವಿಡಿಯೋ ನೋಡಿ

“ನಮ್ಮ ದೇಶದಲ್ಲಿ ಈ ದಿನಗಳಲ್ಲಿ ನೀವು ಜನರನ್ನು ದ್ವೇಷಿಸಬಹುದು ಮತ್ತು ಅದೇ ಸಮಯದಲ್ಲಿ ವೈಜ್ಞಾನಿಕವಾಗಿ ಪ್ರಗತಿ ಹೊಂದಬಹುದು ಎಂಬ ಚರ್ಚೆ ಆರಂಭವಾಗಿದೆ. ಆದರೆ ಇದು ಸಂಪೂರ್ಣ ಅಸಂಬದ್ಧವಾಗಿದೆ” ಎಂದು ಅವರು ಹೇಳಿದರು. ಸಫಾ ಯಾವುದೇ ಗೊಂದಲವಿಲ್ಲದೇ ಸರಾಗವಾಗಿ ಮಲೆಯಾಳಂಗೆ ಅನುವಾದಿಸುತ್ತಿದ್ದರೆ ಅವಳ ಸಹಪಾಠಿಗಳು ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.

ಇನ್ನೊಬ್ಬರ ಅಭಿಪ್ರಾಯವನ್ನು ಮುಕ್ತವಾಗಿ ಸ್ಪೀಕರಿಸಿವುದೇ ವಿಜ್ಞಾನವನ್ನು ಕಲಿಯುವ ಅತಿ ಪ್ರಮುಖ ಅಂಶವಾಗಿದೆ. ಉತ್ತರಕ್ಕಿಂತ ಹೆಚ್ಚಾಗಿ ಪ್ರಶ್ನೆ ಕೇಳುವುದು ಅತಿ ಮುಖ್ಯವಾಗಿದೆ. ಹಾಗಾಗಿ ಎಲ್ಲಾ ಶಿಕ್ಷಕರು ಮಕ್ಕಳು ಹೆಚ್ಚು ಪ್ರಶ್ನೆ ಕೇಳು ಅವಕಾಶ ಮಾಡಿಕೊಡಿ. ಅದರಲ್ಲಿ ತಪ್ಪು ಪ್ರಶ್ನೆ, ಒಳ್ಳೆ ಪ್ರಶ್ನೆ ಎಂಬುದಿರುವುದಿಲ್ಲ ಎಂದರು.

ಎಲ್ಲಾ ಮಕ್ಕಳು, ಅದರಲ್ಲಿಯೂ ಚಿಕ್ಕಮಕ್ಕಳು ಎಲ್ಲಾ ವಿಷಯದ ಬಗ್ಗೆ ಕೂತೂಹಲವುಳ್ಳವರಾಗಿತ್ತಾರೆ. ಅವರಲ್ಲಿ ದ್ವೇಷ ಇರುವುದಿಲ್ಲ. ಇದೇ ರೀತಿ ಕಲಿಯಬೇಕು ಎಂದರು.

ದ್ವೇಷ, ಅಸೂಯೆ ಮನೋಭಾವನೆ ವಿಜ್ಞಾನಕ್ಕೆ ವಿರುದ್ಧವಾಗಿದೆ. ನೀವು ಜೀವನದಲ್ಲಿ ಏನಾದರೂ ಆಗಿ. ಆದರೆ ದ್ವೇಷ, ಅಸೂಯೆಯನ್ನು ನಾವು ಕೊಲ್ಲದಿದ್ದರೆ ಮುಂದೆ ಬರಲು ಸಾಧ್ಯವಿಲ್ಲ. ಕೇರಳದ ಶಾಲೆಗಳು ದೇಶದಲ್ಲಿಯೇ ಉತ್ತಮವಾಗಿದ್ದರೂ ಇನ್ನು ಸಾಕಾಗುವುದಿಲ್ಲ. ಕಳೆದ ತಿಂಗಳು ಒಬ್ಬ ವಿದ್ಯಾರ್ಥಿ ಹಾವು ಕಚ್ಚಿ ಮರಣ ಹೊಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಈ ರೀತಿಯಾಗಿ ಆಗದಂತೆ ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಇದನ್ನು ಪಾರ್ಲಿಮೆಂಟ್‌ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಭಾಷಣದ ನಂತರ ರಾಹುಲ್‌ ಗಾಂಧಿಯವರು “ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ” ಸಫಾಗೆ ಧನ್ಯವಾದ ಅರ್ಪಿಸಿದರು. ಕೇರಳದ ಸ್ಪೂರ್ತಿ ಕ್ರಿಯೆಯಲ್ಲಿದೆ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದು ಹೇಳಿದ್ದಾಳೆ.

“ಇದು ನನ್ನ ಜೀವನದ ಅತ್ಯುತ್ತಮ ಕ್ಷಣ. ನಾನೇ ಖುದ್ದು ಅನುವಾದ ಮಾಡಬೇಕು ಎಂಬುದರ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದೆ. ಯಾವುದೇ ಕಾರಣಕ್ಕೂ ಗೊಂದಲ ಮಾಡಿಕೊಳ್ಳಬಾರದೆಂದು ನಿರ್ಧರಿಸಿದ್ದೆ. ನಾನು ವೇದಿಕೆಗೆ ಹೋಗುವಾಗ ನಡುಗುತ್ತಿದ್ದೆ. ಆದರೆ ರಾಹುಲ್ ಗಾಂಧಿಯವರು ಶಾಂತಗೊಳಿಸಿದರು. ಅವರು ತುಂಬಾ ಸೌಮ್ಯ ಸ್ವಭಾವದರು” ಎಂದು ಆಕೆ ಎನ್‌ಡಿಟಿವಿಗೆ ತಿಳಿಸಿದ್ದಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...