Homeಮುಖಪುಟವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ...

ವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ ಶಾಲೆಯ ಹುಡುಗಿ

ರಾಹುಲ್‌ ಗಾಂಧಿಯವರು "ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ" ಸಫಾಗೆ ಧನ್ಯವಾದ ಅರ್ಪಿಸಿದರು. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದಿದ್ದಾಳೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಗುರುವಾರ ತಮ್ಮ ಸಂಸದೀಯ ಕ್ಷೇತ್ರವಾದ ಕೇರಳದ ವಯನಾಡಿನ ಶಾಲೆಯೊಂದರಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಆಗ ಅವರು ನನ್ನ ಭಾಷಣವನ್ನುಇಂಗ್ಲಿಷ್‌ನಿಂದ ಮಲಯಾಳಂಗೆ ಅನುವಾದಿಸಲು ಯಾರಾದರೂ ಸಿದ್ಧರಿದ್ದೀರಾ? ಎಂದು ವಿದ್ಯಾರ್ಥಿಗಳಲ್ಲಿ ಪ್ರಶ್ನಿಸಿದರು. ಅವರ ಎಂದಿನ ಭಾಷಾಂತರಕಾರರಾಗಿದ್ದ ಪಕ್ಷದ ಮುಖಂಡ ಕೆ.ಸಿ.ವೇಣುಗೋಪಾಲ್ ನಗುತ್ತಾ ಕುಳಿತಿದ್ದರು.

ಎಲ್ಲರೂ ಆಶ್ಚರ್ಯಚಕಿತರಾಗಿ ನೋಡುತ್ತಿದ್ದರೆ, ಸರ್ಕಾರಿ ಶಾಲೆಯಲ್ಲಿ 12 ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸಫಾ ಸೆಬಿನ್ ಎದ್ದು ವೇದಿಕೆಯಲ್ಲಿದ್ದ ರಾಹುಲ್‌ ಗಾಂಧಿಯತ್ತ ಹೆಜ್ಜೆ ಹಾಕಿದಳು. ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಆಕೆಯನ್ನು ಸ್ವಾಗತಿಸಿದರು.

ಅವಳು ವೇದಿಕೆಯನ್ನು ತಲುಪಿ ರಾಹಲ್ ಗಾಂಧಿಯನ್ನು ಮುಖಾಮುಖಿಯಾಗಿ ಭೇಟಿಯಾದಾಗ, ಸಫಾಳ ಮೊದಲ ಪ್ರತಿಕ್ರಿಯೆ ಅವರನ್ನು ನಮಸ್ತೆಯಿಂದ ಸ್ವಾಗತಿಸುವುದು. ರಾಹುಲ್‌ ಗಾಂಧಿ ಬೆಚ್ಚಗಿನ ಹ್ಯಾಂಡ್‌ಶೇಕ್‌ ನೀಡಿ ಧನ್ಯವಾದ ತಿಳಿಸಿದರು. ಅವರು ವಿದ್ಯಾರ್ಥಿನಿಗೆ ಮೈಕ್ ಹಸ್ತಾಂತರಿಸಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಮುಕ್ತ ಮನಸ್ಸಿನಿಂದ ಚಿಂತಿಸುವುದು ವಿಜ್ಞಾನದ ಸಾರವಾಗಿದೆ. ಅದೇ ವಿಜ್ಞಾನವನ್ನು ಕಲಿಯುವ ಮೊದಲ ಹೆಜ್ಜೆಯಾಗಿದೆ. ನಿಮ್ಮ ಮನಸ್ಸು ಎಂದೂ ಮುಚ್ಚಬಾರದು. ಇತರರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಇತರರ ಅಭಿಪ್ರಾಯವನ್ನು ಗೌರವಿಸಬೇಕು. ಅವರ ಭಾಷೆ, ಧರ್ಮ, ಸಂಸ್ಕೃತಿಯನ್ನು ನಾವು ಗೌರವಿಸಬೇಕಾಗಿದೆ.

ವಿಡಿಯೋ ನೋಡಿ

“ನಮ್ಮ ದೇಶದಲ್ಲಿ ಈ ದಿನಗಳಲ್ಲಿ ನೀವು ಜನರನ್ನು ದ್ವೇಷಿಸಬಹುದು ಮತ್ತು ಅದೇ ಸಮಯದಲ್ಲಿ ವೈಜ್ಞಾನಿಕವಾಗಿ ಪ್ರಗತಿ ಹೊಂದಬಹುದು ಎಂಬ ಚರ್ಚೆ ಆರಂಭವಾಗಿದೆ. ಆದರೆ ಇದು ಸಂಪೂರ್ಣ ಅಸಂಬದ್ಧವಾಗಿದೆ” ಎಂದು ಅವರು ಹೇಳಿದರು. ಸಫಾ ಯಾವುದೇ ಗೊಂದಲವಿಲ್ಲದೇ ಸರಾಗವಾಗಿ ಮಲೆಯಾಳಂಗೆ ಅನುವಾದಿಸುತ್ತಿದ್ದರೆ ಅವಳ ಸಹಪಾಠಿಗಳು ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.

ಇನ್ನೊಬ್ಬರ ಅಭಿಪ್ರಾಯವನ್ನು ಮುಕ್ತವಾಗಿ ಸ್ಪೀಕರಿಸಿವುದೇ ವಿಜ್ಞಾನವನ್ನು ಕಲಿಯುವ ಅತಿ ಪ್ರಮುಖ ಅಂಶವಾಗಿದೆ. ಉತ್ತರಕ್ಕಿಂತ ಹೆಚ್ಚಾಗಿ ಪ್ರಶ್ನೆ ಕೇಳುವುದು ಅತಿ ಮುಖ್ಯವಾಗಿದೆ. ಹಾಗಾಗಿ ಎಲ್ಲಾ ಶಿಕ್ಷಕರು ಮಕ್ಕಳು ಹೆಚ್ಚು ಪ್ರಶ್ನೆ ಕೇಳು ಅವಕಾಶ ಮಾಡಿಕೊಡಿ. ಅದರಲ್ಲಿ ತಪ್ಪು ಪ್ರಶ್ನೆ, ಒಳ್ಳೆ ಪ್ರಶ್ನೆ ಎಂಬುದಿರುವುದಿಲ್ಲ ಎಂದರು.

ಎಲ್ಲಾ ಮಕ್ಕಳು, ಅದರಲ್ಲಿಯೂ ಚಿಕ್ಕಮಕ್ಕಳು ಎಲ್ಲಾ ವಿಷಯದ ಬಗ್ಗೆ ಕೂತೂಹಲವುಳ್ಳವರಾಗಿತ್ತಾರೆ. ಅವರಲ್ಲಿ ದ್ವೇಷ ಇರುವುದಿಲ್ಲ. ಇದೇ ರೀತಿ ಕಲಿಯಬೇಕು ಎಂದರು.

ದ್ವೇಷ, ಅಸೂಯೆ ಮನೋಭಾವನೆ ವಿಜ್ಞಾನಕ್ಕೆ ವಿರುದ್ಧವಾಗಿದೆ. ನೀವು ಜೀವನದಲ್ಲಿ ಏನಾದರೂ ಆಗಿ. ಆದರೆ ದ್ವೇಷ, ಅಸೂಯೆಯನ್ನು ನಾವು ಕೊಲ್ಲದಿದ್ದರೆ ಮುಂದೆ ಬರಲು ಸಾಧ್ಯವಿಲ್ಲ. ಕೇರಳದ ಶಾಲೆಗಳು ದೇಶದಲ್ಲಿಯೇ ಉತ್ತಮವಾಗಿದ್ದರೂ ಇನ್ನು ಸಾಕಾಗುವುದಿಲ್ಲ. ಕಳೆದ ತಿಂಗಳು ಒಬ್ಬ ವಿದ್ಯಾರ್ಥಿ ಹಾವು ಕಚ್ಚಿ ಮರಣ ಹೊಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಈ ರೀತಿಯಾಗಿ ಆಗದಂತೆ ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಇದನ್ನು ಪಾರ್ಲಿಮೆಂಟ್‌ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಭಾಷಣದ ನಂತರ ರಾಹುಲ್‌ ಗಾಂಧಿಯವರು “ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ” ಸಫಾಗೆ ಧನ್ಯವಾದ ಅರ್ಪಿಸಿದರು. ಕೇರಳದ ಸ್ಪೂರ್ತಿ ಕ್ರಿಯೆಯಲ್ಲಿದೆ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದು ಹೇಳಿದ್ದಾಳೆ.

“ಇದು ನನ್ನ ಜೀವನದ ಅತ್ಯುತ್ತಮ ಕ್ಷಣ. ನಾನೇ ಖುದ್ದು ಅನುವಾದ ಮಾಡಬೇಕು ಎಂಬುದರ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದೆ. ಯಾವುದೇ ಕಾರಣಕ್ಕೂ ಗೊಂದಲ ಮಾಡಿಕೊಳ್ಳಬಾರದೆಂದು ನಿರ್ಧರಿಸಿದ್ದೆ. ನಾನು ವೇದಿಕೆಗೆ ಹೋಗುವಾಗ ನಡುಗುತ್ತಿದ್ದೆ. ಆದರೆ ರಾಹುಲ್ ಗಾಂಧಿಯವರು ಶಾಂತಗೊಳಿಸಿದರು. ಅವರು ತುಂಬಾ ಸೌಮ್ಯ ಸ್ವಭಾವದರು” ಎಂದು ಆಕೆ ಎನ್‌ಡಿಟಿವಿಗೆ ತಿಳಿಸಿದ್ದಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...