Homeಮುಖಪುಟದೆಹಲಿ ವಿಶೇಷಚೇತನರ ಆಶ್ರಯಧಾಮದ 13 ಮಕ್ಕಳು ನಿಗೂಢ ಸಾವು; ಪ್ರತಿಪಕ್ಷಗಳಿಂದ ಕಳಪೆ ನಿರ್ವಹಣೆ ಆರೋಪ

ದೆಹಲಿ ವಿಶೇಷಚೇತನರ ಆಶ್ರಯಧಾಮದ 13 ಮಕ್ಕಳು ನಿಗೂಢ ಸಾವು; ಪ್ರತಿಪಕ್ಷಗಳಿಂದ ಕಳಪೆ ನಿರ್ವಹಣೆ ಆರೋಪ

- Advertisement -
- Advertisement -

ಕಳೆದ 20 ದಿನಗಳಲ್ಲಿ ದೆಹಲಿ ಸರ್ಕಾರ ವಿಶೇಷಚೇತನರ ಆಶ್ರಯಧಾಮದಲ್ಲಿ 13 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ತನಿಖೆಯಿಂದ ತಿಳಿದುಬಂದಿದೆ. ಇಲ್ಲಿಯವರೆಗೆ, ರೋಹಿಣಿಯಲ್ಲಿರುವ ಆಶಾ ಕಿರಣ್ ಆಶ್ರಯ ಮನೆಯಲ್ಲಿ ಜನವರಿಯಿಂದ 27 ಸಾವುಗಳು ವರದಿಯಾಗಿವೆ. ‘ನಿರ್ಲಕ್ಷ್ಯ ಮತ್ತು ಕಳಪೆ ನಿರ್ವಹಣೆ’ ಎಂದು ಬಿಜೆಪಿ ಎಂದು ಆರೋಪಿಸಿದೆ.

ಆಶಾಕಿರಣ್ ಆಶ್ರಯ ಮನೆಯಲ್ಲಿ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸಾವಿನ ಸಂಖ್ಯೆ ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ ಎಂದು ಗಮನಿಸಿದ ಎಸ್‌ಡಿಎಂ, ಮರಣೋತ್ತರ ಪರೀಕ್ಷೆಯ ವರದಿಗಳ ನಂತರ ಸಾವಿನ ನಿಜವಾದ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.

ಎಸ್‌ಡಿಎಂ ವರದಿಯು ಮಕ್ಕಳಿಗೆ ನೀಡುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಸತ್ಯಶೋಧನಾ ತಂಡವನ್ನು ಆಶ್ರಯ ಮನೆಗೆ ಕಳುಹಿಸಿದ್ದು, ಎಎಪಿ ಸರ್ಕಾರದ ನಿರ್ಲಕ್ಷ್ಯಕ್ಕಾಗಿ ವಾಗ್ದಾಳಿ ನಡೆಸಿದೆ.

“ವರ್ಷಗಳಿಂದ, ದೆಹಲಿ ಸರ್ಕಾರವು ನಡೆಸುತ್ತಿರುವ ಆಶಾ ಕಿರಣ್ ಆಶ್ರಯ ಮನೆ ಎಲ್ಲಾ ಭರವಸೆ ಕಳೆದುಕೊಂಡಿದೆ. ಅಲ್ಲಿ ನಿವಾಸಿಗಳು ಸಾಯುತ್ತಿದ್ದಾರೆ ಮತ್ತು ದೆಹಲಿ ಸರ್ಕಾರವು ಏನನ್ನೂ ಮಾಡುತ್ತಿಲ್ಲ. ಅರಿವು ತೆಗೆದುಕೊಂಡು ಅದರ ವಿಚಾರಣೆಗೆ ನನ್ನ ತಂಡವನ್ನು ಕಳುಹಿಸಲಾಗಿದೆ.” ಎಂದು ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದರು.

ಎನ್‌ಸಿಡಬ್ಲ್ಯು ದೆಹಲಿ ಸರ್ಕಾರ ನಡೆಸುತ್ತಿರುವ ರಾತ್ರಿ ಆಶ್ರಯಗಳ ಲೆಕ್ಕಪರಿಶೋಧನೆಯನ್ನು ಸಹ ನಡೆಸುತ್ತಿದೆ ಎಂದು ಅವರು ಹೇಳಿದರು.

ದೆಹಲಿ ಸಚಿವೆ ಅತಿಶಿ ಪ್ರತಿಕ್ರಿಯಿಸಿ, ಸಾವಿನ ಸಂಖ್ಯೆಯ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಯನ್ನು ಪ್ರಾರಂಭಿಸಲು, 48 ಗಂಟೆಗಳಲ್ಲಿ ವರದಿಯನ್ನು ಸಲ್ಲಿಸುವಂತೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಗೆ ಸೂಚಿಸಿದ್ದಾರೆ. ಜನವರಿ 2024 ರಿಂದ ಆಶ್ರಯ ಮನೆಯಲ್ಲಿ 14 ಸಾವುಗಳು ಸಂಭವಿಸಿವೆ ಎಂದು ಅತಿಶಿ ತನ್ನ ಪತ್ರದಲ್ಲಿ ಗಮನಿಸಿದ್ದಾರೆ.

ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವಂತೆ ಸಚಿವರು ಕೋರಿದರು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೋರಿದರು.

ಪರಿಸ್ಥಿತಿ ಅವಲೋಕಿಸಲು ಮುಂದಾದ ದೆಹಲಿ ಬಿಜೆಪಿ ತಂಡ

‘ನಮ್ಮ ಮಾಹಿತಿಯಂತೆ ಮಕ್ಕಳಿಗೆ ಗಲೀಜು ನೀರು ಬರುತ್ತಿದೆ, ಊಟ ಸಿಗುತ್ತಿಲ್ಲ, ಚಿಕಿತ್ಸೆಯೂ ಸಿಗುತ್ತಿಲ್ಲ, ಈ ಬಗ್ಗೆ ತನಿಖೆ ನಡೆಸಿ, ಇದರಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ಶಿಕ್ಷಿಸಬೇಕು’ ಎಂದು ಬಿ.ಜೆ.ಪಿ. ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೇಖಾ ಗುಪ್ತಾ ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಸಚಿವ ಗೋಪಾಲ್ ರೈ, ಮಯೂರ್ ವಿಹಾರ್‌ನ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ ತಾಯಿ ಮತ್ತು ಮಗನ ಮನೆಗೆ ಕೇಸರಿ ಪಕ್ಷದ ನಾಯಕರು ಏಕೆ ಭೇಟಿ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಆದರೆ, ಮಯೂರ್ ವಿಹಾರ್‌ನಲ್ಲಿ ಮಹಿಳೆ ಮತ್ತು ಅವರ ಮಗ ಚರಂಡಿಗೆ ಜಾರಿಬಿದ್ದು ಸಾವನ್ನಪ್ಪಿದಾಗ ಅವರು ಪ್ರತಿಭಟಿಸಲಿಲ್ಲ. ಅವರು ಆಶಾಕಿರಣದಲ್ಲಿ ಪ್ರತಿಭಟನೆಗೆ ಬಂದರು. ಏಕೆಂದರೆ, ಅದು ದೆಹಲಿ ಸರ್ಕಾರದ ಅಡಿಯಲ್ಲಿ ಬರುತ್ತದೆ” ಎಂದು ರೈ ಹೇಳಿದರು.

“ಸಂಬಂಧಪಟ್ಟ ಸಚಿವರು ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ. ದೆಹಲಿ ಸರ್ಕಾರವು ಜನರೊಂದಿಗೆ ನಿಂತಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ಕೇರಳ ಭೂಕುಸಿತ: ಅನಾಥ ಮಗುವನ್ನು ದತ್ತು ತೆಗೆದುಕೊಳ್ಳಲು ಮುಂದಾದ ವಯನಾಡಿನ ದಂಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....