Homeಮುಖಪುಟದೆಹಲಿ ವಿಶೇಷಚೇತನರ ಆಶ್ರಯಧಾಮದ 13 ಮಕ್ಕಳು ನಿಗೂಢ ಸಾವು; ಪ್ರತಿಪಕ್ಷಗಳಿಂದ ಕಳಪೆ ನಿರ್ವಹಣೆ ಆರೋಪ

ದೆಹಲಿ ವಿಶೇಷಚೇತನರ ಆಶ್ರಯಧಾಮದ 13 ಮಕ್ಕಳು ನಿಗೂಢ ಸಾವು; ಪ್ರತಿಪಕ್ಷಗಳಿಂದ ಕಳಪೆ ನಿರ್ವಹಣೆ ಆರೋಪ

- Advertisement -
- Advertisement -

ಕಳೆದ 20 ದಿನಗಳಲ್ಲಿ ದೆಹಲಿ ಸರ್ಕಾರ ವಿಶೇಷಚೇತನರ ಆಶ್ರಯಧಾಮದಲ್ಲಿ 13 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ತನಿಖೆಯಿಂದ ತಿಳಿದುಬಂದಿದೆ. ಇಲ್ಲಿಯವರೆಗೆ, ರೋಹಿಣಿಯಲ್ಲಿರುವ ಆಶಾ ಕಿರಣ್ ಆಶ್ರಯ ಮನೆಯಲ್ಲಿ ಜನವರಿಯಿಂದ 27 ಸಾವುಗಳು ವರದಿಯಾಗಿವೆ. ‘ನಿರ್ಲಕ್ಷ್ಯ ಮತ್ತು ಕಳಪೆ ನಿರ್ವಹಣೆ’ ಎಂದು ಬಿಜೆಪಿ ಎಂದು ಆರೋಪಿಸಿದೆ.

ಆಶಾಕಿರಣ್ ಆಶ್ರಯ ಮನೆಯಲ್ಲಿ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸಾವಿನ ಸಂಖ್ಯೆ ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ ಎಂದು ಗಮನಿಸಿದ ಎಸ್‌ಡಿಎಂ, ಮರಣೋತ್ತರ ಪರೀಕ್ಷೆಯ ವರದಿಗಳ ನಂತರ ಸಾವಿನ ನಿಜವಾದ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.

ಎಸ್‌ಡಿಎಂ ವರದಿಯು ಮಕ್ಕಳಿಗೆ ನೀಡುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಸತ್ಯಶೋಧನಾ ತಂಡವನ್ನು ಆಶ್ರಯ ಮನೆಗೆ ಕಳುಹಿಸಿದ್ದು, ಎಎಪಿ ಸರ್ಕಾರದ ನಿರ್ಲಕ್ಷ್ಯಕ್ಕಾಗಿ ವಾಗ್ದಾಳಿ ನಡೆಸಿದೆ.

“ವರ್ಷಗಳಿಂದ, ದೆಹಲಿ ಸರ್ಕಾರವು ನಡೆಸುತ್ತಿರುವ ಆಶಾ ಕಿರಣ್ ಆಶ್ರಯ ಮನೆ ಎಲ್ಲಾ ಭರವಸೆ ಕಳೆದುಕೊಂಡಿದೆ. ಅಲ್ಲಿ ನಿವಾಸಿಗಳು ಸಾಯುತ್ತಿದ್ದಾರೆ ಮತ್ತು ದೆಹಲಿ ಸರ್ಕಾರವು ಏನನ್ನೂ ಮಾಡುತ್ತಿಲ್ಲ. ಅರಿವು ತೆಗೆದುಕೊಂಡು ಅದರ ವಿಚಾರಣೆಗೆ ನನ್ನ ತಂಡವನ್ನು ಕಳುಹಿಸಲಾಗಿದೆ.” ಎಂದು ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದರು.

ಎನ್‌ಸಿಡಬ್ಲ್ಯು ದೆಹಲಿ ಸರ್ಕಾರ ನಡೆಸುತ್ತಿರುವ ರಾತ್ರಿ ಆಶ್ರಯಗಳ ಲೆಕ್ಕಪರಿಶೋಧನೆಯನ್ನು ಸಹ ನಡೆಸುತ್ತಿದೆ ಎಂದು ಅವರು ಹೇಳಿದರು.

ದೆಹಲಿ ಸಚಿವೆ ಅತಿಶಿ ಪ್ರತಿಕ್ರಿಯಿಸಿ, ಸಾವಿನ ಸಂಖ್ಯೆಯ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಯನ್ನು ಪ್ರಾರಂಭಿಸಲು, 48 ಗಂಟೆಗಳಲ್ಲಿ ವರದಿಯನ್ನು ಸಲ್ಲಿಸುವಂತೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಗೆ ಸೂಚಿಸಿದ್ದಾರೆ. ಜನವರಿ 2024 ರಿಂದ ಆಶ್ರಯ ಮನೆಯಲ್ಲಿ 14 ಸಾವುಗಳು ಸಂಭವಿಸಿವೆ ಎಂದು ಅತಿಶಿ ತನ್ನ ಪತ್ರದಲ್ಲಿ ಗಮನಿಸಿದ್ದಾರೆ.

ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವಂತೆ ಸಚಿವರು ಕೋರಿದರು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೋರಿದರು.

ಪರಿಸ್ಥಿತಿ ಅವಲೋಕಿಸಲು ಮುಂದಾದ ದೆಹಲಿ ಬಿಜೆಪಿ ತಂಡ

‘ನಮ್ಮ ಮಾಹಿತಿಯಂತೆ ಮಕ್ಕಳಿಗೆ ಗಲೀಜು ನೀರು ಬರುತ್ತಿದೆ, ಊಟ ಸಿಗುತ್ತಿಲ್ಲ, ಚಿಕಿತ್ಸೆಯೂ ಸಿಗುತ್ತಿಲ್ಲ, ಈ ಬಗ್ಗೆ ತನಿಖೆ ನಡೆಸಿ, ಇದರಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ಶಿಕ್ಷಿಸಬೇಕು’ ಎಂದು ಬಿ.ಜೆ.ಪಿ. ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೇಖಾ ಗುಪ್ತಾ ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಸಚಿವ ಗೋಪಾಲ್ ರೈ, ಮಯೂರ್ ವಿಹಾರ್‌ನ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ ತಾಯಿ ಮತ್ತು ಮಗನ ಮನೆಗೆ ಕೇಸರಿ ಪಕ್ಷದ ನಾಯಕರು ಏಕೆ ಭೇಟಿ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಆದರೆ, ಮಯೂರ್ ವಿಹಾರ್‌ನಲ್ಲಿ ಮಹಿಳೆ ಮತ್ತು ಅವರ ಮಗ ಚರಂಡಿಗೆ ಜಾರಿಬಿದ್ದು ಸಾವನ್ನಪ್ಪಿದಾಗ ಅವರು ಪ್ರತಿಭಟಿಸಲಿಲ್ಲ. ಅವರು ಆಶಾಕಿರಣದಲ್ಲಿ ಪ್ರತಿಭಟನೆಗೆ ಬಂದರು. ಏಕೆಂದರೆ, ಅದು ದೆಹಲಿ ಸರ್ಕಾರದ ಅಡಿಯಲ್ಲಿ ಬರುತ್ತದೆ” ಎಂದು ರೈ ಹೇಳಿದರು.

“ಸಂಬಂಧಪಟ್ಟ ಸಚಿವರು ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ. ದೆಹಲಿ ಸರ್ಕಾರವು ಜನರೊಂದಿಗೆ ನಿಂತಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ಕೇರಳ ಭೂಕುಸಿತ: ಅನಾಥ ಮಗುವನ್ನು ದತ್ತು ತೆಗೆದುಕೊಳ್ಳಲು ಮುಂದಾದ ವಯನಾಡಿನ ದಂಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...