Homeಮುಖಪುಟಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ಒಂದು ಕಡೆ ಬಿಜೆಪಿ ನಮಗೆ ರೈತರ ಬಗ್ಗೆ ಕಾಳಜಿಯಿದೆ ಅವರೊಂದಿಗೆ ಮಾತನಾಡುತ್ತೇವೆ ಎನ್ನುತ್ತಿದೆ. ಇನ್ನೊಂದು ಕಡೆ ಅದೇ ಬಿಜೆಪಿ ನಮಗೆ ಕಪ್ಪು ಬಾವುಟ ತೋರಿಸಿದರೆ ಆ ರೈತರ ಮೇಲೆ ಗಲಭೆ, ಕೊಲೆಯತ್ನದ ಪ್ರಕರಣ ದಾಖಲಿಸುತ್ತೇವೆ ಎನ್ನುತ್ತಿದೆ - ಯೋಗೇಂದ್ರ ಯಾದವ್

- Advertisement -
- Advertisement -

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ಅವುಗಳನ್ನು ರದ್ದುಗೊಳಿಸಬೇಕೆಂದು ಹೋರಾಟ ನಡೆಸುತ್ತಿರುವ ರೈತರು ಮಂಗಳವಾರ (ಡಿ.22) ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಕಪ್ಪು ಬಾವುಟಗಳನ್ನು ತೋರಿಸಿದ್ದಕ್ಕಾಗಿ 13 ರೈತರ ಮೇಲೆ ಗಲಭೆ, ಕೊಲೆಯತ್ನದ ಪ್ರಕರಣ ದಾಖಲಾಗಿದೆ.

ಅಂಬಾಲಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಘೇರಾವ್ ಹಾಕಿದ ನೂರಾರು ರೈತರು ಕಪ್ಪು ಧ್ವಜಗಳನ್ನು ತೋರಿಸಿ, ಕೃಷಿ ಕಾನೂನುಗಳ ವಿರುದ್ಧ ಘೋಷಣೆ ಕೂಗಿದ್ದರು. ಬಿಜೆಪಿ ನೇತೃತ್ವ ಹರಿಯಾಣ ಸರ್ಕಾರವು ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.

307 (ಕೊಲೆ ಯತ್ನ), ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ತಡೆಗಟ್ಟುವ ಕಾಯ್ದೆ, 1984 ಸೇರಿದಂತೆ ಐಪಿಸಿಯ ಒಂಬತ್ತು ವಿಭಾಗಗಳ ಅಡಿಯಲ್ಲಿ ಮಂಗಳವಾರ ರಾತ್ರಿ 13 ರೈತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಗುರ್ಜಂತ್ ಸಿಂಗ್ ಎಂಬ ಪೊಲೀಸ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದ್ದು, ಪ್ರತಿಭಟನಾಕಾರರು ತಮ್ಮ ಕರ್ತವ್ಯಕ್ಕೆ ಅಡಚಣೆ, ತಳ್ಳುವುದು ಮತ್ತು ನೂಕುವುದು ಮತ್ತು ಕೊಲೆ ಯತ್ನ ಹಾಗೂ ಬೆಂಗಾವಲು ವಾಹನವನ್ನು ನಿರ್ಬಂಧಿಸಿದ್ದಾರೆ ಎಂಬ ಆರೋಪಿಸಲಾಗಿದೆ.

ದೇಶಾದ್ಯಂತ ಹಬ್ಬುತ್ತಿರುವ ರೈತ ಚಳವಳಿಯನ್ನು ಹತ್ತಿಕ್ಕುವುದಕ್ಕಾಗಿ ನಮ್ಮ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರೈತರು ದೂರಿದ್ದಾರೆ.

ಈ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್‌ರವರು “ಒಂದು ಕಡೆ ಬಿಜೆಪಿ ನಮಗೆ ರೈತರ ಬಗ್ಗೆ ಕಾಳಜಿಯಿದೆ ಅವರೊಂದಿಗೆ ಮಾತನಾಡುತ್ತೇವೆ ಎನ್ನುತ್ತಿದೆ. ಇನ್ನೊಂದು ಕಡೆ ಅದೇ ಬಿಜೆಪಿ ನಮಗೆ ಕಪ್ಪು ಬಾವುಟ ತೋರಿಸಿದರೆ ಆ ರೈತರ ಮೇಲೆ ಗಲಭೆ, ಕೊಲೆಯತ್ನದ ಪ್ರಕರಣ ದಾಖಲಿಸುತ್ತೇವೆ” ಎನ್ನುತ್ತಿದೆ. ಇದು ಬಿಜೆಪಿಯ ಇಬ್ಬಂದಿತನ, ರೈತರ ಬಗೆಗಿನ ಧೋರಣೆ” ಎಂದು ಕಿಡಿಕಾರಿದ್ದಾರೆ.

ಡಿ.22ರಂದು ಹರಿಯಾಣ ಮುಖ್ಯಮಂತ್ರಿ ಖಟ್ಟರ್‌, ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಅಂಬಾಲಾಕ್ಕೆ ಹೋಗುತ್ತಿದ್ದರು. ಆಗ ನೂರಾರು ರೈತರು ಕಪ್ಪು ಬಾವುಟ ತೋರಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ರೈತರನ್ನು ಕಂಡ ಮುಖ್ಯಮಂತ್ರಿಗಳ ಬೆಂಗಾವಲು ಪಡೆ ಕೂಡ ತಮ್ಮ ವಾಹನದ ವೇಗವನ್ನು ಕಡಿಮೆ ಮಾಡಿಕೊಂಡಿತ್ತು. ಆಗ ರೈತರು ಅದನ್ನು ಮುಂದಕ್ಕೆ ಹೋಗಲು ಬಿಡದೆ ಕೆಲ ಕಾಲ ತಡೆದಿದ್ದರು.

ಕಳೆದ ಡಿಸೆಂಬರ್ 1 ರಂದು ಅಂಬಾಲಾದ ಹಳ್ಳಿಯೊಂದರಲ್ಲಿ ರೈತರ ಗುಂಪು ಕೇಂದ್ರ ಸಚಿವ ಮತ್ತು ಅಂಬಾಲದ ಸಂಸದ ರತ್ತನ್ ಲಾಲ್ ಕಟಾರಿಯಾ ಘೇರಾವ್ ಹಾಕಿ ಕಪ್ಪು ಬಾವುಟಗಳನ್ನು ಪ್ರದರ್ಶಿಸಿತ್ತು.

ಕಳೆದ 27 ದಿನಗಳಿಂದ ದೆಹಲಿಯ ಗಡಿಗಳಲ್ಲಿನ ಹೋರಾಟನಿರತ ರೈತ ಮುಖಂಡರು, ಭಾರತದಲ್ಲಿನ ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ ಎಂದು ಬ್ರಿಟನ್ ಸಂಸದರಿಗೆ ಪತ್ರ ಬರೆಯುವದಾಗಿ ತಿಳಿಸಿದ್ದಾರೆ.

ಜನವರಿ 26ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್‌ ಬರಲಿದ್ದಾರೆ ಎಂದು ವರದಿಯಾಗಿದೆ. ಭಾರತ ಸರ್ಕಾರವು ರೈತರ ಹಕ್ಕೊತ್ತಾಯಗಳನ್ನು ಈಡೇರಿಸುವವರೆಗೂ ಇಂಗ್ಲೆಂಡ್‌ನ ಪ್ರಧಾನಿ ಭಾರತಕ್ಕೆ ಬರದಂತೆ ತಡೆಯಬೇಕೆಂದು ಅಲ್ಲಿನ ಸಂಸದರಿಗೆ ಪತ್ರ ಬರೆದು ಕೋರುತ್ತೇವೆ ಎಂದು ಪಂಜಾಬ್‌ನ ರೈತ ಮುಖಂಡ ಕುಲವಂತ್‌ ಸಿಂಗ್ ಸಂಧು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರೇಮ ಪತ್ರ ಬರೆಯುವುದು ನಿಲ್ಲಿಸಿ: ಕೇಂದ್ರಕ್ಕೆ ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...