Homeಕರ್ನಾಟಕಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ದಲಿತ ಮುಖಂಡ ನರಸಿಂಹಮೂರ್ತಿ (ಕುರಿ ಮೂರ್ತಿ) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸರು 13 ಜನರನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ಅಧಿಕ್ಷಕ ರಾಹುಲ್‌ ಶಹಾಪುರ್‌ವಾಡ್‌ ತಿಳಿಸಿದ್ದಾರೆ.

ಜೂನ್‌ 15ರ ಬುಧವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಗುಬ್ಬಿ ಪಟ್ಟಣದ ಹೆದ್ದಾರಿ ಬದಿಯ ಅಂಗಡಿಯ ಬಳಿ ಟೀ ಕುಡಿಯುತ್ತ ಕುಳಿತ್ತಿದ್ದ ನರಸಿಂಹಮೂರ್ತಿಯವರನ್ನು ಏಳು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಹತ್ಯೆಗೆ ಸಂಬಂಧ ಕನಕಪುರದ ಹಾರೋಹಳ್ಳಿ ಸಮೀಪದ ಫಾರಂಹೌಸ್‌ನಲ್ಲಿ ಅಡಗಿದ್ದ 13 ಆರೋಪಿಗಳನ್ನು ಶುಕ್ರವಾರ ಮುಂಜಾನೆ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಟ್ಟೂರು ಹಾಗೂ ಗುಬ್ಬಿ ಹೊಸಳ್ಳಿಯ ಎರಡು ಜಮೀನು ವಿವಾದ ಹಾಗೂ ಹಿಂದಿನ ಕೆಲವು ಪ್ರಕರಣಗಳ ವೈಮನಸ್ಸುಗಳು ಕೊಲೆಗೆ ಕಾರಣ ಎಂದು ಪ್ರಾಥಮಿಕ ಹಂತದ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಎಸ್‌ಪಿ ತಿಳಿಸಿದ್ದು, “ಪೂರ್ಣ ಪ್ರಮಾಣದ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್‌ ವಶಕ್ಕೆ ಪಡೆಯಲಾಗಿದೆ” ಎಂದಿದ್ದಾರೆ.

ಗುಬ್ಬಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 143, 147, 148, 302, ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

ಗುಬ್ಬಿ ಹೊಸಹಳ್ಳಿಯ ಎಚ್.ಸಿ.ಕಿರಣ್‌ ಬಿನ್‌ ರಾಜಣ್ಣ (33 ವರ್ಷ), ಮಂಡ್ಯ ತಾಲ್ಲೂಕಿನ ರಾಜ ಅಲಿಯಾಸ್‌ ಕ್ಯಾಟ್ ರಾಜ (35),  ಪಾಂಡವಪುರದ ಮಂಜು ಅಲಿಯಾಸ್ ಮ್ಯಾಕ್ಷಿ (30), ಬಿಡದಿ ಬಳಿಯ ಅಭಿಷೇಕ್‌ ಅಲಿಯಾಸ್‌ ಕರಿಯ (30), ಗುಬ್ಬಿ ಪಟ್ಟಣದ ನಯಾಜ್ ಬಿನ್‌ ವಜೀರ್‌ (25), ಮೈಸೂರಿನ ವೆಂಕಟೇಶ್‌ (32) ಕೆಂಗೇರಿಯ ಕೀರ್ತಿ (23), ಬಿಡದಿ ಸಮೀಪದ ಚಂದ್ರಶೇಖರ್‌ ಎಚ್‌.ಎಸ್‌. ಅಲಿಯಾಸ್ ಚಂದು (29), ಗುಬ್ಬಿಯ ಭರತ್‌‌ ಕೆ.ಎನ್‌. (24), ಧೀರಜ್‌ ಜಿ.ಕೆ. (32), ವೆಂಕಟೇಶ್‌ ಬೆಂಗಳೂರು (30), ಬಿಲ್ಲೇ ಪಾಳ್ಯ ಬಸವರಾಜು (25), ನಾಗರಾಜು (20) ಬಿಲ್ಲೇಪಾಳ್ಯ ಬಂಧಿತ ಆರೋಪಿಗಳು.

ಶಿರಾ ಡಿವೈಎಸ್‌ಪಿ ಎಲ್.ಕುಮಾರಪ್ಪ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು ಸದರಿ ತಂಡವು 13 ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಿದೆ. ಕೊಲೆಯನ್ನು ಏಳು ಜನರು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರು ಜನರು ಕೊಲೆಗೆ ಸಹಕರಿಸಿದ್ದಾರೆ. ಆರೋಪಿಗಳಲ್ಲಿ  ಆರು ಜನ ಆರೋಪಿಗಳು ಗುಬ್ಬಿ ಟೌನ್‌ ವಾಸಿಗಳಾಗಿದ್ದು ಇಬ್ಬರು ಮಂಡ್ಯ ವಾಸಿಗಳು, ಇಬ್ಬರು ಮೈಸೂರು ವಾಸಿಗಳು, ಇಬ್ಬರು ರಾಮನಗರ ಮತ್ತು ಒಬ್ಬ ಬೆಂಗಳೂರು ನಗರ ವಾಸಿಯಾಗಿರುವುದಾಗಿ ಎಸ್‌ಪಿ ಮಾಹಿತಿ ನೀಡಿದ್ದಾರೆ..

ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್‌, ಡಿವೈಎಸ್‌ಪಿ ಎಲ್‌.ಕುಮಾರಪ್ಪ, ಅಧಿಕಾರಿಗಳಾದ ರವಿಕುಮಾರ್‌, ಎಫ್‌.ಕೆ.ನದಾಫ್‌, ಅವಿನಾಶ್‌, ಸಿಬ್ಬಂದಿ ಶಾಂತರಾಜು, ಸೈಮನ್‌, ವಿಕ್ಟರ್‌, ಇನಾಯತ್‌, ರಮೇಶ್‌, ಮಹೇಶ್‌, ಗೋಪಿನಾಥ, ಮಂಜುನಾಥ್‌ಸ್ವಾಮಿ, ನವೀನ್‌, ಮಾರುತೇಶ್‌, ಫಾರೂಖ್, ಗಿರೀಶ್‌ ಶ್ರಮವಹಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ ಸಲ್ಲಿಸಿದ್ದಾರೆ.

ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಕೆಲವು ವಾರಗಳ ಹಿಂದೆ ಇಬ್ಬರು ದಲಿತ ಯುವಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಘಟನೆಗಳ ಬೆನ್ನಲ್ಲೇ ಕುರಿಮೂರ್ತಿಯವರ ಕೊಲೆ ನಡೆದಿದ್ದು ಆತಂಕ ಸೃಷ್ಟಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಪೆದ್ದನಹಳ್ಳಿ ಪ್ರಕರಣ

ಪೆದ್ದನಹಳ್ಳಿಯಲ್ಲಿ ಗ್ರಾಮದಲ್ಲಿ ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿ ಗ್ರಾಮದ ಗಿರೀಶ್ (ಮಾದಿಗ ಸಮುದಾಯ), ಮಂಚಲದೊರೆ ಗ್ರಾಮದ ಗಿರೀಶ್‌ (ನಾಯಕ ಸಮುದಾಯ) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸವರ್ಣೀಯರನ್ನು ಬಂಧಿಸಲಾಗಿದೆ. (ಪೆದ್ದನಹಳ್ಳಿ ಪ್ರಕರಣ ಕುರಿತು ಓದಿರಿ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!)

ತುಮಕೂರು: ಮತ್ತೊಂದು ಕೊಲೆ ಪ್ರಕರಣ

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿತ್ತು. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗಿದ್ದರು. ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆಂದೇ ಬಿಂಬಿಸಲಾಗಿತ್ತು. ಆದರೆ ಮೇ 17ರಂದು ಎಸ್‌.ಸಿ. ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಸವರ್ಣೀಯ ವ್ಯಕ್ತಿಯನ್ನು ಆರೋಪಿ ಎಂದು ಗುರುತಿಸಲಾಗಿದೆ. (ಸಂಪೂರ್ಣ ಸುದ್ದಿ ಇಲ್ಲಿ ಓದಿರಿಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...