Homeಕರ್ನಾಟಕಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ದಲಿತ ಮುಖಂಡ ನರಸಿಂಹಮೂರ್ತಿ (ಕುರಿ ಮೂರ್ತಿ) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸರು 13 ಜನರನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ಅಧಿಕ್ಷಕ ರಾಹುಲ್‌ ಶಹಾಪುರ್‌ವಾಡ್‌ ತಿಳಿಸಿದ್ದಾರೆ.

ಜೂನ್‌ 15ರ ಬುಧವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಗುಬ್ಬಿ ಪಟ್ಟಣದ ಹೆದ್ದಾರಿ ಬದಿಯ ಅಂಗಡಿಯ ಬಳಿ ಟೀ ಕುಡಿಯುತ್ತ ಕುಳಿತ್ತಿದ್ದ ನರಸಿಂಹಮೂರ್ತಿಯವರನ್ನು ಏಳು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಹತ್ಯೆಗೆ ಸಂಬಂಧ ಕನಕಪುರದ ಹಾರೋಹಳ್ಳಿ ಸಮೀಪದ ಫಾರಂಹೌಸ್‌ನಲ್ಲಿ ಅಡಗಿದ್ದ 13 ಆರೋಪಿಗಳನ್ನು ಶುಕ್ರವಾರ ಮುಂಜಾನೆ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಟ್ಟೂರು ಹಾಗೂ ಗುಬ್ಬಿ ಹೊಸಳ್ಳಿಯ ಎರಡು ಜಮೀನು ವಿವಾದ ಹಾಗೂ ಹಿಂದಿನ ಕೆಲವು ಪ್ರಕರಣಗಳ ವೈಮನಸ್ಸುಗಳು ಕೊಲೆಗೆ ಕಾರಣ ಎಂದು ಪ್ರಾಥಮಿಕ ಹಂತದ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಎಸ್‌ಪಿ ತಿಳಿಸಿದ್ದು, “ಪೂರ್ಣ ಪ್ರಮಾಣದ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್‌ ವಶಕ್ಕೆ ಪಡೆಯಲಾಗಿದೆ” ಎಂದಿದ್ದಾರೆ.

ಗುಬ್ಬಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 143, 147, 148, 302, ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

ಗುಬ್ಬಿ ಹೊಸಹಳ್ಳಿಯ ಎಚ್.ಸಿ.ಕಿರಣ್‌ ಬಿನ್‌ ರಾಜಣ್ಣ (33 ವರ್ಷ), ಮಂಡ್ಯ ತಾಲ್ಲೂಕಿನ ರಾಜ ಅಲಿಯಾಸ್‌ ಕ್ಯಾಟ್ ರಾಜ (35),  ಪಾಂಡವಪುರದ ಮಂಜು ಅಲಿಯಾಸ್ ಮ್ಯಾಕ್ಷಿ (30), ಬಿಡದಿ ಬಳಿಯ ಅಭಿಷೇಕ್‌ ಅಲಿಯಾಸ್‌ ಕರಿಯ (30), ಗುಬ್ಬಿ ಪಟ್ಟಣದ ನಯಾಜ್ ಬಿನ್‌ ವಜೀರ್‌ (25), ಮೈಸೂರಿನ ವೆಂಕಟೇಶ್‌ (32) ಕೆಂಗೇರಿಯ ಕೀರ್ತಿ (23), ಬಿಡದಿ ಸಮೀಪದ ಚಂದ್ರಶೇಖರ್‌ ಎಚ್‌.ಎಸ್‌. ಅಲಿಯಾಸ್ ಚಂದು (29), ಗುಬ್ಬಿಯ ಭರತ್‌‌ ಕೆ.ಎನ್‌. (24), ಧೀರಜ್‌ ಜಿ.ಕೆ. (32), ವೆಂಕಟೇಶ್‌ ಬೆಂಗಳೂರು (30), ಬಿಲ್ಲೇ ಪಾಳ್ಯ ಬಸವರಾಜು (25), ನಾಗರಾಜು (20) ಬಿಲ್ಲೇಪಾಳ್ಯ ಬಂಧಿತ ಆರೋಪಿಗಳು.

ಶಿರಾ ಡಿವೈಎಸ್‌ಪಿ ಎಲ್.ಕುಮಾರಪ್ಪ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು ಸದರಿ ತಂಡವು 13 ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಿದೆ. ಕೊಲೆಯನ್ನು ಏಳು ಜನರು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರು ಜನರು ಕೊಲೆಗೆ ಸಹಕರಿಸಿದ್ದಾರೆ. ಆರೋಪಿಗಳಲ್ಲಿ  ಆರು ಜನ ಆರೋಪಿಗಳು ಗುಬ್ಬಿ ಟೌನ್‌ ವಾಸಿಗಳಾಗಿದ್ದು ಇಬ್ಬರು ಮಂಡ್ಯ ವಾಸಿಗಳು, ಇಬ್ಬರು ಮೈಸೂರು ವಾಸಿಗಳು, ಇಬ್ಬರು ರಾಮನಗರ ಮತ್ತು ಒಬ್ಬ ಬೆಂಗಳೂರು ನಗರ ವಾಸಿಯಾಗಿರುವುದಾಗಿ ಎಸ್‌ಪಿ ಮಾಹಿತಿ ನೀಡಿದ್ದಾರೆ..

ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್‌, ಡಿವೈಎಸ್‌ಪಿ ಎಲ್‌.ಕುಮಾರಪ್ಪ, ಅಧಿಕಾರಿಗಳಾದ ರವಿಕುಮಾರ್‌, ಎಫ್‌.ಕೆ.ನದಾಫ್‌, ಅವಿನಾಶ್‌, ಸಿಬ್ಬಂದಿ ಶಾಂತರಾಜು, ಸೈಮನ್‌, ವಿಕ್ಟರ್‌, ಇನಾಯತ್‌, ರಮೇಶ್‌, ಮಹೇಶ್‌, ಗೋಪಿನಾಥ, ಮಂಜುನಾಥ್‌ಸ್ವಾಮಿ, ನವೀನ್‌, ಮಾರುತೇಶ್‌, ಫಾರೂಖ್, ಗಿರೀಶ್‌ ಶ್ರಮವಹಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ ಸಲ್ಲಿಸಿದ್ದಾರೆ.

ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಕೆಲವು ವಾರಗಳ ಹಿಂದೆ ಇಬ್ಬರು ದಲಿತ ಯುವಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಘಟನೆಗಳ ಬೆನ್ನಲ್ಲೇ ಕುರಿಮೂರ್ತಿಯವರ ಕೊಲೆ ನಡೆದಿದ್ದು ಆತಂಕ ಸೃಷ್ಟಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಪೆದ್ದನಹಳ್ಳಿ ಪ್ರಕರಣ

ಪೆದ್ದನಹಳ್ಳಿಯಲ್ಲಿ ಗ್ರಾಮದಲ್ಲಿ ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿ ಗ್ರಾಮದ ಗಿರೀಶ್ (ಮಾದಿಗ ಸಮುದಾಯ), ಮಂಚಲದೊರೆ ಗ್ರಾಮದ ಗಿರೀಶ್‌ (ನಾಯಕ ಸಮುದಾಯ) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸವರ್ಣೀಯರನ್ನು ಬಂಧಿಸಲಾಗಿದೆ. (ಪೆದ್ದನಹಳ್ಳಿ ಪ್ರಕರಣ ಕುರಿತು ಓದಿರಿ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!)

ತುಮಕೂರು: ಮತ್ತೊಂದು ಕೊಲೆ ಪ್ರಕರಣ

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿತ್ತು. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗಿದ್ದರು. ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆಂದೇ ಬಿಂಬಿಸಲಾಗಿತ್ತು. ಆದರೆ ಮೇ 17ರಂದು ಎಸ್‌.ಸಿ. ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಸವರ್ಣೀಯ ವ್ಯಕ್ತಿಯನ್ನು ಆರೋಪಿ ಎಂದು ಗುರುತಿಸಲಾಗಿದೆ. (ಸಂಪೂರ್ಣ ಸುದ್ದಿ ಇಲ್ಲಿ ಓದಿರಿಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...