Homeಕರ್ನಾಟಕಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ದಲಿತ ಮುಖಂಡ ನರಸಿಂಹಮೂರ್ತಿ (ಕುರಿ ಮೂರ್ತಿ) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸರು 13 ಜನರನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ಅಧಿಕ್ಷಕ ರಾಹುಲ್‌ ಶಹಾಪುರ್‌ವಾಡ್‌ ತಿಳಿಸಿದ್ದಾರೆ.

ಜೂನ್‌ 15ರ ಬುಧವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಗುಬ್ಬಿ ಪಟ್ಟಣದ ಹೆದ್ದಾರಿ ಬದಿಯ ಅಂಗಡಿಯ ಬಳಿ ಟೀ ಕುಡಿಯುತ್ತ ಕುಳಿತ್ತಿದ್ದ ನರಸಿಂಹಮೂರ್ತಿಯವರನ್ನು ಏಳು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಹತ್ಯೆಗೆ ಸಂಬಂಧ ಕನಕಪುರದ ಹಾರೋಹಳ್ಳಿ ಸಮೀಪದ ಫಾರಂಹೌಸ್‌ನಲ್ಲಿ ಅಡಗಿದ್ದ 13 ಆರೋಪಿಗಳನ್ನು ಶುಕ್ರವಾರ ಮುಂಜಾನೆ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಟ್ಟೂರು ಹಾಗೂ ಗುಬ್ಬಿ ಹೊಸಳ್ಳಿಯ ಎರಡು ಜಮೀನು ವಿವಾದ ಹಾಗೂ ಹಿಂದಿನ ಕೆಲವು ಪ್ರಕರಣಗಳ ವೈಮನಸ್ಸುಗಳು ಕೊಲೆಗೆ ಕಾರಣ ಎಂದು ಪ್ರಾಥಮಿಕ ಹಂತದ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಎಸ್‌ಪಿ ತಿಳಿಸಿದ್ದು, “ಪೂರ್ಣ ಪ್ರಮಾಣದ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್‌ ವಶಕ್ಕೆ ಪಡೆಯಲಾಗಿದೆ” ಎಂದಿದ್ದಾರೆ.

ಗುಬ್ಬಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 143, 147, 148, 302, ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

ಗುಬ್ಬಿ ಹೊಸಹಳ್ಳಿಯ ಎಚ್.ಸಿ.ಕಿರಣ್‌ ಬಿನ್‌ ರಾಜಣ್ಣ (33 ವರ್ಷ), ಮಂಡ್ಯ ತಾಲ್ಲೂಕಿನ ರಾಜ ಅಲಿಯಾಸ್‌ ಕ್ಯಾಟ್ ರಾಜ (35),  ಪಾಂಡವಪುರದ ಮಂಜು ಅಲಿಯಾಸ್ ಮ್ಯಾಕ್ಷಿ (30), ಬಿಡದಿ ಬಳಿಯ ಅಭಿಷೇಕ್‌ ಅಲಿಯಾಸ್‌ ಕರಿಯ (30), ಗುಬ್ಬಿ ಪಟ್ಟಣದ ನಯಾಜ್ ಬಿನ್‌ ವಜೀರ್‌ (25), ಮೈಸೂರಿನ ವೆಂಕಟೇಶ್‌ (32) ಕೆಂಗೇರಿಯ ಕೀರ್ತಿ (23), ಬಿಡದಿ ಸಮೀಪದ ಚಂದ್ರಶೇಖರ್‌ ಎಚ್‌.ಎಸ್‌. ಅಲಿಯಾಸ್ ಚಂದು (29), ಗುಬ್ಬಿಯ ಭರತ್‌‌ ಕೆ.ಎನ್‌. (24), ಧೀರಜ್‌ ಜಿ.ಕೆ. (32), ವೆಂಕಟೇಶ್‌ ಬೆಂಗಳೂರು (30), ಬಿಲ್ಲೇ ಪಾಳ್ಯ ಬಸವರಾಜು (25), ನಾಗರಾಜು (20) ಬಿಲ್ಲೇಪಾಳ್ಯ ಬಂಧಿತ ಆರೋಪಿಗಳು.

ಶಿರಾ ಡಿವೈಎಸ್‌ಪಿ ಎಲ್.ಕುಮಾರಪ್ಪ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು ಸದರಿ ತಂಡವು 13 ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಿದೆ. ಕೊಲೆಯನ್ನು ಏಳು ಜನರು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರು ಜನರು ಕೊಲೆಗೆ ಸಹಕರಿಸಿದ್ದಾರೆ. ಆರೋಪಿಗಳಲ್ಲಿ  ಆರು ಜನ ಆರೋಪಿಗಳು ಗುಬ್ಬಿ ಟೌನ್‌ ವಾಸಿಗಳಾಗಿದ್ದು ಇಬ್ಬರು ಮಂಡ್ಯ ವಾಸಿಗಳು, ಇಬ್ಬರು ಮೈಸೂರು ವಾಸಿಗಳು, ಇಬ್ಬರು ರಾಮನಗರ ಮತ್ತು ಒಬ್ಬ ಬೆಂಗಳೂರು ನಗರ ವಾಸಿಯಾಗಿರುವುದಾಗಿ ಎಸ್‌ಪಿ ಮಾಹಿತಿ ನೀಡಿದ್ದಾರೆ..

ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್‌, ಡಿವೈಎಸ್‌ಪಿ ಎಲ್‌.ಕುಮಾರಪ್ಪ, ಅಧಿಕಾರಿಗಳಾದ ರವಿಕುಮಾರ್‌, ಎಫ್‌.ಕೆ.ನದಾಫ್‌, ಅವಿನಾಶ್‌, ಸಿಬ್ಬಂದಿ ಶಾಂತರಾಜು, ಸೈಮನ್‌, ವಿಕ್ಟರ್‌, ಇನಾಯತ್‌, ರಮೇಶ್‌, ಮಹೇಶ್‌, ಗೋಪಿನಾಥ, ಮಂಜುನಾಥ್‌ಸ್ವಾಮಿ, ನವೀನ್‌, ಮಾರುತೇಶ್‌, ಫಾರೂಖ್, ಗಿರೀಶ್‌ ಶ್ರಮವಹಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ ಸಲ್ಲಿಸಿದ್ದಾರೆ.

ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಕೆಲವು ವಾರಗಳ ಹಿಂದೆ ಇಬ್ಬರು ದಲಿತ ಯುವಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಘಟನೆಗಳ ಬೆನ್ನಲ್ಲೇ ಕುರಿಮೂರ್ತಿಯವರ ಕೊಲೆ ನಡೆದಿದ್ದು ಆತಂಕ ಸೃಷ್ಟಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಪೆದ್ದನಹಳ್ಳಿ ಪ್ರಕರಣ

ಪೆದ್ದನಹಳ್ಳಿಯಲ್ಲಿ ಗ್ರಾಮದಲ್ಲಿ ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿ ಗ್ರಾಮದ ಗಿರೀಶ್ (ಮಾದಿಗ ಸಮುದಾಯ), ಮಂಚಲದೊರೆ ಗ್ರಾಮದ ಗಿರೀಶ್‌ (ನಾಯಕ ಸಮುದಾಯ) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸವರ್ಣೀಯರನ್ನು ಬಂಧಿಸಲಾಗಿದೆ. (ಪೆದ್ದನಹಳ್ಳಿ ಪ್ರಕರಣ ಕುರಿತು ಓದಿರಿ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!)

ತುಮಕೂರು: ಮತ್ತೊಂದು ಕೊಲೆ ಪ್ರಕರಣ

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿತ್ತು. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗಿದ್ದರು. ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆಂದೇ ಬಿಂಬಿಸಲಾಗಿತ್ತು. ಆದರೆ ಮೇ 17ರಂದು ಎಸ್‌.ಸಿ. ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಸವರ್ಣೀಯ ವ್ಯಕ್ತಿಯನ್ನು ಆರೋಪಿ ಎಂದು ಗುರುತಿಸಲಾಗಿದೆ. (ಸಂಪೂರ್ಣ ಸುದ್ದಿ ಇಲ್ಲಿ ಓದಿರಿಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....