Homeಕರ್ನಾಟಕಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ದಲಿತ ಮುಖಂಡ ನರಸಿಂಹಮೂರ್ತಿ (ಕುರಿ ಮೂರ್ತಿ) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸರು 13 ಜನರನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ಅಧಿಕ್ಷಕ ರಾಹುಲ್‌ ಶಹಾಪುರ್‌ವಾಡ್‌ ತಿಳಿಸಿದ್ದಾರೆ.

ಜೂನ್‌ 15ರ ಬುಧವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಗುಬ್ಬಿ ಪಟ್ಟಣದ ಹೆದ್ದಾರಿ ಬದಿಯ ಅಂಗಡಿಯ ಬಳಿ ಟೀ ಕುಡಿಯುತ್ತ ಕುಳಿತ್ತಿದ್ದ ನರಸಿಂಹಮೂರ್ತಿಯವರನ್ನು ಏಳು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಹತ್ಯೆಗೆ ಸಂಬಂಧ ಕನಕಪುರದ ಹಾರೋಹಳ್ಳಿ ಸಮೀಪದ ಫಾರಂಹೌಸ್‌ನಲ್ಲಿ ಅಡಗಿದ್ದ 13 ಆರೋಪಿಗಳನ್ನು ಶುಕ್ರವಾರ ಮುಂಜಾನೆ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಟ್ಟೂರು ಹಾಗೂ ಗುಬ್ಬಿ ಹೊಸಳ್ಳಿಯ ಎರಡು ಜಮೀನು ವಿವಾದ ಹಾಗೂ ಹಿಂದಿನ ಕೆಲವು ಪ್ರಕರಣಗಳ ವೈಮನಸ್ಸುಗಳು ಕೊಲೆಗೆ ಕಾರಣ ಎಂದು ಪ್ರಾಥಮಿಕ ಹಂತದ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಎಸ್‌ಪಿ ತಿಳಿಸಿದ್ದು, “ಪೂರ್ಣ ಪ್ರಮಾಣದ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್‌ ವಶಕ್ಕೆ ಪಡೆಯಲಾಗಿದೆ” ಎಂದಿದ್ದಾರೆ.

ಗುಬ್ಬಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 143, 147, 148, 302, ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

ಗುಬ್ಬಿ ಹೊಸಹಳ್ಳಿಯ ಎಚ್.ಸಿ.ಕಿರಣ್‌ ಬಿನ್‌ ರಾಜಣ್ಣ (33 ವರ್ಷ), ಮಂಡ್ಯ ತಾಲ್ಲೂಕಿನ ರಾಜ ಅಲಿಯಾಸ್‌ ಕ್ಯಾಟ್ ರಾಜ (35),  ಪಾಂಡವಪುರದ ಮಂಜು ಅಲಿಯಾಸ್ ಮ್ಯಾಕ್ಷಿ (30), ಬಿಡದಿ ಬಳಿಯ ಅಭಿಷೇಕ್‌ ಅಲಿಯಾಸ್‌ ಕರಿಯ (30), ಗುಬ್ಬಿ ಪಟ್ಟಣದ ನಯಾಜ್ ಬಿನ್‌ ವಜೀರ್‌ (25), ಮೈಸೂರಿನ ವೆಂಕಟೇಶ್‌ (32) ಕೆಂಗೇರಿಯ ಕೀರ್ತಿ (23), ಬಿಡದಿ ಸಮೀಪದ ಚಂದ್ರಶೇಖರ್‌ ಎಚ್‌.ಎಸ್‌. ಅಲಿಯಾಸ್ ಚಂದು (29), ಗುಬ್ಬಿಯ ಭರತ್‌‌ ಕೆ.ಎನ್‌. (24), ಧೀರಜ್‌ ಜಿ.ಕೆ. (32), ವೆಂಕಟೇಶ್‌ ಬೆಂಗಳೂರು (30), ಬಿಲ್ಲೇ ಪಾಳ್ಯ ಬಸವರಾಜು (25), ನಾಗರಾಜು (20) ಬಿಲ್ಲೇಪಾಳ್ಯ ಬಂಧಿತ ಆರೋಪಿಗಳು.

ಶಿರಾ ಡಿವೈಎಸ್‌ಪಿ ಎಲ್.ಕುಮಾರಪ್ಪ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು ಸದರಿ ತಂಡವು 13 ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಿದೆ. ಕೊಲೆಯನ್ನು ಏಳು ಜನರು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರು ಜನರು ಕೊಲೆಗೆ ಸಹಕರಿಸಿದ್ದಾರೆ. ಆರೋಪಿಗಳಲ್ಲಿ  ಆರು ಜನ ಆರೋಪಿಗಳು ಗುಬ್ಬಿ ಟೌನ್‌ ವಾಸಿಗಳಾಗಿದ್ದು ಇಬ್ಬರು ಮಂಡ್ಯ ವಾಸಿಗಳು, ಇಬ್ಬರು ಮೈಸೂರು ವಾಸಿಗಳು, ಇಬ್ಬರು ರಾಮನಗರ ಮತ್ತು ಒಬ್ಬ ಬೆಂಗಳೂರು ನಗರ ವಾಸಿಯಾಗಿರುವುದಾಗಿ ಎಸ್‌ಪಿ ಮಾಹಿತಿ ನೀಡಿದ್ದಾರೆ..

ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್‌, ಡಿವೈಎಸ್‌ಪಿ ಎಲ್‌.ಕುಮಾರಪ್ಪ, ಅಧಿಕಾರಿಗಳಾದ ರವಿಕುಮಾರ್‌, ಎಫ್‌.ಕೆ.ನದಾಫ್‌, ಅವಿನಾಶ್‌, ಸಿಬ್ಬಂದಿ ಶಾಂತರಾಜು, ಸೈಮನ್‌, ವಿಕ್ಟರ್‌, ಇನಾಯತ್‌, ರಮೇಶ್‌, ಮಹೇಶ್‌, ಗೋಪಿನಾಥ, ಮಂಜುನಾಥ್‌ಸ್ವಾಮಿ, ನವೀನ್‌, ಮಾರುತೇಶ್‌, ಫಾರೂಖ್, ಗಿರೀಶ್‌ ಶ್ರಮವಹಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ ಸಲ್ಲಿಸಿದ್ದಾರೆ.

ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಕೆಲವು ವಾರಗಳ ಹಿಂದೆ ಇಬ್ಬರು ದಲಿತ ಯುವಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಘಟನೆಗಳ ಬೆನ್ನಲ್ಲೇ ಕುರಿಮೂರ್ತಿಯವರ ಕೊಲೆ ನಡೆದಿದ್ದು ಆತಂಕ ಸೃಷ್ಟಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಪೆದ್ದನಹಳ್ಳಿ ಪ್ರಕರಣ

ಪೆದ್ದನಹಳ್ಳಿಯಲ್ಲಿ ಗ್ರಾಮದಲ್ಲಿ ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿ ಗ್ರಾಮದ ಗಿರೀಶ್ (ಮಾದಿಗ ಸಮುದಾಯ), ಮಂಚಲದೊರೆ ಗ್ರಾಮದ ಗಿರೀಶ್‌ (ನಾಯಕ ಸಮುದಾಯ) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸವರ್ಣೀಯರನ್ನು ಬಂಧಿಸಲಾಗಿದೆ. (ಪೆದ್ದನಹಳ್ಳಿ ಪ್ರಕರಣ ಕುರಿತು ಓದಿರಿ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!)

ತುಮಕೂರು: ಮತ್ತೊಂದು ಕೊಲೆ ಪ್ರಕರಣ

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿತ್ತು. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗಿದ್ದರು. ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆಂದೇ ಬಿಂಬಿಸಲಾಗಿತ್ತು. ಆದರೆ ಮೇ 17ರಂದು ಎಸ್‌.ಸಿ. ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಸವರ್ಣೀಯ ವ್ಯಕ್ತಿಯನ್ನು ಆರೋಪಿ ಎಂದು ಗುರುತಿಸಲಾಗಿದೆ. (ಸಂಪೂರ್ಣ ಸುದ್ದಿ ಇಲ್ಲಿ ಓದಿರಿಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...