Homeಕರ್ನಾಟಕಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ದಲಿತ ಮುಖಂಡ ನರಸಿಂಹಮೂರ್ತಿ (ಕುರಿ ಮೂರ್ತಿ) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸರು 13 ಜನರನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ಅಧಿಕ್ಷಕ ರಾಹುಲ್‌ ಶಹಾಪುರ್‌ವಾಡ್‌ ತಿಳಿಸಿದ್ದಾರೆ.

ಜೂನ್‌ 15ರ ಬುಧವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಗುಬ್ಬಿ ಪಟ್ಟಣದ ಹೆದ್ದಾರಿ ಬದಿಯ ಅಂಗಡಿಯ ಬಳಿ ಟೀ ಕುಡಿಯುತ್ತ ಕುಳಿತ್ತಿದ್ದ ನರಸಿಂಹಮೂರ್ತಿಯವರನ್ನು ಏಳು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಹತ್ಯೆಗೆ ಸಂಬಂಧ ಕನಕಪುರದ ಹಾರೋಹಳ್ಳಿ ಸಮೀಪದ ಫಾರಂಹೌಸ್‌ನಲ್ಲಿ ಅಡಗಿದ್ದ 13 ಆರೋಪಿಗಳನ್ನು ಶುಕ್ರವಾರ ಮುಂಜಾನೆ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಟ್ಟೂರು ಹಾಗೂ ಗುಬ್ಬಿ ಹೊಸಳ್ಳಿಯ ಎರಡು ಜಮೀನು ವಿವಾದ ಹಾಗೂ ಹಿಂದಿನ ಕೆಲವು ಪ್ರಕರಣಗಳ ವೈಮನಸ್ಸುಗಳು ಕೊಲೆಗೆ ಕಾರಣ ಎಂದು ಪ್ರಾಥಮಿಕ ಹಂತದ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಎಸ್‌ಪಿ ತಿಳಿಸಿದ್ದು, “ಪೂರ್ಣ ಪ್ರಮಾಣದ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್‌ ವಶಕ್ಕೆ ಪಡೆಯಲಾಗಿದೆ” ಎಂದಿದ್ದಾರೆ.

ಗುಬ್ಬಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 143, 147, 148, 302, ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

ಗುಬ್ಬಿ ಹೊಸಹಳ್ಳಿಯ ಎಚ್.ಸಿ.ಕಿರಣ್‌ ಬಿನ್‌ ರಾಜಣ್ಣ (33 ವರ್ಷ), ಮಂಡ್ಯ ತಾಲ್ಲೂಕಿನ ರಾಜ ಅಲಿಯಾಸ್‌ ಕ್ಯಾಟ್ ರಾಜ (35),  ಪಾಂಡವಪುರದ ಮಂಜು ಅಲಿಯಾಸ್ ಮ್ಯಾಕ್ಷಿ (30), ಬಿಡದಿ ಬಳಿಯ ಅಭಿಷೇಕ್‌ ಅಲಿಯಾಸ್‌ ಕರಿಯ (30), ಗುಬ್ಬಿ ಪಟ್ಟಣದ ನಯಾಜ್ ಬಿನ್‌ ವಜೀರ್‌ (25), ಮೈಸೂರಿನ ವೆಂಕಟೇಶ್‌ (32) ಕೆಂಗೇರಿಯ ಕೀರ್ತಿ (23), ಬಿಡದಿ ಸಮೀಪದ ಚಂದ್ರಶೇಖರ್‌ ಎಚ್‌.ಎಸ್‌. ಅಲಿಯಾಸ್ ಚಂದು (29), ಗುಬ್ಬಿಯ ಭರತ್‌‌ ಕೆ.ಎನ್‌. (24), ಧೀರಜ್‌ ಜಿ.ಕೆ. (32), ವೆಂಕಟೇಶ್‌ ಬೆಂಗಳೂರು (30), ಬಿಲ್ಲೇ ಪಾಳ್ಯ ಬಸವರಾಜು (25), ನಾಗರಾಜು (20) ಬಿಲ್ಲೇಪಾಳ್ಯ ಬಂಧಿತ ಆರೋಪಿಗಳು.

ಶಿರಾ ಡಿವೈಎಸ್‌ಪಿ ಎಲ್.ಕುಮಾರಪ್ಪ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು ಸದರಿ ತಂಡವು 13 ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಿದೆ. ಕೊಲೆಯನ್ನು ಏಳು ಜನರು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರು ಜನರು ಕೊಲೆಗೆ ಸಹಕರಿಸಿದ್ದಾರೆ. ಆರೋಪಿಗಳಲ್ಲಿ  ಆರು ಜನ ಆರೋಪಿಗಳು ಗುಬ್ಬಿ ಟೌನ್‌ ವಾಸಿಗಳಾಗಿದ್ದು ಇಬ್ಬರು ಮಂಡ್ಯ ವಾಸಿಗಳು, ಇಬ್ಬರು ಮೈಸೂರು ವಾಸಿಗಳು, ಇಬ್ಬರು ರಾಮನಗರ ಮತ್ತು ಒಬ್ಬ ಬೆಂಗಳೂರು ನಗರ ವಾಸಿಯಾಗಿರುವುದಾಗಿ ಎಸ್‌ಪಿ ಮಾಹಿತಿ ನೀಡಿದ್ದಾರೆ..

ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್‌, ಡಿವೈಎಸ್‌ಪಿ ಎಲ್‌.ಕುಮಾರಪ್ಪ, ಅಧಿಕಾರಿಗಳಾದ ರವಿಕುಮಾರ್‌, ಎಫ್‌.ಕೆ.ನದಾಫ್‌, ಅವಿನಾಶ್‌, ಸಿಬ್ಬಂದಿ ಶಾಂತರಾಜು, ಸೈಮನ್‌, ವಿಕ್ಟರ್‌, ಇನಾಯತ್‌, ರಮೇಶ್‌, ಮಹೇಶ್‌, ಗೋಪಿನಾಥ, ಮಂಜುನಾಥ್‌ಸ್ವಾಮಿ, ನವೀನ್‌, ಮಾರುತೇಶ್‌, ಫಾರೂಖ್, ಗಿರೀಶ್‌ ಶ್ರಮವಹಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ ಸಲ್ಲಿಸಿದ್ದಾರೆ.

ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಕೆಲವು ವಾರಗಳ ಹಿಂದೆ ಇಬ್ಬರು ದಲಿತ ಯುವಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಘಟನೆಗಳ ಬೆನ್ನಲ್ಲೇ ಕುರಿಮೂರ್ತಿಯವರ ಕೊಲೆ ನಡೆದಿದ್ದು ಆತಂಕ ಸೃಷ್ಟಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಪೆದ್ದನಹಳ್ಳಿ ಪ್ರಕರಣ

ಪೆದ್ದನಹಳ್ಳಿಯಲ್ಲಿ ಗ್ರಾಮದಲ್ಲಿ ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿ ಗ್ರಾಮದ ಗಿರೀಶ್ (ಮಾದಿಗ ಸಮುದಾಯ), ಮಂಚಲದೊರೆ ಗ್ರಾಮದ ಗಿರೀಶ್‌ (ನಾಯಕ ಸಮುದಾಯ) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸವರ್ಣೀಯರನ್ನು ಬಂಧಿಸಲಾಗಿದೆ. (ಪೆದ್ದನಹಳ್ಳಿ ಪ್ರಕರಣ ಕುರಿತು ಓದಿರಿ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!)

ತುಮಕೂರು: ಮತ್ತೊಂದು ಕೊಲೆ ಪ್ರಕರಣ

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿತ್ತು. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗಿದ್ದರು. ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆಂದೇ ಬಿಂಬಿಸಲಾಗಿತ್ತು. ಆದರೆ ಮೇ 17ರಂದು ಎಸ್‌.ಸಿ. ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಸವರ್ಣೀಯ ವ್ಯಕ್ತಿಯನ್ನು ಆರೋಪಿ ಎಂದು ಗುರುತಿಸಲಾಗಿದೆ. (ಸಂಪೂರ್ಣ ಸುದ್ದಿ ಇಲ್ಲಿ ಓದಿರಿಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...