Homeಮುಖಪುಟಒಪಿಎಸ್ ವ್ಯಾಪ್ತಿಗೆ 13 ಸಾವಿರ ಸರ್ಕಾರಿ ನೌಕರರು; ರಾಜ್ಯ ಸರ್ಕಾರದಿಂದ ಆದೇಶ

ಒಪಿಎಸ್ ವ್ಯಾಪ್ತಿಗೆ 13 ಸಾವಿರ ಸರ್ಕಾರಿ ನೌಕರರು; ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

2006ರ ಏಪ್ರಿಲ್ 1ಕ್ಕಿಂತ ಮೊದಲು ನೇಮಕಗೊಂಡ ಸುಮಾರು 13,000 ಉದ್ಯೋಗಿಗಳನ್ನು ಹಳೆಯ ಪಿಂಚಣಿ ಯೋಜನೆಯ (ಒಪಿಎಸ್) ವ್ಯಾಪ್ತಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

‘2006 ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ‘ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ’ ಎಂದು ಹೇಳಿದ್ದಾರೆ.

ಆದೇಶದಲ್ಲಿ ಏನಿದೆ?

01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊ೦ದಿ, ದಿನಾ೦ಕ: 01.04.2006ರ೦ದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿ೦ದ ನೂತನ ಪಿಂಚಣಿ ಯೋಜನೆಯ (ರಾಷ್ಟ್ರೀಯ ಪಿ೦ಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಳಕ೦ಡ ಷರತ್ತುಗಳಿಗೊಳಪಟ್ಟು, ಒ೦ದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್ ಪಿ೦ಚಣಿ ಯೋಜನೆಯ ವ್ಯಾಪ್ತಿಗೊಳಡಿಸಲು ಒಪ್ಪಿಗೆ ನೀಡಿದೆ.

ದಿನಾ೦ಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊ೦ದಿ, ಆ ದಿನಾಂಕದ೦ದು ಅಥವಾ ತದನ೦ತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿ೦ದಿನ ಡಿಫೈನ್ ಪಿ೦ಚಣಿ ಯೋಜನೆಗೆ ಒಳಪಡಲು ಇಚ್ಚಿಸಿದಲ್ಲಿ, ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾ೦ಕ: 30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒ೦ದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಒ೦ದು ಬಾರಿ ಮಾಡಿಕೊ೦ಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಮೇಲಿನ ಒಂದರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾ೦ಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿ೦ಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ. ನೌಕರರ ಆಯ್ಕೆಗನುಸಾರ, ಅವರು ತಮ್ಮ ಹಿ೦ದಿನ ಡಿಫೈನ್ಡ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊ೦ದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊ೦ಡು ದಿನಾಂಕ: 31.07.2024 ರೊಳಗಾಗಿ ಅ೦ತಹ ನೌಕರರನ್ನು ಹಿ೦ದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊ೦ದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು. ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ಟೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಹಿ೦ದಿನ ಡಿಫೈನ್ಡ್ ಪಿ೦ಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾ೦ಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು ಎಂದು ಹೇಳಿದೆ.

ದಿನಾ೦ಕ: 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ, ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನ೦ತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ, ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು, ತಮ್ಮ ಹಿ೦ದಿನ ಡಿಫೈನ್ಡ್ ಪಿ೦ಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ, ಮನವಿಯನ್ನು ಹಿ೦ದಿನ ನೇಮಕಾತಿ ಪಾಧಿಕಾರಕ್ಕೆ ದಿನಾ೦ಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು.

ನೇಮಕಾತಿ ಪ್ರಾಧಿಕಾರವು ಅ೦ತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ, ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿ ಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊ೦ದಿರುವುದನ್ನು ಖಚಿತಪಡಿಸಿಕೊ೦ಡು, ಮೇಲಿನ ಕ್ರಮ ಸ೦ಖ್ಯೆ 4 ರಂತೆ ಪರಿಶೀಲಿಸಿ, ಮೇಲಿನ ಕ್ರಮ ಸ೦ಖ್ಯೆ 5 ರಂತೆ ಮು೦ದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ; ನನಗೆ ಹಿಂದಿ ಬರಲ್ಲ, ಕ್ರಿಮಿನಲ್ ಕಾನೂನುಗಳನ್ನು ಹಳೆಯ ಹೆಸರಿನಿಂದಲೇ ಉಲ್ಲೇಖಿಸುತ್ತೇನೆ: ನ್ಯಾ. ಆನಂದ್ ವೆಂಕಟೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...