Homeಮುಖಪುಟಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸತತ ಏಳನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಇಂದು ಬೆಳಿಗ್ಗೆ ಧ್ವಜಾರೋಹಣ ಮಾಡಿದರು.ಕೊರೋನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಈ ಆಚರಣೆ ನಡೆಯುತ್ತಿರುವುದರಿಂದ ಕಟ್ಟುನಿಟ್ಟಾದ ಸಾಮಾಜಿಕ ಅಂತರ ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ.

ಪ್ರಧಾನಿ ಮೋದಿಯವರು ಎರಡನೇ ಅವಧಿ ಗೆದ್ದ ನಂತರ ಅವರ ಎರಡನೇ ಸ್ವಾತಂತ್ರ್ಯ ದಿನಾಚರಣೆ ಇದು. ಇಂದಿನ ಮೋದಿಯವರ ಭಾಷಣದ ಪ್ರಮುಖಾಂಶಗಳು ಇಲ್ಲಿವೆ;

  1. ಭಾರತವು ಶತಮಾನಗಳ ವಿದೇಶಿ ಆಡಳಿತವನ್ನು ಎದುರಿಸಿ ಸ್ವಾತಂತ್ರ್ಯ ಪಡೆದಿದೆ. ನಮ್ಮ ರಾಷ್ಟ್ರ, ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯಗಳನ್ನು ನಾಶಮಾಡಲು ಎಲ್ಲಾ ಪ್ರಯತ್ನಗಳು ನಡೆದವು. ಆದರೆ ಅವು ನಮ್ಮ ಆತ್ಮನಂಬಿಕೆ ಮತ್ತು ದೃಢನಿಶ್ಚಯದ ಕುರಿತು ಕಡಿಮೆ ಅಂದಾಜು ಮಾಡಿದ್ದವು. ಹಾಗಾಗಿಯೇ ನಾವು ಬದುಕಿದ್ದೇವೆ ಮತ್ತು ವಿಜಯಶಾಲಿಗಳೂ ಆಗಿದ್ದೇವೆ.
  2. ತಮ್ಮ ಧ್ವಜಗಳನ್ನು ಹಾರಿಸಲು ಹೊಸ ಸ್ಥಳಗಳನ್ನು ಹುಡುಕುವಲ್ಲಿ ನಿರತರಾಗಿದ್ದವರು, ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಲು ಬಯಸಿದವರು ನಮ್ಮನ್ನು ಕಡಿಮೆ ಅಂದಾಜು ಮಾಡಿದ್ದಾರೆ. ಪ್ರಪಂಚವು ಎರಡು ವಿಶ್ವ ಯುದ್ಧಗಳನ್ನು ಕಂಡಿತು. ಅನೇಕ ರಾಷ್ಟ್ರಗಳು ಅಪಾರ ವಿನಾಶವನ್ನು ಎದುರಿಸಿದವು, ಆದರೆ ನಾವು ಈ ಎಲ್ಲದರಿಂದ ಗೆದ್ದು ಬಂದಿದ್ದೇವೆ. ನಮ್ಮ ಅಪ್ರತಿಮ ಸ್ವಾತಂತ್ರ್ಯ ಹೋರಾಟವನ್ನು ಜಗತ್ತು ನೋಡಿದೆ.
  3. ಇಂದು, ಭಾರತವು ಮೂರು ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿದೆ. ಇದು ಪ್ರಯೋಗಗಳ ವಿವಿಧ ಹಂತಗಳಲ್ಲಿದೆ. ಅಂತಿಮ ಅನುಮತಿಯನ್ನು ಪಡೆಯಲು ಸಿದ್ಧವಾದ ನಂತರ, ಅದರ ವಿತರಣೆಗಾಗಿ ನಾವು ಮಾರ್ಗಸೂಚಿಯನ್ನು ಪ್ರಕಟಿಸುತ್ತೇವೆ.
  4. ಆತ್ಮ ನಿರ್ಭರ್ (ಸ್ವಾವಲಂಬಿ) ಆಗಲು ಭಾರತಕ್ಕೆ ಲಕ್ಷಾಂತರ ಸವಾಲುಗಳಿವೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅದು ನಿಜವೂ ಹೌದು. ಪ್ರಪಂಚದ ಇತರ ಭಾಗಗಳಿಂದ ತೀವ್ರ ಸ್ಪರ್ಧೆ ಇದೆ. ಆದರೆ ನಾನು ಯಾವಾಗಲೂ ಹೇಳುವುದೇನೆಂದರೆ, ಭಾರತವು ಲಕ್ಷಾಂತರ ಸವಾಲುಗಳನ್ನು ಎದುರಿಸಲು ಅದು 130 ಕೋಟಿ ಪರಿಹಾರಗಳನ್ನು ಹೊಂದಿದೆ ಎಂದು.
  5. ಮೊದಲೇ ಹೇಳಿದಂತೆ, ರೈತರ ಆದಾಯವನ್ನು ದ್ವಿಗುಣಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮಲ್ಲಿ ಕೆಲವರಿಗೆ ಇದು ತಿಳಿದಿಲ್ಲದಿರಬಹುದು. ಆದರೆ ಬೇರೆ ಯಾವುದೇ ವ್ಯವಹಾರಕ್ಕಿಂತ ಭಿನ್ನವಾಗಿ, ಒಬ್ಬ ಉದ್ಯಮಿ ತಮ್ಮ ಉತ್ಪನ್ನ ಅಥವಾ ಸೇವೆಯನ್ನು ದೇಶದ ಅಥವಾ ಪ್ರಪಂಚದ ಯಾವುದೇ ಭಾಗದಲ್ಲಿ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಹೊಂದಿದ್ದಾನೆ. ಅದೂ ಅವರು ಬಯಸುವ ಬೆಲೆಗೆ. ನಮ್ಮ ರೈತರಿಗೆ ಇಲ್ಲಿಯವರೆಗೆ ಆ ಸ್ವಾತಂತ್ರ್ಯ ಇರಲಿಲ್ಲ. ಅವರು, ಮಾರಾಟ ಮಾಡಲು ಹೇಳಿದವರಿಗೆ ಮಾತ್ರ ಮಾರಾಟ ಮಾಡಬಹುದಿತ್ತು. ಈಗ, ನಾವು ಈ ನಿರ್ಬಂಧಗಳನ್ನು ತೆಗೆದುಹಾಕಿದ್ದೇವೆ ಮತ್ತು ರೈತರಿಗೆ ಉತ್ತಮ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ನೀಡಿದ್ದೇವೆ.
  6. ಸಾಂಕ್ರಾಮಿಕ ರೋಗದ ಮಧ್ಯೆ ರಾಷ್ಟ್ರ ಸೇವೆ ಮಾಡಲು ದಣಿವರಿಯದೇ ಕೆಲಸ ಮಾಡಿದ ಎಲ್ಲಾ ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ದಾದಿಯರಿಗೆ ಇಡೀ ರಾಷ್ಟ್ರದ ಪರವಾಗಿ, ಎಲ್ಲಾ ಕರೋನಾ-ಯೋಧರ ಪ್ರಯತ್ನಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದರಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ರಾಷ್ಟ್ರ ಅವರಿಗೆ ನಮಸ್ಕರಿಸುತ್ತದೆ.
  7. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಿದಾಗ, ಏನು ಬೇಕಾದರೂ ಸಾಧಿಸಬಹುದು ಎಂದು ನಂಬಿದ್ದೇವೆ. ನಾವು ಎಂದಿಗೂ ಪಿಪಿಇ ಕಿಟ್‌ಗಳನ್ನು ತಯಾರಿಸಲಿಲ್ಲ. ಮಾಸ್ಕ್ ಮತ್ತು ವೆಂಟಿಲೇಟರ್‌ಗಳ ಉತ್ಪಾದನೆಯು ಅಲ್ಪವಾಗಿತ್ತು. ಆದರೆ ಇಂದು ನಾವು ಎಲ್ಲವನ್ನೂ ತಯಾರಿಸುತ್ತಿದ್ದೇವೆ.
  8. ನಾವು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಂತೆ, ನಮ್ಮ ಪ್ರಮುಖ ಮೈಲಿಗಲ್ಲನ್ನು ಎದುರು ನೋಡುತ್ತಿದ್ದೇವೆ. ಇದು ನಮ್ಮ ಸ್ವಾತಂತ್ರ್ಯದ 75 ನೇ ವರ್ಷ. ನಾವು ಆ ಮೈಲಿಗಲ್ಲನ್ನು ತಲುಪಿದಾಗ, ಅದನ್ನು ಅದ್ದೂರಿಯಾಗಿ ಆಚರಿಸುತ್ತೇವೆ.
  9. ಇಂದು, ನಾವು ಭಾರತವನ್ನು ಅತೀ ಎತ್ತರಕ್ಕೆ ಕೊಂಡೊಯ್ಯಲು, ಹೊಸ ಭಾರತವನ್ನು ನಿರ್ಮಿಸಲು, ಆತ್ಮ ನಿರ್ಭಾರ್ (ಸ್ವಾವಲಂಬಿ) ಭಾರತವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಖಂಡಿತವಾಗಿಯೂ ಇದನ್ನು ಸಾಧಿಸುತ್ತದೆ. ಭಾರತವು ಏನನ್ನಾದರೂ ಸಾಧಿಸಲು ದೃಢನಿಶ್ಚಯಿಸಿದಾಗ ಅದು ಸಾಧ್ಯವಾಗಿದೆ ಎಂಬುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ. ಸ್ವಾವಲಂಬಿ ಭಾರತ ಈಗ 130 ಕೋಟಿ ಭಾರತೀಯರ ಮಂತ್ರವಾಗಿದೆ.
  10. ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ. ಭಾರತವು ಈಗ ತಾನು ಅನುಭೋಗಿಸುವ ಎಲ್ಲವನ್ನೂ ತಯಾರಿಸಬೇಕು. ಜೊತೆಗೆ ನಾವು ಬೆಳೆದಂತೆ ಜಗತ್ತಿಗೆ ರಫ್ತು ಮಾಡಬೇಕು.

ಇದನ್ನೂ ಓದಿ: ಕೋವಿಡ್‌ನಿಂದ ಸ್ವಾತಂತ್ರ್ಯ: ಆಗಸ್ಟ್ 15 ರಂದು ಪಣತೊಡಲು ಮೋದಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...