Homeಮುಖಪುಟಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸತತ ಏಳನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಇಂದು ಬೆಳಿಗ್ಗೆ ಧ್ವಜಾರೋಹಣ ಮಾಡಿದರು.ಕೊರೋನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಈ ಆಚರಣೆ ನಡೆಯುತ್ತಿರುವುದರಿಂದ ಕಟ್ಟುನಿಟ್ಟಾದ ಸಾಮಾಜಿಕ ಅಂತರ ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ.

ಪ್ರಧಾನಿ ಮೋದಿಯವರು ಎರಡನೇ ಅವಧಿ ಗೆದ್ದ ನಂತರ ಅವರ ಎರಡನೇ ಸ್ವಾತಂತ್ರ್ಯ ದಿನಾಚರಣೆ ಇದು. ಇಂದಿನ ಮೋದಿಯವರ ಭಾಷಣದ ಪ್ರಮುಖಾಂಶಗಳು ಇಲ್ಲಿವೆ;

  1. ಭಾರತವು ಶತಮಾನಗಳ ವಿದೇಶಿ ಆಡಳಿತವನ್ನು ಎದುರಿಸಿ ಸ್ವಾತಂತ್ರ್ಯ ಪಡೆದಿದೆ. ನಮ್ಮ ರಾಷ್ಟ್ರ, ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯಗಳನ್ನು ನಾಶಮಾಡಲು ಎಲ್ಲಾ ಪ್ರಯತ್ನಗಳು ನಡೆದವು. ಆದರೆ ಅವು ನಮ್ಮ ಆತ್ಮನಂಬಿಕೆ ಮತ್ತು ದೃಢನಿಶ್ಚಯದ ಕುರಿತು ಕಡಿಮೆ ಅಂದಾಜು ಮಾಡಿದ್ದವು. ಹಾಗಾಗಿಯೇ ನಾವು ಬದುಕಿದ್ದೇವೆ ಮತ್ತು ವಿಜಯಶಾಲಿಗಳೂ ಆಗಿದ್ದೇವೆ.
  2. ತಮ್ಮ ಧ್ವಜಗಳನ್ನು ಹಾರಿಸಲು ಹೊಸ ಸ್ಥಳಗಳನ್ನು ಹುಡುಕುವಲ್ಲಿ ನಿರತರಾಗಿದ್ದವರು, ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಲು ಬಯಸಿದವರು ನಮ್ಮನ್ನು ಕಡಿಮೆ ಅಂದಾಜು ಮಾಡಿದ್ದಾರೆ. ಪ್ರಪಂಚವು ಎರಡು ವಿಶ್ವ ಯುದ್ಧಗಳನ್ನು ಕಂಡಿತು. ಅನೇಕ ರಾಷ್ಟ್ರಗಳು ಅಪಾರ ವಿನಾಶವನ್ನು ಎದುರಿಸಿದವು, ಆದರೆ ನಾವು ಈ ಎಲ್ಲದರಿಂದ ಗೆದ್ದು ಬಂದಿದ್ದೇವೆ. ನಮ್ಮ ಅಪ್ರತಿಮ ಸ್ವಾತಂತ್ರ್ಯ ಹೋರಾಟವನ್ನು ಜಗತ್ತು ನೋಡಿದೆ.
  3. ಇಂದು, ಭಾರತವು ಮೂರು ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿದೆ. ಇದು ಪ್ರಯೋಗಗಳ ವಿವಿಧ ಹಂತಗಳಲ್ಲಿದೆ. ಅಂತಿಮ ಅನುಮತಿಯನ್ನು ಪಡೆಯಲು ಸಿದ್ಧವಾದ ನಂತರ, ಅದರ ವಿತರಣೆಗಾಗಿ ನಾವು ಮಾರ್ಗಸೂಚಿಯನ್ನು ಪ್ರಕಟಿಸುತ್ತೇವೆ.
  4. ಆತ್ಮ ನಿರ್ಭರ್ (ಸ್ವಾವಲಂಬಿ) ಆಗಲು ಭಾರತಕ್ಕೆ ಲಕ್ಷಾಂತರ ಸವಾಲುಗಳಿವೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅದು ನಿಜವೂ ಹೌದು. ಪ್ರಪಂಚದ ಇತರ ಭಾಗಗಳಿಂದ ತೀವ್ರ ಸ್ಪರ್ಧೆ ಇದೆ. ಆದರೆ ನಾನು ಯಾವಾಗಲೂ ಹೇಳುವುದೇನೆಂದರೆ, ಭಾರತವು ಲಕ್ಷಾಂತರ ಸವಾಲುಗಳನ್ನು ಎದುರಿಸಲು ಅದು 130 ಕೋಟಿ ಪರಿಹಾರಗಳನ್ನು ಹೊಂದಿದೆ ಎಂದು.
  5. ಮೊದಲೇ ಹೇಳಿದಂತೆ, ರೈತರ ಆದಾಯವನ್ನು ದ್ವಿಗುಣಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮಲ್ಲಿ ಕೆಲವರಿಗೆ ಇದು ತಿಳಿದಿಲ್ಲದಿರಬಹುದು. ಆದರೆ ಬೇರೆ ಯಾವುದೇ ವ್ಯವಹಾರಕ್ಕಿಂತ ಭಿನ್ನವಾಗಿ, ಒಬ್ಬ ಉದ್ಯಮಿ ತಮ್ಮ ಉತ್ಪನ್ನ ಅಥವಾ ಸೇವೆಯನ್ನು ದೇಶದ ಅಥವಾ ಪ್ರಪಂಚದ ಯಾವುದೇ ಭಾಗದಲ್ಲಿ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಹೊಂದಿದ್ದಾನೆ. ಅದೂ ಅವರು ಬಯಸುವ ಬೆಲೆಗೆ. ನಮ್ಮ ರೈತರಿಗೆ ಇಲ್ಲಿಯವರೆಗೆ ಆ ಸ್ವಾತಂತ್ರ್ಯ ಇರಲಿಲ್ಲ. ಅವರು, ಮಾರಾಟ ಮಾಡಲು ಹೇಳಿದವರಿಗೆ ಮಾತ್ರ ಮಾರಾಟ ಮಾಡಬಹುದಿತ್ತು. ಈಗ, ನಾವು ಈ ನಿರ್ಬಂಧಗಳನ್ನು ತೆಗೆದುಹಾಕಿದ್ದೇವೆ ಮತ್ತು ರೈತರಿಗೆ ಉತ್ತಮ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ನೀಡಿದ್ದೇವೆ.
  6. ಸಾಂಕ್ರಾಮಿಕ ರೋಗದ ಮಧ್ಯೆ ರಾಷ್ಟ್ರ ಸೇವೆ ಮಾಡಲು ದಣಿವರಿಯದೇ ಕೆಲಸ ಮಾಡಿದ ಎಲ್ಲಾ ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ದಾದಿಯರಿಗೆ ಇಡೀ ರಾಷ್ಟ್ರದ ಪರವಾಗಿ, ಎಲ್ಲಾ ಕರೋನಾ-ಯೋಧರ ಪ್ರಯತ್ನಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದರಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ರಾಷ್ಟ್ರ ಅವರಿಗೆ ನಮಸ್ಕರಿಸುತ್ತದೆ.
  7. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಿದಾಗ, ಏನು ಬೇಕಾದರೂ ಸಾಧಿಸಬಹುದು ಎಂದು ನಂಬಿದ್ದೇವೆ. ನಾವು ಎಂದಿಗೂ ಪಿಪಿಇ ಕಿಟ್‌ಗಳನ್ನು ತಯಾರಿಸಲಿಲ್ಲ. ಮಾಸ್ಕ್ ಮತ್ತು ವೆಂಟಿಲೇಟರ್‌ಗಳ ಉತ್ಪಾದನೆಯು ಅಲ್ಪವಾಗಿತ್ತು. ಆದರೆ ಇಂದು ನಾವು ಎಲ್ಲವನ್ನೂ ತಯಾರಿಸುತ್ತಿದ್ದೇವೆ.
  8. ನಾವು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಂತೆ, ನಮ್ಮ ಪ್ರಮುಖ ಮೈಲಿಗಲ್ಲನ್ನು ಎದುರು ನೋಡುತ್ತಿದ್ದೇವೆ. ಇದು ನಮ್ಮ ಸ್ವಾತಂತ್ರ್ಯದ 75 ನೇ ವರ್ಷ. ನಾವು ಆ ಮೈಲಿಗಲ್ಲನ್ನು ತಲುಪಿದಾಗ, ಅದನ್ನು ಅದ್ದೂರಿಯಾಗಿ ಆಚರಿಸುತ್ತೇವೆ.
  9. ಇಂದು, ನಾವು ಭಾರತವನ್ನು ಅತೀ ಎತ್ತರಕ್ಕೆ ಕೊಂಡೊಯ್ಯಲು, ಹೊಸ ಭಾರತವನ್ನು ನಿರ್ಮಿಸಲು, ಆತ್ಮ ನಿರ್ಭಾರ್ (ಸ್ವಾವಲಂಬಿ) ಭಾರತವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಖಂಡಿತವಾಗಿಯೂ ಇದನ್ನು ಸಾಧಿಸುತ್ತದೆ. ಭಾರತವು ಏನನ್ನಾದರೂ ಸಾಧಿಸಲು ದೃಢನಿಶ್ಚಯಿಸಿದಾಗ ಅದು ಸಾಧ್ಯವಾಗಿದೆ ಎಂಬುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ. ಸ್ವಾವಲಂಬಿ ಭಾರತ ಈಗ 130 ಕೋಟಿ ಭಾರತೀಯರ ಮಂತ್ರವಾಗಿದೆ.
  10. ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ. ಭಾರತವು ಈಗ ತಾನು ಅನುಭೋಗಿಸುವ ಎಲ್ಲವನ್ನೂ ತಯಾರಿಸಬೇಕು. ಜೊತೆಗೆ ನಾವು ಬೆಳೆದಂತೆ ಜಗತ್ತಿಗೆ ರಫ್ತು ಮಾಡಬೇಕು.

ಇದನ್ನೂ ಓದಿ: ಕೋವಿಡ್‌ನಿಂದ ಸ್ವಾತಂತ್ರ್ಯ: ಆಗಸ್ಟ್ 15 ರಂದು ಪಣತೊಡಲು ಮೋದಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...