Homeಮುಖಪುಟಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸತತ ಏಳನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಇಂದು ಬೆಳಿಗ್ಗೆ ಧ್ವಜಾರೋಹಣ ಮಾಡಿದರು.ಕೊರೋನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಈ ಆಚರಣೆ ನಡೆಯುತ್ತಿರುವುದರಿಂದ ಕಟ್ಟುನಿಟ್ಟಾದ ಸಾಮಾಜಿಕ ಅಂತರ ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ.

ಪ್ರಧಾನಿ ಮೋದಿಯವರು ಎರಡನೇ ಅವಧಿ ಗೆದ್ದ ನಂತರ ಅವರ ಎರಡನೇ ಸ್ವಾತಂತ್ರ್ಯ ದಿನಾಚರಣೆ ಇದು. ಇಂದಿನ ಮೋದಿಯವರ ಭಾಷಣದ ಪ್ರಮುಖಾಂಶಗಳು ಇಲ್ಲಿವೆ;

  1. ಭಾರತವು ಶತಮಾನಗಳ ವಿದೇಶಿ ಆಡಳಿತವನ್ನು ಎದುರಿಸಿ ಸ್ವಾತಂತ್ರ್ಯ ಪಡೆದಿದೆ. ನಮ್ಮ ರಾಷ್ಟ್ರ, ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯಗಳನ್ನು ನಾಶಮಾಡಲು ಎಲ್ಲಾ ಪ್ರಯತ್ನಗಳು ನಡೆದವು. ಆದರೆ ಅವು ನಮ್ಮ ಆತ್ಮನಂಬಿಕೆ ಮತ್ತು ದೃಢನಿಶ್ಚಯದ ಕುರಿತು ಕಡಿಮೆ ಅಂದಾಜು ಮಾಡಿದ್ದವು. ಹಾಗಾಗಿಯೇ ನಾವು ಬದುಕಿದ್ದೇವೆ ಮತ್ತು ವಿಜಯಶಾಲಿಗಳೂ ಆಗಿದ್ದೇವೆ.
  2. ತಮ್ಮ ಧ್ವಜಗಳನ್ನು ಹಾರಿಸಲು ಹೊಸ ಸ್ಥಳಗಳನ್ನು ಹುಡುಕುವಲ್ಲಿ ನಿರತರಾಗಿದ್ದವರು, ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಲು ಬಯಸಿದವರು ನಮ್ಮನ್ನು ಕಡಿಮೆ ಅಂದಾಜು ಮಾಡಿದ್ದಾರೆ. ಪ್ರಪಂಚವು ಎರಡು ವಿಶ್ವ ಯುದ್ಧಗಳನ್ನು ಕಂಡಿತು. ಅನೇಕ ರಾಷ್ಟ್ರಗಳು ಅಪಾರ ವಿನಾಶವನ್ನು ಎದುರಿಸಿದವು, ಆದರೆ ನಾವು ಈ ಎಲ್ಲದರಿಂದ ಗೆದ್ದು ಬಂದಿದ್ದೇವೆ. ನಮ್ಮ ಅಪ್ರತಿಮ ಸ್ವಾತಂತ್ರ್ಯ ಹೋರಾಟವನ್ನು ಜಗತ್ತು ನೋಡಿದೆ.
  3. ಇಂದು, ಭಾರತವು ಮೂರು ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿದೆ. ಇದು ಪ್ರಯೋಗಗಳ ವಿವಿಧ ಹಂತಗಳಲ್ಲಿದೆ. ಅಂತಿಮ ಅನುಮತಿಯನ್ನು ಪಡೆಯಲು ಸಿದ್ಧವಾದ ನಂತರ, ಅದರ ವಿತರಣೆಗಾಗಿ ನಾವು ಮಾರ್ಗಸೂಚಿಯನ್ನು ಪ್ರಕಟಿಸುತ್ತೇವೆ.
  4. ಆತ್ಮ ನಿರ್ಭರ್ (ಸ್ವಾವಲಂಬಿ) ಆಗಲು ಭಾರತಕ್ಕೆ ಲಕ್ಷಾಂತರ ಸವಾಲುಗಳಿವೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅದು ನಿಜವೂ ಹೌದು. ಪ್ರಪಂಚದ ಇತರ ಭಾಗಗಳಿಂದ ತೀವ್ರ ಸ್ಪರ್ಧೆ ಇದೆ. ಆದರೆ ನಾನು ಯಾವಾಗಲೂ ಹೇಳುವುದೇನೆಂದರೆ, ಭಾರತವು ಲಕ್ಷಾಂತರ ಸವಾಲುಗಳನ್ನು ಎದುರಿಸಲು ಅದು 130 ಕೋಟಿ ಪರಿಹಾರಗಳನ್ನು ಹೊಂದಿದೆ ಎಂದು.
  5. ಮೊದಲೇ ಹೇಳಿದಂತೆ, ರೈತರ ಆದಾಯವನ್ನು ದ್ವಿಗುಣಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮಲ್ಲಿ ಕೆಲವರಿಗೆ ಇದು ತಿಳಿದಿಲ್ಲದಿರಬಹುದು. ಆದರೆ ಬೇರೆ ಯಾವುದೇ ವ್ಯವಹಾರಕ್ಕಿಂತ ಭಿನ್ನವಾಗಿ, ಒಬ್ಬ ಉದ್ಯಮಿ ತಮ್ಮ ಉತ್ಪನ್ನ ಅಥವಾ ಸೇವೆಯನ್ನು ದೇಶದ ಅಥವಾ ಪ್ರಪಂಚದ ಯಾವುದೇ ಭಾಗದಲ್ಲಿ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಹೊಂದಿದ್ದಾನೆ. ಅದೂ ಅವರು ಬಯಸುವ ಬೆಲೆಗೆ. ನಮ್ಮ ರೈತರಿಗೆ ಇಲ್ಲಿಯವರೆಗೆ ಆ ಸ್ವಾತಂತ್ರ್ಯ ಇರಲಿಲ್ಲ. ಅವರು, ಮಾರಾಟ ಮಾಡಲು ಹೇಳಿದವರಿಗೆ ಮಾತ್ರ ಮಾರಾಟ ಮಾಡಬಹುದಿತ್ತು. ಈಗ, ನಾವು ಈ ನಿರ್ಬಂಧಗಳನ್ನು ತೆಗೆದುಹಾಕಿದ್ದೇವೆ ಮತ್ತು ರೈತರಿಗೆ ಉತ್ತಮ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ನೀಡಿದ್ದೇವೆ.
  6. ಸಾಂಕ್ರಾಮಿಕ ರೋಗದ ಮಧ್ಯೆ ರಾಷ್ಟ್ರ ಸೇವೆ ಮಾಡಲು ದಣಿವರಿಯದೇ ಕೆಲಸ ಮಾಡಿದ ಎಲ್ಲಾ ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ದಾದಿಯರಿಗೆ ಇಡೀ ರಾಷ್ಟ್ರದ ಪರವಾಗಿ, ಎಲ್ಲಾ ಕರೋನಾ-ಯೋಧರ ಪ್ರಯತ್ನಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದರಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ರಾಷ್ಟ್ರ ಅವರಿಗೆ ನಮಸ್ಕರಿಸುತ್ತದೆ.
  7. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಿದಾಗ, ಏನು ಬೇಕಾದರೂ ಸಾಧಿಸಬಹುದು ಎಂದು ನಂಬಿದ್ದೇವೆ. ನಾವು ಎಂದಿಗೂ ಪಿಪಿಇ ಕಿಟ್‌ಗಳನ್ನು ತಯಾರಿಸಲಿಲ್ಲ. ಮಾಸ್ಕ್ ಮತ್ತು ವೆಂಟಿಲೇಟರ್‌ಗಳ ಉತ್ಪಾದನೆಯು ಅಲ್ಪವಾಗಿತ್ತು. ಆದರೆ ಇಂದು ನಾವು ಎಲ್ಲವನ್ನೂ ತಯಾರಿಸುತ್ತಿದ್ದೇವೆ.
  8. ನಾವು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಂತೆ, ನಮ್ಮ ಪ್ರಮುಖ ಮೈಲಿಗಲ್ಲನ್ನು ಎದುರು ನೋಡುತ್ತಿದ್ದೇವೆ. ಇದು ನಮ್ಮ ಸ್ವಾತಂತ್ರ್ಯದ 75 ನೇ ವರ್ಷ. ನಾವು ಆ ಮೈಲಿಗಲ್ಲನ್ನು ತಲುಪಿದಾಗ, ಅದನ್ನು ಅದ್ದೂರಿಯಾಗಿ ಆಚರಿಸುತ್ತೇವೆ.
  9. ಇಂದು, ನಾವು ಭಾರತವನ್ನು ಅತೀ ಎತ್ತರಕ್ಕೆ ಕೊಂಡೊಯ್ಯಲು, ಹೊಸ ಭಾರತವನ್ನು ನಿರ್ಮಿಸಲು, ಆತ್ಮ ನಿರ್ಭಾರ್ (ಸ್ವಾವಲಂಬಿ) ಭಾರತವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಖಂಡಿತವಾಗಿಯೂ ಇದನ್ನು ಸಾಧಿಸುತ್ತದೆ. ಭಾರತವು ಏನನ್ನಾದರೂ ಸಾಧಿಸಲು ದೃಢನಿಶ್ಚಯಿಸಿದಾಗ ಅದು ಸಾಧ್ಯವಾಗಿದೆ ಎಂಬುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ. ಸ್ವಾವಲಂಬಿ ಭಾರತ ಈಗ 130 ಕೋಟಿ ಭಾರತೀಯರ ಮಂತ್ರವಾಗಿದೆ.
  10. ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ. ಭಾರತವು ಈಗ ತಾನು ಅನುಭೋಗಿಸುವ ಎಲ್ಲವನ್ನೂ ತಯಾರಿಸಬೇಕು. ಜೊತೆಗೆ ನಾವು ಬೆಳೆದಂತೆ ಜಗತ್ತಿಗೆ ರಫ್ತು ಮಾಡಬೇಕು.

ಇದನ್ನೂ ಓದಿ: ಕೋವಿಡ್‌ನಿಂದ ಸ್ವಾತಂತ್ರ್ಯ: ಆಗಸ್ಟ್ 15 ರಂದು ಪಣತೊಡಲು ಮೋದಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...