Homeಮುಖಪುಟಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸತತ ಏಳನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಇಂದು ಬೆಳಿಗ್ಗೆ ಧ್ವಜಾರೋಹಣ ಮಾಡಿದರು.ಕೊರೋನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಈ ಆಚರಣೆ ನಡೆಯುತ್ತಿರುವುದರಿಂದ ಕಟ್ಟುನಿಟ್ಟಾದ ಸಾಮಾಜಿಕ ಅಂತರ ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ.

ಪ್ರಧಾನಿ ಮೋದಿಯವರು ಎರಡನೇ ಅವಧಿ ಗೆದ್ದ ನಂತರ ಅವರ ಎರಡನೇ ಸ್ವಾತಂತ್ರ್ಯ ದಿನಾಚರಣೆ ಇದು. ಇಂದಿನ ಮೋದಿಯವರ ಭಾಷಣದ ಪ್ರಮುಖಾಂಶಗಳು ಇಲ್ಲಿವೆ;

  1. ಭಾರತವು ಶತಮಾನಗಳ ವಿದೇಶಿ ಆಡಳಿತವನ್ನು ಎದುರಿಸಿ ಸ್ವಾತಂತ್ರ್ಯ ಪಡೆದಿದೆ. ನಮ್ಮ ರಾಷ್ಟ್ರ, ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯಗಳನ್ನು ನಾಶಮಾಡಲು ಎಲ್ಲಾ ಪ್ರಯತ್ನಗಳು ನಡೆದವು. ಆದರೆ ಅವು ನಮ್ಮ ಆತ್ಮನಂಬಿಕೆ ಮತ್ತು ದೃಢನಿಶ್ಚಯದ ಕುರಿತು ಕಡಿಮೆ ಅಂದಾಜು ಮಾಡಿದ್ದವು. ಹಾಗಾಗಿಯೇ ನಾವು ಬದುಕಿದ್ದೇವೆ ಮತ್ತು ವಿಜಯಶಾಲಿಗಳೂ ಆಗಿದ್ದೇವೆ.
  2. ತಮ್ಮ ಧ್ವಜಗಳನ್ನು ಹಾರಿಸಲು ಹೊಸ ಸ್ಥಳಗಳನ್ನು ಹುಡುಕುವಲ್ಲಿ ನಿರತರಾಗಿದ್ದವರು, ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಲು ಬಯಸಿದವರು ನಮ್ಮನ್ನು ಕಡಿಮೆ ಅಂದಾಜು ಮಾಡಿದ್ದಾರೆ. ಪ್ರಪಂಚವು ಎರಡು ವಿಶ್ವ ಯುದ್ಧಗಳನ್ನು ಕಂಡಿತು. ಅನೇಕ ರಾಷ್ಟ್ರಗಳು ಅಪಾರ ವಿನಾಶವನ್ನು ಎದುರಿಸಿದವು, ಆದರೆ ನಾವು ಈ ಎಲ್ಲದರಿಂದ ಗೆದ್ದು ಬಂದಿದ್ದೇವೆ. ನಮ್ಮ ಅಪ್ರತಿಮ ಸ್ವಾತಂತ್ರ್ಯ ಹೋರಾಟವನ್ನು ಜಗತ್ತು ನೋಡಿದೆ.
  3. ಇಂದು, ಭಾರತವು ಮೂರು ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿದೆ. ಇದು ಪ್ರಯೋಗಗಳ ವಿವಿಧ ಹಂತಗಳಲ್ಲಿದೆ. ಅಂತಿಮ ಅನುಮತಿಯನ್ನು ಪಡೆಯಲು ಸಿದ್ಧವಾದ ನಂತರ, ಅದರ ವಿತರಣೆಗಾಗಿ ನಾವು ಮಾರ್ಗಸೂಚಿಯನ್ನು ಪ್ರಕಟಿಸುತ್ತೇವೆ.
  4. ಆತ್ಮ ನಿರ್ಭರ್ (ಸ್ವಾವಲಂಬಿ) ಆಗಲು ಭಾರತಕ್ಕೆ ಲಕ್ಷಾಂತರ ಸವಾಲುಗಳಿವೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅದು ನಿಜವೂ ಹೌದು. ಪ್ರಪಂಚದ ಇತರ ಭಾಗಗಳಿಂದ ತೀವ್ರ ಸ್ಪರ್ಧೆ ಇದೆ. ಆದರೆ ನಾನು ಯಾವಾಗಲೂ ಹೇಳುವುದೇನೆಂದರೆ, ಭಾರತವು ಲಕ್ಷಾಂತರ ಸವಾಲುಗಳನ್ನು ಎದುರಿಸಲು ಅದು 130 ಕೋಟಿ ಪರಿಹಾರಗಳನ್ನು ಹೊಂದಿದೆ ಎಂದು.
  5. ಮೊದಲೇ ಹೇಳಿದಂತೆ, ರೈತರ ಆದಾಯವನ್ನು ದ್ವಿಗುಣಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮಲ್ಲಿ ಕೆಲವರಿಗೆ ಇದು ತಿಳಿದಿಲ್ಲದಿರಬಹುದು. ಆದರೆ ಬೇರೆ ಯಾವುದೇ ವ್ಯವಹಾರಕ್ಕಿಂತ ಭಿನ್ನವಾಗಿ, ಒಬ್ಬ ಉದ್ಯಮಿ ತಮ್ಮ ಉತ್ಪನ್ನ ಅಥವಾ ಸೇವೆಯನ್ನು ದೇಶದ ಅಥವಾ ಪ್ರಪಂಚದ ಯಾವುದೇ ಭಾಗದಲ್ಲಿ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಹೊಂದಿದ್ದಾನೆ. ಅದೂ ಅವರು ಬಯಸುವ ಬೆಲೆಗೆ. ನಮ್ಮ ರೈತರಿಗೆ ಇಲ್ಲಿಯವರೆಗೆ ಆ ಸ್ವಾತಂತ್ರ್ಯ ಇರಲಿಲ್ಲ. ಅವರು, ಮಾರಾಟ ಮಾಡಲು ಹೇಳಿದವರಿಗೆ ಮಾತ್ರ ಮಾರಾಟ ಮಾಡಬಹುದಿತ್ತು. ಈಗ, ನಾವು ಈ ನಿರ್ಬಂಧಗಳನ್ನು ತೆಗೆದುಹಾಕಿದ್ದೇವೆ ಮತ್ತು ರೈತರಿಗೆ ಉತ್ತಮ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ನೀಡಿದ್ದೇವೆ.
  6. ಸಾಂಕ್ರಾಮಿಕ ರೋಗದ ಮಧ್ಯೆ ರಾಷ್ಟ್ರ ಸೇವೆ ಮಾಡಲು ದಣಿವರಿಯದೇ ಕೆಲಸ ಮಾಡಿದ ಎಲ್ಲಾ ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ದಾದಿಯರಿಗೆ ಇಡೀ ರಾಷ್ಟ್ರದ ಪರವಾಗಿ, ಎಲ್ಲಾ ಕರೋನಾ-ಯೋಧರ ಪ್ರಯತ್ನಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದರಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ರಾಷ್ಟ್ರ ಅವರಿಗೆ ನಮಸ್ಕರಿಸುತ್ತದೆ.
  7. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಿದಾಗ, ಏನು ಬೇಕಾದರೂ ಸಾಧಿಸಬಹುದು ಎಂದು ನಂಬಿದ್ದೇವೆ. ನಾವು ಎಂದಿಗೂ ಪಿಪಿಇ ಕಿಟ್‌ಗಳನ್ನು ತಯಾರಿಸಲಿಲ್ಲ. ಮಾಸ್ಕ್ ಮತ್ತು ವೆಂಟಿಲೇಟರ್‌ಗಳ ಉತ್ಪಾದನೆಯು ಅಲ್ಪವಾಗಿತ್ತು. ಆದರೆ ಇಂದು ನಾವು ಎಲ್ಲವನ್ನೂ ತಯಾರಿಸುತ್ತಿದ್ದೇವೆ.
  8. ನಾವು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಂತೆ, ನಮ್ಮ ಪ್ರಮುಖ ಮೈಲಿಗಲ್ಲನ್ನು ಎದುರು ನೋಡುತ್ತಿದ್ದೇವೆ. ಇದು ನಮ್ಮ ಸ್ವಾತಂತ್ರ್ಯದ 75 ನೇ ವರ್ಷ. ನಾವು ಆ ಮೈಲಿಗಲ್ಲನ್ನು ತಲುಪಿದಾಗ, ಅದನ್ನು ಅದ್ದೂರಿಯಾಗಿ ಆಚರಿಸುತ್ತೇವೆ.
  9. ಇಂದು, ನಾವು ಭಾರತವನ್ನು ಅತೀ ಎತ್ತರಕ್ಕೆ ಕೊಂಡೊಯ್ಯಲು, ಹೊಸ ಭಾರತವನ್ನು ನಿರ್ಮಿಸಲು, ಆತ್ಮ ನಿರ್ಭಾರ್ (ಸ್ವಾವಲಂಬಿ) ಭಾರತವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಖಂಡಿತವಾಗಿಯೂ ಇದನ್ನು ಸಾಧಿಸುತ್ತದೆ. ಭಾರತವು ಏನನ್ನಾದರೂ ಸಾಧಿಸಲು ದೃಢನಿಶ್ಚಯಿಸಿದಾಗ ಅದು ಸಾಧ್ಯವಾಗಿದೆ ಎಂಬುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ. ಸ್ವಾವಲಂಬಿ ಭಾರತ ಈಗ 130 ಕೋಟಿ ಭಾರತೀಯರ ಮಂತ್ರವಾಗಿದೆ.
  10. ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ. ಭಾರತವು ಈಗ ತಾನು ಅನುಭೋಗಿಸುವ ಎಲ್ಲವನ್ನೂ ತಯಾರಿಸಬೇಕು. ಜೊತೆಗೆ ನಾವು ಬೆಳೆದಂತೆ ಜಗತ್ತಿಗೆ ರಫ್ತು ಮಾಡಬೇಕು.

ಇದನ್ನೂ ಓದಿ: ಕೋವಿಡ್‌ನಿಂದ ಸ್ವಾತಂತ್ರ್ಯ: ಆಗಸ್ಟ್ 15 ರಂದು ಪಣತೊಡಲು ಮೋದಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...