Homeಮುಖಪುಟಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸತತ ಏಳನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಇಂದು ಬೆಳಿಗ್ಗೆ ಧ್ವಜಾರೋಹಣ ಮಾಡಿದರು.ಕೊರೋನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಈ ಆಚರಣೆ ನಡೆಯುತ್ತಿರುವುದರಿಂದ ಕಟ್ಟುನಿಟ್ಟಾದ ಸಾಮಾಜಿಕ ಅಂತರ ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ.

ಪ್ರಧಾನಿ ಮೋದಿಯವರು ಎರಡನೇ ಅವಧಿ ಗೆದ್ದ ನಂತರ ಅವರ ಎರಡನೇ ಸ್ವಾತಂತ್ರ್ಯ ದಿನಾಚರಣೆ ಇದು. ಇಂದಿನ ಮೋದಿಯವರ ಭಾಷಣದ ಪ್ರಮುಖಾಂಶಗಳು ಇಲ್ಲಿವೆ;

  1. ಭಾರತವು ಶತಮಾನಗಳ ವಿದೇಶಿ ಆಡಳಿತವನ್ನು ಎದುರಿಸಿ ಸ್ವಾತಂತ್ರ್ಯ ಪಡೆದಿದೆ. ನಮ್ಮ ರಾಷ್ಟ್ರ, ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯಗಳನ್ನು ನಾಶಮಾಡಲು ಎಲ್ಲಾ ಪ್ರಯತ್ನಗಳು ನಡೆದವು. ಆದರೆ ಅವು ನಮ್ಮ ಆತ್ಮನಂಬಿಕೆ ಮತ್ತು ದೃಢನಿಶ್ಚಯದ ಕುರಿತು ಕಡಿಮೆ ಅಂದಾಜು ಮಾಡಿದ್ದವು. ಹಾಗಾಗಿಯೇ ನಾವು ಬದುಕಿದ್ದೇವೆ ಮತ್ತು ವಿಜಯಶಾಲಿಗಳೂ ಆಗಿದ್ದೇವೆ.
  2. ತಮ್ಮ ಧ್ವಜಗಳನ್ನು ಹಾರಿಸಲು ಹೊಸ ಸ್ಥಳಗಳನ್ನು ಹುಡುಕುವಲ್ಲಿ ನಿರತರಾಗಿದ್ದವರು, ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಲು ಬಯಸಿದವರು ನಮ್ಮನ್ನು ಕಡಿಮೆ ಅಂದಾಜು ಮಾಡಿದ್ದಾರೆ. ಪ್ರಪಂಚವು ಎರಡು ವಿಶ್ವ ಯುದ್ಧಗಳನ್ನು ಕಂಡಿತು. ಅನೇಕ ರಾಷ್ಟ್ರಗಳು ಅಪಾರ ವಿನಾಶವನ್ನು ಎದುರಿಸಿದವು, ಆದರೆ ನಾವು ಈ ಎಲ್ಲದರಿಂದ ಗೆದ್ದು ಬಂದಿದ್ದೇವೆ. ನಮ್ಮ ಅಪ್ರತಿಮ ಸ್ವಾತಂತ್ರ್ಯ ಹೋರಾಟವನ್ನು ಜಗತ್ತು ನೋಡಿದೆ.
  3. ಇಂದು, ಭಾರತವು ಮೂರು ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿದೆ. ಇದು ಪ್ರಯೋಗಗಳ ವಿವಿಧ ಹಂತಗಳಲ್ಲಿದೆ. ಅಂತಿಮ ಅನುಮತಿಯನ್ನು ಪಡೆಯಲು ಸಿದ್ಧವಾದ ನಂತರ, ಅದರ ವಿತರಣೆಗಾಗಿ ನಾವು ಮಾರ್ಗಸೂಚಿಯನ್ನು ಪ್ರಕಟಿಸುತ್ತೇವೆ.
  4. ಆತ್ಮ ನಿರ್ಭರ್ (ಸ್ವಾವಲಂಬಿ) ಆಗಲು ಭಾರತಕ್ಕೆ ಲಕ್ಷಾಂತರ ಸವಾಲುಗಳಿವೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅದು ನಿಜವೂ ಹೌದು. ಪ್ರಪಂಚದ ಇತರ ಭಾಗಗಳಿಂದ ತೀವ್ರ ಸ್ಪರ್ಧೆ ಇದೆ. ಆದರೆ ನಾನು ಯಾವಾಗಲೂ ಹೇಳುವುದೇನೆಂದರೆ, ಭಾರತವು ಲಕ್ಷಾಂತರ ಸವಾಲುಗಳನ್ನು ಎದುರಿಸಲು ಅದು 130 ಕೋಟಿ ಪರಿಹಾರಗಳನ್ನು ಹೊಂದಿದೆ ಎಂದು.
  5. ಮೊದಲೇ ಹೇಳಿದಂತೆ, ರೈತರ ಆದಾಯವನ್ನು ದ್ವಿಗುಣಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮಲ್ಲಿ ಕೆಲವರಿಗೆ ಇದು ತಿಳಿದಿಲ್ಲದಿರಬಹುದು. ಆದರೆ ಬೇರೆ ಯಾವುದೇ ವ್ಯವಹಾರಕ್ಕಿಂತ ಭಿನ್ನವಾಗಿ, ಒಬ್ಬ ಉದ್ಯಮಿ ತಮ್ಮ ಉತ್ಪನ್ನ ಅಥವಾ ಸೇವೆಯನ್ನು ದೇಶದ ಅಥವಾ ಪ್ರಪಂಚದ ಯಾವುದೇ ಭಾಗದಲ್ಲಿ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಹೊಂದಿದ್ದಾನೆ. ಅದೂ ಅವರು ಬಯಸುವ ಬೆಲೆಗೆ. ನಮ್ಮ ರೈತರಿಗೆ ಇಲ್ಲಿಯವರೆಗೆ ಆ ಸ್ವಾತಂತ್ರ್ಯ ಇರಲಿಲ್ಲ. ಅವರು, ಮಾರಾಟ ಮಾಡಲು ಹೇಳಿದವರಿಗೆ ಮಾತ್ರ ಮಾರಾಟ ಮಾಡಬಹುದಿತ್ತು. ಈಗ, ನಾವು ಈ ನಿರ್ಬಂಧಗಳನ್ನು ತೆಗೆದುಹಾಕಿದ್ದೇವೆ ಮತ್ತು ರೈತರಿಗೆ ಉತ್ತಮ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ನೀಡಿದ್ದೇವೆ.
  6. ಸಾಂಕ್ರಾಮಿಕ ರೋಗದ ಮಧ್ಯೆ ರಾಷ್ಟ್ರ ಸೇವೆ ಮಾಡಲು ದಣಿವರಿಯದೇ ಕೆಲಸ ಮಾಡಿದ ಎಲ್ಲಾ ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ದಾದಿಯರಿಗೆ ಇಡೀ ರಾಷ್ಟ್ರದ ಪರವಾಗಿ, ಎಲ್ಲಾ ಕರೋನಾ-ಯೋಧರ ಪ್ರಯತ್ನಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದರಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ರಾಷ್ಟ್ರ ಅವರಿಗೆ ನಮಸ್ಕರಿಸುತ್ತದೆ.
  7. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಿದಾಗ, ಏನು ಬೇಕಾದರೂ ಸಾಧಿಸಬಹುದು ಎಂದು ನಂಬಿದ್ದೇವೆ. ನಾವು ಎಂದಿಗೂ ಪಿಪಿಇ ಕಿಟ್‌ಗಳನ್ನು ತಯಾರಿಸಲಿಲ್ಲ. ಮಾಸ್ಕ್ ಮತ್ತು ವೆಂಟಿಲೇಟರ್‌ಗಳ ಉತ್ಪಾದನೆಯು ಅಲ್ಪವಾಗಿತ್ತು. ಆದರೆ ಇಂದು ನಾವು ಎಲ್ಲವನ್ನೂ ತಯಾರಿಸುತ್ತಿದ್ದೇವೆ.
  8. ನಾವು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಂತೆ, ನಮ್ಮ ಪ್ರಮುಖ ಮೈಲಿಗಲ್ಲನ್ನು ಎದುರು ನೋಡುತ್ತಿದ್ದೇವೆ. ಇದು ನಮ್ಮ ಸ್ವಾತಂತ್ರ್ಯದ 75 ನೇ ವರ್ಷ. ನಾವು ಆ ಮೈಲಿಗಲ್ಲನ್ನು ತಲುಪಿದಾಗ, ಅದನ್ನು ಅದ್ದೂರಿಯಾಗಿ ಆಚರಿಸುತ್ತೇವೆ.
  9. ಇಂದು, ನಾವು ಭಾರತವನ್ನು ಅತೀ ಎತ್ತರಕ್ಕೆ ಕೊಂಡೊಯ್ಯಲು, ಹೊಸ ಭಾರತವನ್ನು ನಿರ್ಮಿಸಲು, ಆತ್ಮ ನಿರ್ಭಾರ್ (ಸ್ವಾವಲಂಬಿ) ಭಾರತವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಖಂಡಿತವಾಗಿಯೂ ಇದನ್ನು ಸಾಧಿಸುತ್ತದೆ. ಭಾರತವು ಏನನ್ನಾದರೂ ಸಾಧಿಸಲು ದೃಢನಿಶ್ಚಯಿಸಿದಾಗ ಅದು ಸಾಧ್ಯವಾಗಿದೆ ಎಂಬುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ. ಸ್ವಾವಲಂಬಿ ಭಾರತ ಈಗ 130 ಕೋಟಿ ಭಾರತೀಯರ ಮಂತ್ರವಾಗಿದೆ.
  10. ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ. ಭಾರತವು ಈಗ ತಾನು ಅನುಭೋಗಿಸುವ ಎಲ್ಲವನ್ನೂ ತಯಾರಿಸಬೇಕು. ಜೊತೆಗೆ ನಾವು ಬೆಳೆದಂತೆ ಜಗತ್ತಿಗೆ ರಫ್ತು ಮಾಡಬೇಕು.

ಇದನ್ನೂ ಓದಿ: ಕೋವಿಡ್‌ನಿಂದ ಸ್ವಾತಂತ್ರ್ಯ: ಆಗಸ್ಟ್ 15 ರಂದು ಪಣತೊಡಲು ಮೋದಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...