Homeಅಂತರಾಷ್ಟ್ರೀಯ130 ಪರಮಾಣು ಸಿಡಿತಲೆಗಳು, ಕ್ಷಿಪಣಿಗಳು ಭಾರತದ ವಿರುದ್ಧ ಸಿದ್ಧವಾಗಿ ನಿಂತಿದೆ: ಪಾಕ್ ಸಚಿವ ಬೆದರಿಕೆ

130 ಪರಮಾಣು ಸಿಡಿತಲೆಗಳು, ಕ್ಷಿಪಣಿಗಳು ಭಾರತದ ವಿರುದ್ಧ ಸಿದ್ಧವಾಗಿ ನಿಂತಿದೆ: ಪಾಕ್ ಸಚಿವ ಬೆದರಿಕೆ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಪಾಕಿಸ್ತಾನದ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದಾರೆ. ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಸೇರಿದಂತೆ ಪಾಕಿಸ್ತಾನದ ಕ್ಷಿಪಣಿ ಶಸ್ತ್ರಾಸ್ತ್ರಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು “ಭಾರತಕ್ಕಾಗಿ ಮಾತ್ರ” ಮೀಸಲಿಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ಇತ್ತೀಚಿನ ನಿರ್ಧಾರಕ್ಕೆ ಪ್ರತಿಕ್ರಿಯೆಯಾಗಿ ಅಬ್ಬಾಸಿ ಈ ಬೆದರಿಕೆ ಹಾಕಿದ್ದಾರೆ.

ಭಾರತವು ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ನಿರ್ಧರಿಸಿದರೆ, ಅದು “ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ಧವಾಗಬೇಕು” ಎಂದು ಅಬ್ಬಾಸಿ ಬಹಿರಂಗವಾಗಿ ಘೋಷಿಸಿದ್ದಾರೆ. ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು ಕೇವಲ ಸಾಂಕೇತಿಕವಾಗಿ ಇರುವುದಲ್ಲ, ಬದಲಾಗಿ ದೇಶಾದ್ಯಂತ ಅವುಗಳನ್ನು ಇರಿಸಲಾಗಿದ್ದು, ಬಳಸಲು ಸಿದ್ಧವಾಗಿವೆ ಎಂದು ಹೇಳಿದ್ದಾರೆ.

“ಅವರು ನಮಗೆ ನೀರು ಸರಬರಾಜನ್ನು ನಿಲ್ಲಿಸಿದರೆ, ಅವರು ಯುದ್ಧಕ್ಕೆ ಸಿದ್ಧರಾಗಿರಬೇಕು. ನಮ್ಮಲ್ಲಿರುವ ಮಿಲಿಟರಿ ಉಪಕರಣಗಳು, ನಮ್ಮಲ್ಲಿರುವ ಕ್ಷಿಪಣಿಗಳು, ಅವು ಪ್ರದರ್ಶನಕ್ಕಾಗಿ ಇಟ್ಟಿರುವುದಲ್ಲ. ನಾವು ದೇಶಾದ್ಯಂತ ನಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಎಲ್ಲಿ ಇರಿಸಿದ್ದೇವೆ ಎಂದು ಯಾರಿಗೂ ತಿಳಿದಿಲ್ಲ. ನಾನು ಮತ್ತೊಮ್ಮೆ ಹೇಳುತ್ತೇನೆ, ಈ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಅವೆಲ್ಲದರ ಗುರಿಯು ನಿಮ್ಮ ಮೇಲೆಯಾಗಿದೆ” ಎಂದು ಅವರು ಎಚ್ಚರಿಸಿದ್ದಾರೆ.

1960 ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು ಮತ್ತು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾಗಳನ್ನು ರದ್ದುಗೊಳಿಸುವುದು ಸೇರಿದಂತೆ ಪಹಲ್ಗಾಮ್ ದುರಂತ ದಾಳಿಗೆ ಭಾರತವು ಪ್ರತಿಕ್ರಮಗಳನ್ನು ತೆಗೆದುಕೊಂಡ ನಂತರ ಅಬ್ಬಾಸಿ ಈ ತೀಕ್ಷ್ಣ ಹೇಳಿಕೆ ನೀಡಿದ್ದಾರೆ. ಭಾರತದ ನಿರ್ಧಾರವನ್ನು ಅಪಹಾಸ್ಯ ಮಾಡಿದ ಸಚಿವ ಅಬ್ಬಾಸಿ, ಭಾರತವು ತನ್ನ ಕ್ರಮಗಳ ಪರಿಣಾಮಗಳನ್ನು ಅರಿತುಕೊಳ್ಳಲು ಪ್ರಾರಂಭಿಸುತ್ತಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಉಂಟಾದ ಅಡಚಣೆಯನ್ನು ಉಲ್ಲೇಖಿಸಿದ ಅಬ್ಬಾಸಿ, ಕೇವಲ ಎರಡು ದಿನಗಳಲ್ಲಿ ಭಾರತೀಯ ವಾಯುಯಾನದಲ್ಲಿ ಅದು ಉಂಟುಮಾಡಿದ ಅವ್ಯವಸ್ಥೆಯನ್ನು ಎತ್ತಿತೋರಿಸಿದ್ದಾರೆ. “ಇನ್ನೂ 10 ದಿನಗಳ ಕಾಲ ವಿಷಯಗಳು ಹೀಗೆ ಮುಂದುವರಿದರೆ, ಭಾರತದಲ್ಲಿನ ವಿಮಾನಯಾನ ಸಂಸ್ಥೆಗಳು ದಿವಾಳಿಯಾಗುತ್ತವೆ” ಎಂದು ಹೇಳಿಕೊಂಡಿಕೊಂಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು, ತನ್ನ ಭದ್ರತಾ ಲೋಪಗಳನ್ನು ಪರಿಹರಿಸುವ ಬದಲು ಪಾಕಿಸ್ತಾನದ ಮೇಲೆ ಅವುಗಳನ್ನು ಹೊರಿಸುತ್ತಿದೆ ಎಂದು ಅಬ್ಬಾಸಿ ಟೀಕಿಸಿದ್ದಾರೆ. ಭಾರತವು ವ್ಯಾಪಾರ ಮತ್ತು ನೀರು ಸರಬರಾಜನ್ನು ಸ್ಥಗಿತಗೊಳಿಸಿದ ನಂತರದ ಸಂಭವನೀಯ ಆರ್ಥಿಕ ಪರಿಣಾಮಗಳಿಗೆ ಪಾಕಿಸ್ತಾನ ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ ಎಂದು ಅವರು ಪ್ರತಿಪಾದಿಸಿದ್ದಾರ.

ಪಾಕಿಸ್ತಾನದ ವಿರುದ್ಧ ಭಾರತ ತೆಗೆದುಕೊಂಡ ಯಾವುದೇ ಆರ್ಥಿಕ ಕ್ರಮಗಳನ್ನು ಎದುರಿಸಲು ದೇಶ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಈ ನಡುವೆ ಪಾಕಿಸ್ತಾನಿ ಸೇನೆಯು ಸತತ ಮೂರನೇ ರಾತ್ರಿಯೂ ನಿಯಂತ್ರಣ ರೇಖೆಯಾದ್ಯಂತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಮತ್ತು ಭಾರತೀಯ ಪಡೆಗಳು ಅವರಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದವು ಎಂದು ವರದಿಯಾಗಿದೆ. 130

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜನಿವಾರ ವಿವಾದ | ರಾಜ್ಯ ಸರ್ಕಾರ, ಕೆಇಎಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಜನಿವಾರ ವಿವಾದ | ರಾಜ್ಯ ಸರ್ಕಾರ, ಕೆಇಎಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...