Homeಅಂತರಾಷ್ಟ್ರೀಯ130 ಪರಮಾಣು ಸಿಡಿತಲೆಗಳು, ಕ್ಷಿಪಣಿಗಳು ಭಾರತದ ವಿರುದ್ಧ ಸಿದ್ಧವಾಗಿ ನಿಂತಿದೆ: ಪಾಕ್ ಸಚಿವ ಬೆದರಿಕೆ

130 ಪರಮಾಣು ಸಿಡಿತಲೆಗಳು, ಕ್ಷಿಪಣಿಗಳು ಭಾರತದ ವಿರುದ್ಧ ಸಿದ್ಧವಾಗಿ ನಿಂತಿದೆ: ಪಾಕ್ ಸಚಿವ ಬೆದರಿಕೆ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಪಾಕಿಸ್ತಾನದ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದಾರೆ. ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಸೇರಿದಂತೆ ಪಾಕಿಸ್ತಾನದ ಕ್ಷಿಪಣಿ ಶಸ್ತ್ರಾಸ್ತ್ರಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು “ಭಾರತಕ್ಕಾಗಿ ಮಾತ್ರ” ಮೀಸಲಿಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ಇತ್ತೀಚಿನ ನಿರ್ಧಾರಕ್ಕೆ ಪ್ರತಿಕ್ರಿಯೆಯಾಗಿ ಅಬ್ಬಾಸಿ ಈ ಬೆದರಿಕೆ ಹಾಕಿದ್ದಾರೆ.

ಭಾರತವು ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ನಿರ್ಧರಿಸಿದರೆ, ಅದು “ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ಧವಾಗಬೇಕು” ಎಂದು ಅಬ್ಬಾಸಿ ಬಹಿರಂಗವಾಗಿ ಘೋಷಿಸಿದ್ದಾರೆ. ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು ಕೇವಲ ಸಾಂಕೇತಿಕವಾಗಿ ಇರುವುದಲ್ಲ, ಬದಲಾಗಿ ದೇಶಾದ್ಯಂತ ಅವುಗಳನ್ನು ಇರಿಸಲಾಗಿದ್ದು, ಬಳಸಲು ಸಿದ್ಧವಾಗಿವೆ ಎಂದು ಹೇಳಿದ್ದಾರೆ.

“ಅವರು ನಮಗೆ ನೀರು ಸರಬರಾಜನ್ನು ನಿಲ್ಲಿಸಿದರೆ, ಅವರು ಯುದ್ಧಕ್ಕೆ ಸಿದ್ಧರಾಗಿರಬೇಕು. ನಮ್ಮಲ್ಲಿರುವ ಮಿಲಿಟರಿ ಉಪಕರಣಗಳು, ನಮ್ಮಲ್ಲಿರುವ ಕ್ಷಿಪಣಿಗಳು, ಅವು ಪ್ರದರ್ಶನಕ್ಕಾಗಿ ಇಟ್ಟಿರುವುದಲ್ಲ. ನಾವು ದೇಶಾದ್ಯಂತ ನಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಎಲ್ಲಿ ಇರಿಸಿದ್ದೇವೆ ಎಂದು ಯಾರಿಗೂ ತಿಳಿದಿಲ್ಲ. ನಾನು ಮತ್ತೊಮ್ಮೆ ಹೇಳುತ್ತೇನೆ, ಈ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಅವೆಲ್ಲದರ ಗುರಿಯು ನಿಮ್ಮ ಮೇಲೆಯಾಗಿದೆ” ಎಂದು ಅವರು ಎಚ್ಚರಿಸಿದ್ದಾರೆ.

1960 ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು ಮತ್ತು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾಗಳನ್ನು ರದ್ದುಗೊಳಿಸುವುದು ಸೇರಿದಂತೆ ಪಹಲ್ಗಾಮ್ ದುರಂತ ದಾಳಿಗೆ ಭಾರತವು ಪ್ರತಿಕ್ರಮಗಳನ್ನು ತೆಗೆದುಕೊಂಡ ನಂತರ ಅಬ್ಬಾಸಿ ಈ ತೀಕ್ಷ್ಣ ಹೇಳಿಕೆ ನೀಡಿದ್ದಾರೆ. ಭಾರತದ ನಿರ್ಧಾರವನ್ನು ಅಪಹಾಸ್ಯ ಮಾಡಿದ ಸಚಿವ ಅಬ್ಬಾಸಿ, ಭಾರತವು ತನ್ನ ಕ್ರಮಗಳ ಪರಿಣಾಮಗಳನ್ನು ಅರಿತುಕೊಳ್ಳಲು ಪ್ರಾರಂಭಿಸುತ್ತಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಉಂಟಾದ ಅಡಚಣೆಯನ್ನು ಉಲ್ಲೇಖಿಸಿದ ಅಬ್ಬಾಸಿ, ಕೇವಲ ಎರಡು ದಿನಗಳಲ್ಲಿ ಭಾರತೀಯ ವಾಯುಯಾನದಲ್ಲಿ ಅದು ಉಂಟುಮಾಡಿದ ಅವ್ಯವಸ್ಥೆಯನ್ನು ಎತ್ತಿತೋರಿಸಿದ್ದಾರೆ. “ಇನ್ನೂ 10 ದಿನಗಳ ಕಾಲ ವಿಷಯಗಳು ಹೀಗೆ ಮುಂದುವರಿದರೆ, ಭಾರತದಲ್ಲಿನ ವಿಮಾನಯಾನ ಸಂಸ್ಥೆಗಳು ದಿವಾಳಿಯಾಗುತ್ತವೆ” ಎಂದು ಹೇಳಿಕೊಂಡಿಕೊಂಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು, ತನ್ನ ಭದ್ರತಾ ಲೋಪಗಳನ್ನು ಪರಿಹರಿಸುವ ಬದಲು ಪಾಕಿಸ್ತಾನದ ಮೇಲೆ ಅವುಗಳನ್ನು ಹೊರಿಸುತ್ತಿದೆ ಎಂದು ಅಬ್ಬಾಸಿ ಟೀಕಿಸಿದ್ದಾರೆ. ಭಾರತವು ವ್ಯಾಪಾರ ಮತ್ತು ನೀರು ಸರಬರಾಜನ್ನು ಸ್ಥಗಿತಗೊಳಿಸಿದ ನಂತರದ ಸಂಭವನೀಯ ಆರ್ಥಿಕ ಪರಿಣಾಮಗಳಿಗೆ ಪಾಕಿಸ್ತಾನ ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ ಎಂದು ಅವರು ಪ್ರತಿಪಾದಿಸಿದ್ದಾರ.

ಪಾಕಿಸ್ತಾನದ ವಿರುದ್ಧ ಭಾರತ ತೆಗೆದುಕೊಂಡ ಯಾವುದೇ ಆರ್ಥಿಕ ಕ್ರಮಗಳನ್ನು ಎದುರಿಸಲು ದೇಶ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಈ ನಡುವೆ ಪಾಕಿಸ್ತಾನಿ ಸೇನೆಯು ಸತತ ಮೂರನೇ ರಾತ್ರಿಯೂ ನಿಯಂತ್ರಣ ರೇಖೆಯಾದ್ಯಂತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಮತ್ತು ಭಾರತೀಯ ಪಡೆಗಳು ಅವರಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದವು ಎಂದು ವರದಿಯಾಗಿದೆ. 130

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜನಿವಾರ ವಿವಾದ | ರಾಜ್ಯ ಸರ್ಕಾರ, ಕೆಇಎಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಜನಿವಾರ ವಿವಾದ | ರಾಜ್ಯ ಸರ್ಕಾರ, ಕೆಇಎಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...